ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಜಗತ್ತು ಎದುರಿಸುವ ಉತ್ಸಾಹವಿರಲಿ


Team Udayavani, Jan 6, 2020, 1:12 PM IST

vidyarth

ಕೆ.ಆರ್‌.ನಗರ: ಆಧುನಿಕ ಯುಗದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ತೀವ್ರ ಪೈಪೋಟಿಯಿದೆ. ಎಲ್ಲರೂ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ  ಉತ್ಸಾಹ ಹೊಂದಬೇಕು ಎಂದು ಕೆ.ಆರ್‌.ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸತೀಶ್ಚಂದ್ರ ಹೇಳಿದರು. ತಾಲೂಕಿನ ಸಾಲಿಗ್ರಾಮ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿ ಕೋತ್ಸವದಲ್ಲಿ ಮಾತನಾಡಿದರು.

ಪಠ್ಯಪುಸ್ತಕಗಳನ್ನು  ಅಭ್ಯಾಸ ಮಾಡಿ, ಗರಿಷ್ಠ ಅಂಕ ಗಳನ್ನು ಪಡೆಯುವುದರ ಜತೆಗೆ ನಾನಾ ವಲಯದ ವಿದ್ಯಮಾನಗಳ ಬಗ್ಗೆ ಸಮಗ್ರ ಅಧ್ಯಯನ ಅಗತ್ಯ ವಾಗಿದೆ. ಅಲ್ಲದೆ  ವಿದ್ಯಾರ್ಥಿ ದಿಸೆಯಲ್ಲಿಯೇ ಸಮಾಜಕ್ಕೆ ಮಾದರಿಯಾಗುವಂತಹ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.

ಅಭ್ಯಾಸ ಯೋಜನಾಬದ್ಧವಾಗಿರಲಿ: ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ, ಉತ್ತಮ ಸಾಧನೆಗೈ ಯ್ಯಬೇಕಾದರೆ ವಿದ್ಯಾರ್ಥಿಗಳು ಯೋಜನಾಬದ್ಧ ವಾಗಿ  ಸತತ ಅಭ್ಯಾಸದಲ್ಲಿ ತೊಡಗ ಬೇಕು. ಎಲ್ಲಕ್ಕಿಂತ ಮಿಗಿಲಾಗಿ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನವಾಗಿ ಮಾನವೀಯ ಮೌಲ್ಯಗಳು ರೂಪುಗೊಳ್ಳಬೇಕು. ಆಗ ಮಾತ್ರ ತಾವು ನಿರೀಕ್ಷಿಸಿದ ಗುರಿ ತಲುಪಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಉತ್ತಮ ಸಾಧನೆ ಮಾಡಿ ಮಾದರಿಯಾಗಿ: ಕಾಲೇಜು  ಪ್ರಾಂಶುಪಾಲ ಎಚ್‌.ಕೆ.ಕೃಷ್ಣಯ್ಯ ಮಾತ ನಾಡಿ, ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿ ಪಠ್ಯ ವಸ್ತುಗಳ ಅಧ್ಯಯನದಲ್ಲಿ ಮಗ್ನರಾಗಬೇಕು. ಆಗ  ಮಾತ್ರ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಇತರರಿಗೆ ಮಾದರಿಯಾಗಬಹುದು. ಅಲ್ಲದೆ ಅಂತಹ ಸಾಧನೆ ತೋರುವ ಎಲ್ಲಾ ವಿದ್ಯಾರ್ಥಿಗಳಿಗೂ ವೈಯಕ್ತಿಕವಾಗಿ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಭರವಸೆ ನೀಡಿದರು.

ಸಾಂಸ್ಕೃತಿಕ, ಕ್ರೀಡೆಯಂತಹ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳು ಲವಲಕೆಯಿಂದ  ಕಲಿಕೆಯಲ್ಲಿ ತೊಡಗಲು ಪ್ರೇರೇಪಿಸುವುದರ ಜತೆಗೆ ಮಾನಸಿಕ ಹಾಗೂ ದೈಹಿಕವಾಗಿ  ಸದೃಢರಾಗಲು ಸಹಕಾರಿಯಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ಸಾಹ ಮತ್ತು ಆಸಕ್ತಿಯಿಂದ  ಭಾಗವಹಿಸಬೇಕು ಎಂದು ಸಲಹೆ ನೀಡಿದರು. ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ಸಾಂಸ್ಕೃತಿಕ, ಕ್ರೀಡೆ ಮತ್ತಿತರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್‌.ಆರ್‌. ದಿನೇಶ್‌, ಸದಸ್ಯ  ಎಸ್‌.ಕೆ.ಮಧುಚಂದ್ರ, ರಾಜೇಂದ್ರ ಪ್ರಸಾದ್‌ಜೈನ್‌, ನಿವೃತ್ತ ಉಪನ್ಯಾಸಕ ಎಸ್‌.ಆರ್‌. ರಾಮೇಗೌಡ, ತಾಪಂ ಮಾಜಿ ಸದಸ್ಯ ಶ್ರೀನಿವಾಸ ಗೌಡ,  ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯರಾಮ್‌, ಉಪನ್ಯಾಸಕ ಅಶೋಕ್‌, ಲಿಂಗರಾಜು, ಕುಮಾರ್‌, ಶಿವಪ್ರಸಾದ್‌, ರಾಜಭಕ್ಷಿ,  ಶಶಿಕುಮಾರ್‌, ಲತಾ, ಲಕ್ಷ್ಮೀಬಾಯಿ, ಕುಮಾರಿ, ಆಶಾ, ನಾಗರತ್ನಾ, ಪ್ರಮೀಳಾ, ರಕ್ಷಿತಾ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.