ಗುದ್ದಲೀಶ್ವರ ಸ್ವಾಮಿಗಳ 120ನೇ ಯಾತ್ರಾ ಮಹೋತ್ಸವ


Team Udayavani, Jan 6, 2020, 2:40 PM IST

hv-tdy-3

ಗುತ್ತಲ: ಶ್ರೀ ಗುದ್ದಲೀಶ್ವರ ಸ್ವಾಮಿಗಳವರ 120ನೇ ಯಾತ್ರಾ ಮಹೋತ್ಸವವು ಹೊಸರಿತ್ತಿ ಗ್ರಾಮದಲ್ಲಿ ಜ. 6ರಿಂದ 15ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿವೆ ಎಂದು ಹೊಸರಿತ್ತಿಯ ಪೀಠದ 5ನೇ ಪೀಠಾಧಿಧ್ಯಕ್ಷರಾದ ಗುದ್ದಲೀಶ್ವರ ಮಠದ ಶ್ರೀ ಗುದ್ದಲೀಶ್ವರ ಸ್ವಾಮೀಜಿ ಹೇಳಿದರು.

ಹೊಸರಿತ್ತಿಯ ಗ್ರಾಮದ ಗುದ್ದಲೀಶ್ವರ ಮಠದಲ್ಲಿ ರವಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರು ಗದಿಗೆಪ್ಪಜ್ಜಯ್ಯನವರ ಸಾನ್ನಿಧ್ಯದಲ್ಲಿ ಯಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಜರಗಲಿದ್ದು, ಜ. 6ರಂದು ಬೆಳಗ್ಗೆ 9 ಗಂಟೆಗೆ ಗಂಗಾಪೂಜೆ ನಂತರ ಚೌಡೇಶ್ವರಿ ದೇವಿಗೆ ಮತ್ತು ಮುತ್ತೆ$çದೆಯರಿಗೆ ಉಡಿ ತುಂಬುವ ಕಾರ್ಯಕ್ರಮ. 10ಗಂಟೆಗೆ ದುಂಡಸಿ ವಿರಕ್ತ ಮಠದ ಕುಮಾರ ಸ್ವಾಮೀಜಿ, ಬೆಳ್ಳಟ್ಟಿ ರಾಮಲಿಂಗೇಶ್ವರಮಠದ ಬಸವರಾಜ ಸ್ವಾಮೀಜಿ, ಲಕ್ಕುಂಡಿ ಅಲ್ಲಮಪ್ರಭು ದೇವರಮಠದ ಸಿದ್ಧಲಿಂಗ ಸ್ವಾಮೀಜಿ, ದೊಡ್ಡಮೇಟೆಕುರ್ಕೆಯ ಶಶಿಧರ ಸ್ವಾಮೀಜಿ ಷಟಸ್ಥಲ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಸಂಜೆ 4 ಗಂಟೆಗೆ ಹೊಸರಿತ್ತಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ಸೇವೆಯ ರೊಟ್ಟಿ ಜಾತ್ರಾ ಉತ್ಸವ, ಸಂಜೆ 6 ಗಂಟೆಗೆ ಕಳಸಾರೋಹಣ, ರಾತ್ರಿ 7 ಗಂಟೆಗೆ ನಾಡೋಜ್‌ ಶ್ರೀಮನ್‌ ಮಹಾರಾಜ ನಿರಂಜನ ಪ್ರಣವ ಸ್ವರೂಪಿ ಜಗದ್ಗುರು ಡಾ| ಅನ್ನದಾನೀಶ್ವರ ಸ್ವಾಮೀಜಿ ಅವರಿಂದ ಯಾತ್ರಾ ಮಹೋತ್ಸವ ಉದ್ಘಾಟನೆಯಾಗಲಿದೆ. 8 ಗಂಟೆಗೆ ಮಕ್ಕಳಗೋಷ್ಠಿ ಹಮ್ಮಿಕೊಂಡಿದ್ದು, ಹತ್ತಿಮತ್ತೂರ ನಿಜಗುಣ ಸ್ವಾಮೀಜಿ ನೇತೃತ್ವವಹಿಸಲಿದ್ದಾರೆ. ಸಮ್ಮುಖ ನೆಗಳೂರ ಗುರುಶಾಂತೇಶ್ವರ ಶಿವಾಚಾರ್ಯರು ವಹಿಸುವರು. ಬಾಲ ಪ್ರತಿಭೆಗಳಾದ ಹೊನ್ನಿಕಾ ಸಂಗಮೇಶ ಪರಗಿ, ಆದಿತ್ಯಾ ಜೋಷಿ, ರುಬಿನಾ ಭಾಗವಹಿಸುವವರು.

ಜ. 7ರ ಮಂಗಳವಾರ ಸಂಜೆ 7ಕ್ಕೆ ನಡೆಯಲಿರುವ ಮಹಿಳಾ ಗೋಷ್ಠಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಸಬಾವಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಬೆಳಗಾವಿ ಖಾರದವೀರಬಸವ ಸ್ವಾಮೀಜಿ ಸಮ್ಮುಖ, ದಳವಾಯಿಮಠದ ಶಿವಕುಮಾರ ಸ್ವಾಮೀಜಿ, ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ, ಹಾವೇರಿ ಹರಸೂರ ಬಣ್ಣದಮಠದ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ತಿಪ್ಪಾಯಿಕೊಪ್ಪದ ಮಹಾಂತ ದೇವರು ಸಾನ್ನಿಧ್ಯ ವಹಿಸಲಿದ್ದಾರೆ.

ಜ. 8ರಂದು ರಾತ್ರಿ 7ಕ್ಕೆ ಕೃಷಿ ಗೋಷ್ಠಿ ನೇತೃತ್ವವನ್ನು ಗುತ್ತಲ ಕಲ್ಮಠದ ಗುರುಸಿದ್ಧ ಸ್ವಾಮೀಜಿ, ತಿಪ್ಪಾಯಿಕೊಪ್ಪದ ವಿರುಪಾಕ್ಷ ಸ್ವಾಮೀಜಿ, ಗುಡ್ಡದ ಆನ್ವೇರಿ ವಿರಕ್ತಮಠದ ಶಿವಯೋಗಿಶ್ವರ ಸ್ವಾಮೀಜಿ, ಹಿರೇಸಿಂದೋಗಿ ಸಚ್ಚಿದಾನಂದ ಸ್ವಾಮೀಜಿ, ಸದಾಶಿವಪೇಟೆಯ ಗದಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಪೊಲೀಸ್‌ ಇಲಾಖೆಯ ಡಿಸಿಪಿ ರವಿ ಡಿ. ಚನ್ನಣ್ಣನವರ, ಡಾ| ಸಿ. ಸೋಮಶೇಖರ ಪಾಲ್ಗೊಳ್ಳಲಿದ್ದಾರೆ. ಜ. 9 ರಂದು ಚನ್ನೂರಿನ ಶ್ರೀಮಠದಲ್ಲಿ ಧ್ವಜಾರೋಹಣ, ಸರ್ವಧರ್ಮ ಸಾಮೂಹಿಕ ವಿವಾಹ, ಮಹಾಗಣಾರಾಧನೆ, ಪುಷ್ಟ ರಥೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಜ. 10 ರಂದು ರಕ್ತದಾನ ಶಿಬಿರ, ಮಹಾಗಣಾರಾಧನೆ, ಮಹಾರಥೋತ್ಸವ ಜರುಗಲಿವೆ. ಜ. 11ರಂದು ಮಹಾಗಣಾರಾಧನೆ, ಕಡುಬಿನ ಕಾಳಗ ಜರುಗುವುದು. ಅಂದು ರಾತ್ರಿ 7ಗಂಟೆಗೆ ಸಿಂಹಾಸರೋಹಣ ಕಾರ್ಯಕ್ರಮದ ನೇತೃತ್ವವನ್ನು ಮುರುಘಾಮಠದ ಮಲ್ಲಿಕಾರ್ಜುನ

ಸ್ವಾಮೀಜಿ, ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಅಕ್ಕಿಆಲೂರ ಶಿವಬಸವ ಸ್ವಾಮೀಜಿ, ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರುಹಾಗೂ ಗಣ್ಯರು ಭಾಗವಹಿಸುವರು. ಜ.15 ರಂದು ಮಕರ ಸಂಕ್ರಾತಿ ಪುಣ್ಯಕಾಲದಲ್ಲಿ ತೆಪ್ಪೋತ್ಸವ ಜರುಗಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುತ್ತಣ್ಣ ಮಠದ, ಅರುಣ ಶಟ್ಟರ, ಕೆ.ಎಂ. ಶಶಿಧರ, ಕೆ.ಎಸ್‌.ಉಮೇಶ, ಮಹೇಶ ಪಟ್ಟಣಶಟ್ಟಿ, ಮೃತ್ಯುಂಜಯ ತೆಲಗಿ, ಸುರೇಶ ಗುರಣ್ಣನವರ ಇತರರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.