ಕಂದಾಯ ಇಲಾಖೆ ಭೂ ಹಗರಣ ತನಿಖೆ ಸಿಬಿಐಗೆ ವಹಿಸಿ


Team Udayavani, Jan 7, 2020, 2:20 PM IST

kolar-tdy-1

ಮುಳಬಾಗಿಲು: ತಾಲೂಕಿನ ಕಂದಾಯ, ಸರ್ವೆ ಹಾಗೂ ನೋಂದಣಿ ಇಲಾಖೆಯಲ್ಲಿ ಹತ್ತಾರು ವರ್ಷಗಳಿಂದ ಕಚೇರಿಯಲ್ಲಿ ಕೆಲಸ ಮಾಡುತ್ತಾ ಭೂ ಮಂಜೂರಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ವ್ಯಸಗಿರುವ ನೌಕರರನ್ನು ಕೂಡಲೇ ಬೇರೆ ತಾಲೂಕಿಗೆ ವರ್ಗಾವಣೆ ಮಾಡಿ, ಭೂ ಹಗರಣ ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿದರು. ನಗರದ ಮಿನಿವಿಧಾನಸೌಧ ಎದುರು ಬಾರ್‌ ಕೋಲ್‌ ಚಳವಳಿ ಮಾಡುವ ಮೂಲಕ ತಹಶೀಲ್ದಾರ್‌ ರಾಜ್‌ಶೇಖರ್‌ಗೆ ಮನವಿ ಸಲ್ಲಿಸಲಾಯಿತು.

ವ್ಯಾಪಕ ಭ್ರಷ್ಟಾಚಾರ: ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ತಾಲೂಕಿನ ಕಂದಾಯ, ಸರ್ವೆ ಹಾಗೂ ನೋಂದಣಿ ಇಲಾಖೆಯಲ್ಲಿ ಹಲವು ನೌಕರರು ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ, ಭೂ ಮಾಫಿಯಾದೊಂದಿಗೆ ಶಾಮೀಲಾಗಿ, vಸರ್ಕಾರಿ ಗೋಮಾಳ, ಗುಂಡು ತೋಪು, ಕೆರೆಗಳಿಗೆ ರಾತ್ರೋರಾತ್ರಿ ನಕಲಿ ದಾಖಲೆ ಸೃಷ್ಟಿ ಮಾಡುವ ಮೂಲಕ ಭೂ ಮಂಜೂರಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ವ್ಯಸಗಿದ್ದಾರೆ ಎಂದು ದೂರಿದರು.

ತನಿಖೆ ಸಿಬಿಐಗೆ ವಹಿಸಿ: ಇಲಾಖೆಯಲ್ಲಿ ನಡೆದಿರುವ ಭೂ ಹಗರಣ ತನಿಖೆಯನ್ನು ಸಿಬಿಐಗೆಒಪ್ಪಿಸಬೇಕು, ಸರ್ಕಾರಿ ಕಾನೂನನ್ನು ಗಾಳಿಗೆ ತೂರಿ ಹತ್ತಾರು ವರ್ಷಗಳಿಂದ ಇಲ್ಲಿಯೇ ಇದ್ದು 10 ಸಾವಿರ ಕೊಟ್ಟರೆ ಕಚೇರಿಯ ಅಭಿಲೇಖಾಲ ಯದಲ್ಲಿನ ಯಾವುದೇ ದಾಖಲೆ ಬೇಕಾದರೂ ದಲ್ಲಾಳಿಗಳಿಗೆ ಮಾರಾಟ ಮಾಡುತ್ತಾರೆ. ಅಲ್ಲದೇ, ಕೆಲವು ಜಮೀನು ಅಕ್ರಮಗಳನ್ನು ಬಯಲಿಗೆಳೆಯಲು ಟಪಾಲು ಸೆಕ್ಷನ್‌ನಲ್ಲಿ ಅರ್ಜಿ ನೀಡಿದರೆ, ಅಲ್ಲಿರುವ ಸಿಬ್ಬಂದಿ ಅದನ್ನೂ ಗೌಪ್ಯವಾಗಿಡದೆ, ದಲ್ಲಾಳಿಗಳಿಗೆ ಜೆರಾಕ್ಸ್‌ ಪ್ರತಿ ನೀಡುವ ಮೂಲಕ ಕೋಲಾಹಲ ಸೃಷ್ಟಿಸುತ್ತಾರೆ ಎಂದು ಆರೋಪಿಸಿದರು.

ಬೇರೆ ತಾಲೂಕಿಗೆ ವರ್ಗಾಹಿಸಿ: ಭೂಮಿ ಮಂಜೂರಾತಿಗಾಗಿ ಬಡವರು ನಮೂನೆ 50, 53, 57ರಲ್ಲಿ ಅರ್ಜಿ ಸಲ್ಲಿಸಿದರೆ, ನೌಕರರು ಆ ಅರ್ಜಿಗಳನ್ನು ಗೋಲ್‌ಮಾಲ್‌ ಮಾಡುವ ಮೂಲಕ ಸಾಕಷ್ಟು ಹಣ ಪಡೆದು ರಿಯಲ್‌ ಎಸ್ಟೇಟ್‌ ದಂಧೆಕೋರರ ಹೆಸರಿಗೆ ದರಕಾಸ್ತು ಕಮಿಟಿಯೂ ಇಲ್ಲದೇ, ಜಮೀನು ಮಂಜೂರು ಮಾಡುವ ದೊಡ್ಡ ಜಾಲವೇ ಇಲ್ಲಿದೆ ಎಂದರು.

ತಾಲೂಕು ಅಧ್ಯಕ್ಷ ಫಾರುಕ್‌ಪಾಷ ಮಾತನಾಡಿದರು. ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷೆ ಎ.ನಳಿನಿ, ಮರಗಲ್‌ ಶ್ರೀನಿವಾಸ್‌, ಯಲುವಳ್ಳಿ ಪ್ರಭಾಕರ್‌, ಅಣ್ಣಿಹಳ್ಳಿ ನಾಗರಾಜ್‌, ವಿಜಯ್‌ಪಾಲ್‌, ವೇಣು, ಪೊಮ್ಮರಹಳ್ಳಿ ನವೀನ್‌, ಜುಬೇರ್‌ಪಾಷ, ರಾಜೇಶ್‌ ಕಲೆ, ನಲ್ಲಾಂಡಹಳ್ಳಿ ಕೇಶವ, ಜಗದೀಶ್‌, ಸುಧಾಕರ್‌, ವಿನೋದ್‌, ರಾಮಮೂರ್ತಿ ರಾಘವೇಂದ್ರ, ಶಿವ, ಸಂತೋಷ್‌, ಅಂಬ್ಲಿಕಲ್‌ ಮಂಜುನಾಥ್‌, ರಂಜಿತ್‌,

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.