ಕಾಲೇಜು ವಿದ್ಯಾರ್ಥಿಗಳಿಗಿಲ್ಲ ಬಿಸಿಎಂ ಹಾಸ್ಟೆಲ್‌ ಸೌಲಭ್ಯ


Team Udayavani, Jan 7, 2020, 3:30 PM IST

cd-tdy-02

ಮೊಳಕಾಲ್ಮೂರು: ಪಟ್ಟಣ ಹಾಗೂ ತಾಲೂಕಿನ ವಿವಿಧೆಡೆ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿನಿಲಯಗಳಿವೆ. ಆದರೆ ಬಾಲಕರ ಬಿಸಿಎಂ ಕಾಲೇಜು ಹಾಸ್ಟೆಲ್‌ ಸೌಲಭ್ಯ ಮಾತ್ರ ಇಲ್ಲ. ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಈ ಸಮುದಾಯದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬಾಲಕರ ಬಿಸಿಎಂ ಕಾಲೇಜು ಹಾಸ್ಟೆಲ್‌ ಸೌಲಭ್ಯವಿಲ್ಲದೆ ಬಹುತೇಕ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣ ಪಡೆಯಲು ಸಂಕಷ್ಟ ಅನುಭವಿಸುವಂತಾಗಿದೆ.

ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ತಾಲೂಕಿನಲ್ಲಿ ಹಲವಾರು ಹಾಸ್ಟೆಲ್‌ಗ‌ಳಿವೆ. ಪಟ್ಟಣದಲ್ಲಿ ಸರ್ಕಾರಿ ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕರ ಹಾಸ್ಟೆಲ್‌, ಸರ್ಕಾರಿ ಹಿಂದುಳಿದ ವರ್ಗಗಳ ಮೆಟ್ರಿಕ್‌ಪೂರ್ವ ಬಾಲಕಿಯರ ಹಾಸ್ಟೆಲ್‌, ಸರ್ಕಾರಿ ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ಬಾಲಕಿಯರ ಹಾಸ್ಟೆಲ್‌, ತಾಲೂಕಿನ ಹಾನಗಲ್‌ನಲ್ಲಿ ಸರ್ಕಾರಿ ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕರ ಹಾಸ್ಟೆಲ್‌, ಕೊಂಡ್ಲಹಳ್ಳಿಯಲ್ಲಿ ಸರ್ಕಾರಿ ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕರ ಹಾಸ್ಟೆಲ್‌ ಹಾಗೂ ಬಿ.ಜಿ. ಕೆರೆ ಗ್ರಾಮದಲ್ಲಿ ಸರ್ಕಾರಿ ಹಿಂದುಳಿದ ವರ್ಗಗಳ ಮೆಟ್ರಿಕ್‌ಪೂರ್ವ ಬಾಲಕರ ಹಾಸ್ಟೆಲ್‌ಗ‌ಳನ್ನು ಪ್ರಾರಂಭಿಸಲಾಗಿದೆ. ಆದರೆ ಹೆಚ್ಚಿನ ಜನಸಂಖ್ಯೆ ಇರುವ ರಾಂಪುರ, ನಾಗಸಮುದ್ರ ಮತ್ತು  ದೇವಸಮುದ್ರ ಗ್ರಾಮಗಳಲ್ಲಿ ಬಿಸಿಎಂ ಹಾಸ್ಟೆಲ್‌ ಸೌಲಭ್ಯ ಇಲ್ಲ.

ಪ್ರತಿ ವರ್ಷ ಮೆಟ್ರಿಕ್‌ಪೂರ್ವ ವಿದ್ಯಾಭ್ಯಾಸ ಪೂರೈಸಿದ ವಿದ್ಯಾರ್ಥಿಗಳು ತಾಲೂಕು ಕೇಂದ್ರ ಇಲ್ಲವೇ ದೂರದ ಊರುಗಳಿಗೆ ತೆರಳಿ ವ್ಯಾಸಂಗ ಮುಂದುವರೆಸಬೇಕಿದೆ. ಹಿಂದುಳಿದ ವರ್ಗದ ಜನಸಂಖ್ಯೆಯನ್ನು ಹೆಚ್ಚು ಹೊಂದಿರುವ ಪ್ರದೇಶಗಳಲ್ಲಿ ಬಾಲಕರ ಬಿಸಿಎಂ ಕಾಲೇಜು ಹಾಸ್ಟೆಲ್‌ ಸೌಲಭ್ಯ ಕಲ್ಪಿಸುವಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ಲಕ್ಷ್ಯ ತಾಳಿದೆ.

ತಾಲೂಕಿನಲ್ಲಿ ಇದುವರೆಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೆಟ್ರಿಕ್‌ ನಂತರ ಪಿಯುಸಿ, ಪದವಿ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡಲು ಆಗುತ್ತಿಲ್ಲ. ಇದರಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಲಿದೆ. ತಾಲೂಕಿನಲ್ಲಿ ಬಾಲಕರ ಬಿಸಿಎಂ ಕಾಲೇಜ್‌ ಹಾಸ್ಟೆಲ್‌ ಸೌಲಭ್ಯವಿಲ್ಲದ ಕಾರಣ ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಸಾಲ ಮಾಡಿ ಪ್ರತಿ ವರ್ಷ ದೂರದ ಬೆಂಗಳೂರು, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಹಾಗೂ ಇನ್ನಿತರ ದೂರದ ನಗರ ಪ್ರದೇಶಗಳಿಗೆ ಕಳುಹಿಸುವ ದುಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರದ ಶಾಸಕರೂ ಆಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಬಾಲಕರ ಬಿಸಿಎಂ ಕಾಲೇಜು ಹಾಸ್ಟೆಲ್‌ ಸೌಲಭ್ಯ ಕಲ್ಪಿಸಲು ಮುಂದಾಗಬೇಕಿದೆ.

ಮೊಳಕಾಲ್ಮೂರು ಪಟ್ಟಣ ಹಾಗೂ ರಾಂಪುರದಲ್ಲಿ ಬಾಲಕರ ಬಿಸಿಎಂ ಕಾಲೇಜು ಹಾಸ್ಟೆಲ್‌ ಮಂಜೂರಾತಿಗಾಗಿ ಸಚಿವ ಬಿ. ಶ್ರೀರಾಮುಲು ಅವರ ಗಮನಕ್ಕೆ ತರುತ್ತೇವೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.- ಅವೀನ್‌, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ

 

ಎಸ್‌. ರಾಜಶೇಖರ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

8-Holalkere

Holalkere: ತಾಲೂಕಿನಾದ್ಯಾಂತ ರಣಭೀಕರ ಮಳೆ; ರೈತರ ಮುಖದಲ್ಲಿ ಮಂದಹಾಸ

SAnehalli

Chitradurga: “ಹಿಂದೂ’ ಧರ್ಮವೇ ಅಲ್ಲ: ಸಾಣೇಹಳ್ಳಿ ಶ್ರೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.