“ಕಲಾನ್ವೇಷಣೆಯಿಂದ ಸಮಾಜ ಪರಿವರ್ತನೆ ಸಾಧ್ಯ’


Team Udayavani, Jan 7, 2020, 6:11 PM IST

mumbai-tdy-1

ಮುಂಬಯಿ, ಜ. 6: ಮುಂಬಯಿ ಕನ್ನಡಿಗರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬರುವುದೆಂದರೆ ದೊಡª ಮಾತು. ನಮಗೆ ಬಾರದಿದ್ದರೂ ಬೇಸರವಿಲ್ಲ. ಆದರೆ ನನ್ನ ಮಿತ್ರರೋರ್ವರಿಗೆ ಬಂದಿರುವುದು ಸಂತೋಷವಾಗಿದೆ. ಕಲೆ ಪ್ರದರ್ಶನಕ್ಕೆ ಪ್ರಶಂಸೆ, ಪ್ರಶಸ್ತಿ ಮುಖ್ಯವಲ್ಲ, ಕಲಾವಿದನ ಸಂತುಷ್ಟತನವೇ ಪ್ರಧಾನವಾದದ್ದು. ಬರೇ ಮಾರಾಟಕ್ಕಾಗಿ ಚಿತ್ರಕಲಾವಿದನಾಗುವುದು ಸರಿಯಲ್ಲ. ಕಲಾವೃತ್ತಿ, ಪ್ರವೃತ್ತಿಯಿಂದ ಪರರ ಜೀವನಕ್ಕೆ ಆದರ್ಶರಾಗಬೇಕು. ಆ ಮೂಲಕ ಕಲಾ ಉಳಿವಿಗೆ ಕಲಾವಿದನು ಶ್ರಮಿಸಬೇಕು. ಕಲಾವಿದನಿಂದ ಸೃಜನಶೀಲಾ ಕಲೆ ತೃಪ್ತಿದಾಯಕವಾಗಿದೆ. ಕಲಾವಿದನು ಬಣ್ಣ ನಿರ್ಮಾಣ ಮಾಡಿ ಕಲಾ ಪ್ರದರ್ಶನ ಮಾಡಿದಾಗಲೇ ಕಲೆ ಜೀವನದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಕಲಾಧರ್ಮ ಉಳಿಸುವಿಕೆಯೇ ಕಲಾವಿದನ ಧರ್ಮವಾದಾಗಲೇ ಕಲೆಯಲ್ಲಿ ಸಮಾಜ ಪರಿವರ್ತನೆ ಸಾಧ್ಯವಾಗುತ್ತದೆ ಎಂದು ಚಿತ್ರಕಲಾ ಪುರಸ್ಕೃತ, ಅಂತಾರಾಷ್ಟ್ರೀಯ ಪ್ರಸಿದ್ಧಿಯ ಹಿರಿಯ ಕಲಾವಿದ ದೇವದಾಸ ಶೆಟ್ಟಿ ತಿಳಿಸಿದರು.

ಜ. 4 ರಂದು ಸಾಂತಾಕ್ರೂಜ್‌ ಪೂರ್ವದ ವಿದ್ಯಾನಗರಿಯ ಡಬ್ಲೂÂಆರ್‌ಐಸಿ ಸಭಾಗೃಹದಲ್ಲಿ ಮುಂಬಯಿ ವಿಶ್ವವಿದ್ಯಾಲಯ ಕನ್ನಡದ ವಿಭಾಗ ಆಯೋಜಿಸಿದ್ದ ಕೃತಿಗಳ ಬಿಡುಗಡೆ, ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು. ಪ್ರಜಾವಾಣಿ ದೈನಿಕ ಮೈಸೂರು ಆವೃತ್ತಿಯ ಉಪ ಸಂಪಾದಕ ಗಣೇಶ್‌ ಅಮೀನಗಡ ಅವರ “ವನ್ಯ ವರ್ಣ’ (ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವನ್ಯಜೀವಿ ಚಿತ್ರ ಕಲಾವಿದ, ಮುಂಬಯಿ ಕನ್ನಡಿಗ, ಜಯವಂತ ಮುನ್ನೊಳ್ಳಿ ಕಲಾ ಬದುಕಿನ ನೋಟ) ಕೃತಿಯನ್ನು ದೇವದಾಸ ಶೆಟ್ಟಿ ಮತ್ತು ಸಹನಾ ಕಾಂತಬೈಲು ಇವರ “ಆನೆ ಸಾಕಲು ಹೊರಟವಳು’ ಕೃತಿಯನ್ನು ಜಯಂತ ಮುನ್ನೊಳ್ಳಿ ಬಿಡುಗಡೆಗೊಳಿಸಿದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಮತ್ತು ಕನ್ನಡ ವಿಭಾಗದ ಸಹ ಸಂಶೋಧಕಿ ಡಾ| ಉಮಾ ರಾವ್‌ ಕ್ರಮವಾಗಿ ಕೃತಿ ಪರಿಚಯಗೈದರು.

ನಾನು ಶೈಕ್ಷಣಿಕ ಚೌಕಟ್ಟಿಗೆ ಒಳಪಟ್ಟವನಲ್ಲ. ಆದರೆ ಎಲ್ಲಾ ಪತ್ರಕರ್ತರಲ್ಲಿ ಬಹುತರಹ ವಿಚಾರಗಳು ಹೊಳೆದಂತೆ ನನ್ನಲ್ಲೂ ಹೊಳೆದು ವನ್ಯಜೀವಿ ಚಿತ್ರ ಕಲಾವಿದನೋರ್ವರ ಕೃತಿ ರಚಿಸಿದೆ. ಇಂದು ಪತ್ರಿಕೆಗಳಲ್ಲಿ ಸಾಹಿತ್ಯಕ ವಿಷಯಗಳಿಗೆ ಜಾಗ ಕಡಿಮೆ ಆಗುತ್ತಿದ್ದರೂ ಹೊರನಾಡಿನ ಮುಂಬಯಿನಲ್ಲಿ ಕನ್ನಡದ ಕೈಕಂರ್ಯಗಳು ಶ್ರೀಮಂತಿಕೆಯಿಂದ ನಡೆಯುತ್ತಿರುವುದೇ ನಮ್ಮ ಅಭಿಮಾನ. ಮುಂಬಯಿವಾಸಿ ಕನ್ನಡಿಗರು ತಾವೂ ಬೆಳೆದು ಮತ್ತೂಬ್ಬರನ್ನೂ ಬೆಳೆಸುವ ಗುಣವುಳ್ಳವರು.

ಆದ್ದರಿಂದ ಇಲ್ಲಿ ಕಲೆ, ಸಾಹಿತ್ಯದ ಬೆಳವಣಿಗೆಗೆ ಅವಕಾಶಗಳಿವೆ. ತಪ್ಪುಗಳ ಹುಡುಕಾಟ ಪತ್ರಕರ್ತರ ಅಭ್ಯಾಸಬಲವಾಗಿದ್ದರೂ ಸಾಂದರ್ಭಿಕವಾಗಿ ಹೊಂದಾಣಿಕೆಯ ಮನೋಭಾವ ಅಗತ್ಯವಾಗಿರ ಬೇಕು ಎಂದು ಗಣೇಶ್‌ ಅಮೀನಗಡ ತಿಳಿಸಿದರು. ಸಹನಾ ಕಾಂತಬೈಲು ಮಾತನಾಡಿ ನನ್ನ ಮೊದಲ ಕೃತಿಯೇ ಮುಂಬಯಿ ಕನ್ನಡ ವಿಭಾಗದಲ್ಲಿ ಬಿಡುಗಡೆ ಆಗುವುದು ನನ್ನ ಬಾಗ್ಯವೇ ಸರಿ ಎಂದರು.

ಸಾಹಿತ್ಯದ ಮೂಲಕವೂ ಜಗತ್ತಿನ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪಬಹುದು ಮತ್ತು ಜಗತ್ತನ್ನು ಸಾಹಿತ್ಯದ ಮೂಲಕ ತಿಳಿಯಬಹುದು ಅನ್ನುವುದನ್ನು ಇಲ್ಲಿ ತೋರ್ಪಡಿಸಿದ್ದೇವೆ ಎಂದು ಅಧ್ಯಕ್ಷೀಯ ಭಾಷಣದಲ್ಲಿ ಡಾ| ಜಿ. ಎನ್‌. ಉಪಾಧ್ಯ ನುಡಿದರು. ಹಿರಿಯ ಪತ್ರಕರ್ತ, ಸಾಹಿತಿ ರತ್ನಾಕರ್‌ ಆರ್‌. ಶೆಟ್ಟಿ, ಮಹೇಶ್ವರ್‌ ಕಾಂತಬೈಲು, ಪ್ರತಿಷ್ಠಿತ ಚಿತ್ರಕಲಾವಿದ ಜಯ್‌ ಸಿ. ಸಾಲ್ಯಾನ್‌, ಸಣ್ಣಯ್ಯ ದೇವಾಡಿಗ, ಡಾ| ಸತೀಶ್‌ ಮುನ್ನೊಳ್ಳಿ, ಡಾ| ಸಂಗೀತಾ ಮುನ್ನೊಳ್ಳಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಕಲಾ ಭಾಗವತ್‌, ಪಾರ್ವತಿಪೂಜಾರಿ, ಶಶಿಕಲಾ ಹೆಗಡೆ ಪ್ರಾರ್ಥನೆಗೈದರು. ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು, ಸುಶೀಲಾ ದೇವಾಡಿಗ ವಂದಿಸಿದರು.

 

-ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.