ಶವ ಸಂಸ್ಕಾರಕ್ಕೆ ಹಳ್ಳ-ಕೊಳ್ಳಗಳೇ ಗತಿ


Team Udayavani, Jan 8, 2020, 4:38 PM IST

kopala-tdy-1

ಕುಕನೂರು: ಸರಕಾರ ಹಳ್ಳಿ ಜನತೆ ಬದುಕು ಹಸನುಗೊಳಿಸುವುದಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿಯಿಂದ ಜನತೆಗೆ ಅವಶ್ಯವಾಗಿರುವ ಕೆಲ ಮೂಲಸೌಕರ್ಯ ಸಿಗುತ್ತಿಲ್ಲ ಎಂಬುದಕ್ಕೆ ಕುಕನೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ಇದುವರೆಗೂ ರುದ್ರಭೂಮಿ ಇಲ್ಲದಿರುವುದೇ ಸಾಕ್ಷಿಯಾಗಿದೆ.

ಕಂದಾಯ ಇಲಾಖೆ ಮಾಹಿತಿ ಪ್ರಕಾರ ತಾಲೂಕಿನ ಗೋರ್ಲೆಕೊಪ್ಪ, ವೀರಾಪುರ, ನಿಟ್ಟಾಲಿ, ಆಡೂರು, ಚಿತ್ತಾಪುರ, ಕೋಮಲಾಪುರ, ಭಟಪ್ಪನಹಳ್ಳಿ, ನೆಲಜೇರಿ, ಚಿಕ್ಕಬಿಡನಾಳ, ಚಂಡಿನಾಳ ಹಾಗೂ ಇನ್ನಿತರೆ ಗ್ರಾಮಗಳಲ್ಲಿ ರುದ್ರಭೂಮಿ ಇಲ್ಲ. 14 ಗ್ರಾಮಗಳಲ್ಲಿ ಮಂಗಳೂರು ಹೋಬಳಿಯ 7 ಗ್ರಾಮಗಳ ಹಾಗೂ ಕುಕನೂರು ಹೋಬಳಿಯ 1 ಗ್ರಾಮದಲ್ಲಿ ಸ್ಥಳವನ್ನು ಗುರುತಿಸಿದ್ದು ಬಿಟ್ಟರೆ ಮುಂದಿನ ಕ್ರಮವಾಗಿಲ್ಲ ಎನ್ನುತ್ತಾರೆ ಸಾರ್ವಜನಿಕರು.

ಹಳ್ಳ ಕೊಳ್ಳಗಳೇ ಗತಿ: ಈ ಎಲ್ಲ ಗ್ರಾಮಗಳಲ್ಲಿ ರುದ್ರಭೂಮಿಗೆ ಸ್ಥಳಾವಕಾಶ ಇಲ್ಲದಿರುವುದರಿಂದ ಹಳ್ಳ-ಕೊಳ್ಳಗಳಲ್ಲಿಶವ ಸಂಸ್ಕಾರ ಮಾಡಲಾಗುತ್ತಿದೆ. ಇನ್ನು ಜಮೀನು ಹೊಂದಿದ ಕುಟುಂಬದವರು ತಮ್ಮ ಜಮೀನುಗಳಲ್ಲಿ ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ. ಜಮೀನು ಇಲ್ಲದವರಿಗೆ ಹಳ್ಳ, ಕೊಳ್ಳಗಳೇ ಗತಿಯಾಗಿದ್ದು, ಮಳೆಗಾಲದಲ್ಲಿ ಶವಸಂಸ್ಕಾರ ಮಾಡುವುದಕ್ಕೆ ಜನತೆ ಹರಸಾಹಸ ಪಡಬೇಕಾಗಿದೆ. ಜಮೀನು ಮಾರಾಟ ಮಾಡುವವರಿಲ್ಲ: ಸರಕಾರ ರುದ್ರಭೂಮಿ ಇಲ್ಲದಿರುವ ಗ್ರಾಮಗಳನ್ನು ಗುರುತಿಸಿ, ಅವಶ್ಯ ಇರುವ ಕಡೆಗಳಲ್ಲಿ ಸರಕಾರಿ ಜಮೀನು ಇಲ್ಲದಿರುವುದರಿಂದ ಅನಿವಾರ್ಯವಾಗಿ ಖಾಸಗಿಯವರಿಂದ ಜಮೀನು ಪಡೆಯಬೇಕಿದೆ. ಆದರೆ ರುದ್ರಭೂಮಿಗೆ ಜಮೀನು ಖರೀದಿ ನೀಡಲು ಯಾರೂ ಮುಂದೆ ಬರುತ್ತಿಲ್ಲ. ಯೋಗ್ಯ ಪರಿಹಾರ ನೀಡುವುದಾಗಿ ಅಧಿ ಕಾರಿಗಳು ಹೇಳುತ್ತಿದ್ದರೂ ಜಮೀನು ಮಾಲೀಕರು ಮನಸ್ಸು ಮಾಡುತ್ತಿಲ್ಲ.

ಮಾನವೀಯತೆ ಮೆರೆಯುವುದು ಅವಶ್ಯ: ಸಮರ್ಪಕ ಹಾಗೂ ರುದ್ರಭೂಮಿಗಳು ಇಲ್ಲದಿರುವುದರಿಂದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಮೊದಲೇ ಕುಟುಂಬದ ಸದಸ್ಯರನ್ನು ಕಳೆದುಕೊಂಡ ದುಃಖದಲ್ಲಿರುವ ಕುಟುಂಬಗಳ ಸಂಬಂಧಿಕರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತ ಹಾಗೋ ಹೀಗೋ ಅಂತ್ಯಕ್ರಿಯೆ ನಡೆಸುತ್ತಿದ್ದಾರೆ. ಮುಂಬರುವ ದಿನಗಳಲ್ಲಾದರೂ ಆಯಾ ಭಾಗದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇಚ್ಛಾಶಕ್ತಿ ಪ್ರದರ್ಶಿಸಿ ರುದ್ರಭೂಮಿಗಳಿಗೆ ಅವಶ್ಯ ಇರುವ ಜಾಗವನ್ನು ಜಮೀನು ಮಾಲೀಕರ ಮನವೊಲಿಸಿ ಖರೀದಿಸಿ ಮಾನವೀಯತೆ ಮೆರೆಯುವುದು ಅವಶ್ಯವಾಗಿದೆ.

ಮಂಡಲಗೇರಿ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಅಂತ್ಯ ಸಂಸ್ಕಾರ ಮಾಡುತ್ತಾ ಬಂದ ಸ್ಥಳದಲ್ಲಿ ಕಳೆದ ವರ್ಷ ಜಾತ್ರೆ ಸಮಯದಲ್ಲಿ ಮೃತ ವ್ಯಕ್ತಿಯ ಹಾಗೂ ಜಾಗ ಮಾಲೀಕನ ವೈಮನಸ್ಸಿನಿಂದ ಅಂತ್ಯ ಸಂಸ್ಕಾರ ಮಾಡಬೇಡಿ ಎಂದು ತಡೆಯಲಾಗಿತ್ತು. ಇಂತಹ ಘಟನೆಗಳು ಮರುಕಳಿಸದಂತೆ ಸರಕಾರಗಳು ತಡೆಯಬೇಕಾದರೆ ಜಾಗೆ ಖರೀದಿಸಿ ಸರ್ವಧರ್ಮಗಳ ಶವ ಸಂಸ್ಕಾರ ಅನುಕೂಲ ಮಾಡಬೇಕು.-ಮಂಡಲಗೇರಿ ಗ್ರಾಮಸ್ಥರು

 

-ಎಲ್‌. ಮಂಜುನಾಥಪ್ರಸಾದ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.