ಅಭಿವೃದ್ಧಿ ದರದ ಕುಸಿತ ಆರ್ಥಿಕತೆ ಹಳಿಯೇರಲಿ


Team Udayavani, Jan 9, 2020, 6:49 AM IST

32

ನಿರಂತರವಾಗಿ ಆರ್ಥಿಕ ಅಭಿವೃದ್ಧಿ ದರ ಕುಸಿಯುತ್ತಿರುವುದರಿಂದ ಸರಕಾರದ ಹಲವು ಮಹತ್ವಾಕಾಂಕ್ಷಿ ಯೋಜನೆಗಳಿಗೆ ಹಿನ್ನಡೆಯಾಗಲಿದೆ. ಈ ಕಾರಣಕ್ಕೆ ಸರಕಾರ ಜಿಡಿಪಿ ಕುಸಿತವನ್ನು
ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ.

ರಾಷ್ಟ್ರೀಯ ಸಾಂಖೀಕ ಕಚೇರಿ (ಎನ್‌ಎಸ್‌ಒ) 2019-20ನೇ ಸಾಲಿನ ಜಿಡಿಪಿ ಅಭಿವೃದ್ಧಿ ದರ ಶೇ.5ರಂತೆ ಅಭಿವೃದ್ಧಿ ಹೊಂದುವ ನಿರೀಕ್ಷೆಯನ್ನು ವ್ಯಕ್ತಪಡಿಸಿದೆ. ಈಗಾಗಲೇ ಆರ್ಥಿಕ ಕುಸಿತದ ಕಾರಣಕ್ಕೆ ಭಾರೀ ಟೀಕೆಗಳನ್ನು ಎದುರಿಸುತ್ತಿರುವ ಸರಕಾರಕ್ಕೆ ಇದು ಬಹಳ ಮುಜುಗರಉಂಟುಮಾಡುವ ವರದಿ. ಹಿಂದಿನ ಆರ್ಥಿಕ ವರ್ಷದಲ್ಲಿ ಶೇ. 6.8 ಜಿಡಿಪಿ ಅಭಿವೃದ್ಧಿ ದರವಿತ್ತು. ಪ್ರಸಕ್ತ ಸಾಲಿಗಾಗುವಾಗ ಅದು ಇನ್ನಷ್ಟು ಕುಸಿದಿರುವುದಲ್ಲದೆ ಕಳೆದೊಂದು ದಶಕದಲ್ಲೇ ಕನಿಷ್ಠ ಮಟ್ಟಕ್ಕಿಳಿದಿದೆ. ಇಂಥ ಹಿಂಜರಿತ ಭಾರೀ ಕಳವಳಕ್ಕೆ ಕಾರಣವಾಗುವುದಿಲ್ಲ ನಿಜ. ಇದಕ್ಕಿಂತಲೂ ಕಠಿಣ ಪರಿಸ್ಥಿತಿಯನ್ನು ದೇಶ ಎದುರಿಸಿ ಎದ್ದು ನಿಂತಿದೆ ಎಂಬ ಸರಕಾರದ ವಿವರಣೆಯನ್ನು ಒಪ್ಪಿಕೊಳ್ಳಬಹುದು. ಆದರೆ ನಿರಂತರವಾಗಿ ಆರ್ಥಿಕ ಅಭಿವೃದ್ಧಿ ದರ ಕುಸಿಯುತ್ತಿರುವುದರಿಂದ ಸರಕಾರದ ಹಲವು ಮಹತ್ವಾಕಾಂಕ್ಷಿ ಯೋಜನೆಗಳಿಗೆ ಹಿನ್ನಡೆಯಾಗಲಿದೆ. ಈ ಕಾರಣಕ್ಕೆ ಸರಕಾರ ಜಿಡಿಪಿ ಕುಸಿತವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ.

ಸರಕಾರಿ ಅಂಕಿಅಂಶಗಳು ದ್ವಿತೀಯಾರ್ಧದಲ್ಲೂ ಆರ್ಥಿಕ ಚಟುವಟಿಕೆಗಳು ನಿರೀಕ್ಷಿತ ವೇಗದಲ್ಲಿ ಗರಿಗೆದರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ. ಈ ಸಂದರ್ಭದಲ್ಲಿ ಆರ್ಥಿಕ ಚೇತರಿಕೆಗಾಗಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳು ಅನೇಕ ಇವೆ. ವಾಹನೋದ್ಯಮ, ರಿಯಲ್‌ಎಸ್ಟೇಟ್‌ ವಲಯಗಳಿಗೆ ಘೋಷಿಸಿದ ಪ್ಯಾಕೇಜ್‌ಗಳನ್ನು ಉಳಿದ ವಲಯಗಳಿಗೂ ವಿಸ್ತರಿಸುವ ಅಗತ್ಯವಿದೆ. ಮುಖ್ಯವಾಗಿ ಉತ್ಪಾದನಾ ವಲಯಕ್ಕೆ ತುರ್ತು ನೆರವು ಬೇಡುತ್ತಿದೆ. ಈ ವಲಯದಲ್ಲಾಗಿರುವ ಕುಂಠಿತ ನೇರವಾಗಿ ರಫ್ತಿನ ಮೇಲೆ ಪರಿಣಾಮ ಬೀರಿದ್ದು, ಇದರಿಂದ ವಿನಿಮಯ ದರ ಕುಸಿದು ವಿತ್ತೀಯ ಕೊರತೆ ಹೆಚ್ಚುತ್ತಿದೆ.

ಕಳೆದ ಸಾಲಿನ ಬಜೆಟ್‌ನಲ್ಲಿ ಜಿಡಿಪಿ ಶೇ. 12ರ ದರದಲ್ಲಿ ಅಭಿವೃದ್ಧಿ ಹೊಂದಲಿದೆ ಎಂದು ಹೇಳಲಾಗಿತ್ತು. ಇದು ಸಾಧ್ಯವಾಗದಿದ್ದರೂ ಸಾಮಾನ್ಯ ಅಭಿವೃದ್ಧಿಯನ್ನು ನಿರೀಕ್ಷಿಸಲಾಗಿತ್ತು. ಸಾಮಾನ್ಯ ಅಭಿವೃದ್ಧಿ ದರ ಎಂದರೆ ಶೇ.7ರಿಂದ 7.5ರ ಆಸುಪಾಸಿನಲ್ಲಿರಬೇಕು. ಆದರೆ ಪ್ರಸ್ತುತ ಸಾಲಿನ ನಿರೀಕ್ಷೆ ಇದಕ್ಕಿಂತಲೂ ಬಹಳ ಕಡಿಮೆಯಿದೆ. ಆರ್ಥಿಕ ಹಿಂಜರಿತ ಕಾಣಿಸಿಕೊಂಡು ಬಹಳ ಸಮಯವಾಗಿದ್ದರೂ ಇದೀಗ ಹೊಸ ಸವಾಲುಗಳು ಎದುರಾಗಿವೆ. ಮುಖ್ಯವಾಗಿ ಅಮೆರಿಕ ಮತ್ತು ಇರಾನ್‌ ನಡುವೆ ಉಂಟಾಗಿರುವ ಪ್ರಕ್ಷುಬ್ಧತೆ ನಮ್ಮ ಆರ್ಥಿಕತೆಯ ಮೇಲೆ ನೇರವಾಗಿಯೇ ಪರಿಣಾಮಗಳನ್ನು ಬೀರುತ್ತಿದೆ. ಕಚ್ಚಾತೈಲ ಬೆಲೆ ಏರಿಕೆಯಿಂದಾಗಿ ಈಗಾಗಲೇ ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಹೆಚ್ಚಳವಾಗಿದೆ. ಜೊತೆಗೆ ಚಿನ್ನವೂ ಬೆಲೆ ಏರಿಕೆಯಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಿದೆ. ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಖರ್ಚು ಮಾಡುವ ಸಾಮರ್ಥ್ಯ ಕಡಿಮೆಯಾಗುತ್ತಿದೆ. ಹೀಗೆ ಆರ್ಥಿಕತೆಯ ಎಲ್ಲ ಅಂಗಗಳೂ ಹೊಡೆತ ತಿನ್ನುತ್ತಿರುವ ಇಂಥ ಸವಾಲಿನ ಪರಿಸ್ಥಿತಿಯಲ್ಲಿಯೇ ಇನ್ನು ಕೆಲವೇ ದಿನಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡಿಸಲಿದ್ದಾರೆ.

ಹೂಡಿಕೆಗಳನ್ನು ಆಕರ್ಷಿಸುವ ಸಲುವಾಗಿ ಸರಕಾರ ಕೆಲ ಸಮಯದಿಂದ ಪ್ರಾಮಾಣಿಕವಾದ ಪ್ರಯತ್ನಗಳನ್ನು ಮಾಡುತ್ತಿದೆ. ಕಾರ್ಪೊರೇಟ್‌ ತೆರಿಗೆ ಕಡಿತ, ಉದ್ಯಮಿಗ ಜೊತೆ ಪ್ರಧಾನಿಯ ಸಂವಾದ ಈ ಮುಂತಾದ ಕ್ರಮಗಳಿಂದ ಹೂಡಿಕೆದಾರರಲ್ಲಿರುವ ಆತಂಕವನ್ನು ಹೋಗಲಾಡಿಸುವುದು ಈ ಸಂದರ್ಭದಲ್ಲಿ ಅಪೇಕ್ಷಣೀಯ ಕ್ರಮಗಳೇ. ಆದರೆ ಇದಿಷ್ಟೇ ಸಾಲದು. ಇಂಥ ಉಪಕ್ರಮಗಳು ಫ‌ಲನೀಡಲು ಬಜೆಟ್‌ನಲ್ಲಿ ಆರ್ಥಿಕ ಸುಧಾರಣೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ದೂರಗಾಮಿ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ವೈಧಾನಿಕವಾದ ಸುಧಾರಣೆಗಳನ್ನು ತರುವುದು ಈಗಿನ ಅಗತ್ಯ. ದೇಶವನ್ನು ಜಗತ್ತಿನ ಐದನೇ ಆರ್ಥಿಕ ಶಕ್ತಿಯಾಗಿ ಬೆಳೆಸುವ , 5 ಲಕ್ಷಕೋಟಿ ಆರ್ಥಿಕತೆಯನ್ನಾಗಿ ಮಾಡುವಂಥ ದೊಡ್ಡ ಗುರಿಗಳನ್ನು ಸರಕಾರ ಇಟ್ಟುಕೊಂಡಿದೆ. 5 ಲಕ್ಷ ಕೋ. ರೂ. ಆರ್ಥಿಕತೆಯಾಗಬೇಕಾದರೆ ಜಿಡಿಪಿ ಅಭಿವೃದ್ಧಿ ದರ ಶೇ. 12 ಇರಬೇಕು. ಪ್ರಸ್ತುತ ಅದರ ಅರ್ಧವೂ ಇಲ್ಲ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

ಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯ

India: ಕ್ಯಾನ್ಸರ್‌ ಕಾಯಿಲೆ; ನಿರಂತರ ಜಾಗೃತಿ ಅಗತ್ಯ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

BAnga

Bangladesh Unrest: ಹಿಂದೂ ಸಮುದಾಯದ ರಕ್ಷಣೆ: ಬಾಂಗ್ಲಾ ಸರಕಾರ ಬದ್ಧತೆ ತೋರಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.