ತ್ರಿಕೋನ ಪ್ರೇಮ­ಕಥೆಯಲ್ಲ

ಮೂರು ವಯೋಮಾನದವರಿಗಾಗಿ...

Team Udayavani, Jan 10, 2020, 5:36 AM IST

19

“ತ್ರಿಕೋನ’ ಪ್ರೇಮ­ಕಥೆಯ ಸಿನಿಮಾಗಳ ಬಗ್ಗೆ ನೀವು ಕೇಳಿರಬಹುದು. ಈಗ “ತ್ರಿಕೋನ’ ಎನ್ನುವ ಹೆಸರಿನಲ್ಲೇ ಚಿತ್ರವೊಂದು ತೆರೆಗೆ ಬರುತ್ತಿದೆ. ಈ ಹಿಂದೆ ದಿಗಂತ್‌ ನಾಯಕ ನಟನಾಗಿ ಅಭಿನಯಿಸಿದ್ದ “ಬರ್ಫಿ’ ಚಿತ್ರವನ್ನು ನಿರ್ದೇಶಿಸಿದ್ದ ಪಿ. ರಾಜಶೇಖರ್‌ “ತ್ರಿಕೋನ’ ಚಿತ್ರಕ್ಕೆ ಕತೆ ,ಚಿತ್ರಕಥೆ ಬರೆದು ಅದನ್ನು ಚಂದ್ರಕಾಂತ್‌ ಅವರಿಂದ ನಿರ್ದೇಶನ ಮಾಡಿಸಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ “ತ್ರಿಕೋನ’ ಚಿತ್ರಕ್ಕೆ ಆಯಾ ಭಾಷೆ, ನೇಟಿವಿಟಿಗೆ ತಕ್ಕಂತೆ ಚಿತ್ರಕಥೆ ವಿಭಿನ್ನವಾಗಿ ಸಿದ್ಧಪಡಿಸಲಾಗಿದೆಯಂತೆ. ಸದ್ಯ ಮೊದಲ ಪ್ರತಿ ಹೊರಬಂದಿರುವ “ತ್ರಿಕೋನ’ ಚಿತ್ರ ಸೆನ್ಸಾರ್‌ ಅಂಗಳದಲ್ಲಿದ್ದು, ಇದೇ ವೇಳೆ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಚಿತ್ರತಂಡ ಮಾಧ್ಯಮಗಳ ಮುಂದೆ ಬಂದಿತ್ತು.

ಚಿತ್ರದ ಬಗ್ಗೆ ಮಾತಿಗಿಳಿದ ಚಿತ್ರತಂಡ, “ಒಂದೇ ಕಥೆಯನ್ನು ಮೂರು ಭಾಷೆಯಲ್ಲಿ ಮೂರು ವಿಭಿನ್ನ ರೀತಿಯಲ್ಲಿ ತೆರೆಮೇಲೆ ಹೇಳಿದ್ದೇವೆ. ಚಿತ್ರಕ್ಕೆ ಆಯಾ ಭಾಷೆ, ನೇಟಿವಿಟಿಗೆ ತಕ್ಕಂತೆ ಮೂರು ಸಂಗೀತ ನಿರ್ದೇಶಕರು ಸಂಗೀತ ಸಂಯೋ­ಜಿಸಿ­ದ್ದಾರೆ. ಎಲ್ಲರ ಜೀವನ­ದಲ್ಲಿ ನಡೆದಿರುವ, ನಡೆಯುತ್ತಿರುವ, ನಡೆಯುವಂತೆ ಇರುವ ಘಟನೆಗಳನ್ನು ಇಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ. ಇಪ್ಪತ್ತೈದು ವಯಸ್ಸಿನವರು, ನಲವತ್ತು ವಯಸ್ಸಿನವರು ಮತ್ತು ಅರವತ್ತು ದಾಟಿದ ಹಿರಿಯ ನಾಗರೀಕರು ಹೀಗೆ ಮೂರು ವಯೋಮಾನದವರಿಗೂ ತಲುಪುವಂತ ಕಥೆ ಚಿತ್ರದಲ್ಲಿದೆ. ಸನ್ನಿವೇಶಗಳು ದೃಶ್ಯಗಳ ಮೂಲಕ ನೋಡಿಸಿಕೊಂಡು ಹೋಗುತ್ತದೆ’ ಎಂದು ಚಿತ್ರ ವಿಶೇಷತೆಗಳನ್ನು ತೆರೆದಿಟ್ಟಿತು.

“ಅಹಂ, ಶಕ್ತಿ ಮತ್ತು ತಾಳ್ಮೆ ಒಂದಕ್ಕೊಂದು ಪೈಪೋಟಿಗೆ ಬಿದ್ದಾಗ ಯಾವ ರೀತಿ ಇರುತ್ತದೆ. ಮನುಷ್ಯನ ವಯೋಮಾನದಲ್ಲಿ ಇವೆಲ್ಲವು ಬಂದು ಹೋಗುತ್ತದೆ. ಅಂತಿಮವಾಗಿ ಸಹಿಷ್ಣುತೆ ಜೀವನದಲ್ಲಿ ಎಷ್ಟು ಮುಖ್ಯ ಎಂಬುದನ್ನು ಹೇಳುವ ಪ್ರಯತ್ನವೇ ಚಿತ್ರದ ತಿರುಳಾಗಿದೆ’ ಎಂದು ಚಿತ್ರದ ಕಥಾಹಂದರದ ಬಗ್ಗೆ ಮಾಹಿತಿ ನೀಡಿದರು ನಿರ್ದೇಶಕರು.

“ತ್ರಿಕೋನ’ ಚಿತ್ರವನ್ನು ಬೆಂಗಳೂರು, ಸುಬ್ರಮಣ್ಯ, ಕಡಬ, ಪುತ್ತೂರು, ಮಂಗಳೂರು, ಸಕಲೇಶಪುರ ಸುತ್ತಮುತ್ತ ಸುಮಾರು 50 ದಿನಗಳ ಕಾಲ ನಾಲ್ಕು ಹಂತದಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇಲ್ಲಿಯವರೆಗೆ ಸ್ಟಂಟ್‌ಮ್ಯಾನ್‌, ಪೋಷಕ ಕಲಾವಿದ, ಕರಾಟೆ ಪಟು ಆಗಿ ಗುರುತಿಸಿಕೊಂಡಿರುವ, ಹಲವು ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವ ರಾಜ್‌ವೀರ್‌ ಚಿತ್ರದಲ್ಲಿ ಯುವ ಉದ್ಯಮಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ನಲವತ್ತರ ವಯಸ್ಸಿನ ಜೋಡಿಗಳಾಗಿ ಅಚ್ಯುತರಾವ್‌-ಸುಧಾರಾಣಿ, ಹಿರಿಯ ದಂಪತಿಗಳಾಗಿ ಸುರೇಶ್‌ ಹೆಬ್ಳಿಕರ್‌-ಲಕ್ಷ್ಮೀ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಸಾಧು ಕೋಕಿಲ, ಮಾರುತೇಶ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಕನ್ನಡ ಆವೃತ್ತಿಯ ಎರಡು ಹಾಡುಗಳಿಗೆ ಸುರೇಂದ್ರ ನಾಥ್‌ ಸಂಗೀತ ಸಂಯೋಜನೆಯಿದ್ದು, ಶ್ರೀನಿವಾಸ್‌ ಛಾಯಾಗ್ರಹಣ, ಜೀವನ್‌ ಪ್ರಕಾಶ್‌ ಸಂಕಲನ ಕಾರ್ಯ­ವಿದೆ. ಸುಮಾರು ಮೂರು ವರ್ಷಗಳ ಹಿಂದೆ ಶುರುವಾದ “ತ್ರಿಕೋನ’ ಚಿತ್ರ ಸದ್ಯ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿದ್ದು, ಇದೇ ಫೆಬ್ರವರಿ ವೇಳೆಗೆ ಚಿತ್ರವನ್ನು ತೆರೆಗೆ ತರುವ ಯೋಜನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

ಇಂದಿನಿಂದ ತೆರೆಯಲ್ಲಿ ಅನ್ನ ಪ್ರಸಾದ

Anna Movie; ಇಂದಿನಿಂದ ತೆರೆಯಲ್ಲಿ ‘ಅನ್ನ’ ಪ್ರಸಾದ

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Sandalwood; 8 ತಿಂಗಳು 150 ಸಿನಿಮಾ.. ಗೆದಿದ್ದು ಕೆಲವು, ಸೋತಿದ್ದು ಹಲವು

Sandalwood; 8 ತಿಂಗಳು 150 ಸಿನಿಮಾ.. ಗೆದ್ದಿದ್ದು ಕೆಲವು, ಸೋತಿದ್ದು ಹಲವು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.