ರೈತರ ಆತ್ಮಹತ್ಯೆ ಇಳಿಕೆ; ಇನ್ನೂ ಮುಗಿದಿಲ್ಲ ಅನ್ನದಾತನ ಸಮಸ್ಯೆ


Team Udayavani, Jan 10, 2020, 6:01 AM IST

37

ಅಸಮತೋಲನ ಮಾರುಕಟ್ಟೆ ಮತ್ತು ಬೆಳೆ ನಷ್ಟ ಮೊದಲಾದ ಸಮಸ್ಯೆಗಳಿಂದಾಗಿ ದೇಶದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. 2016ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಇಳಿಕೆಯಾಗಿದ್ದು, ಆದರೆ ಕೃಷಿ ಕಾರ್ಮಿಕರ ಸಾವಿನ ಪ್ರಕರಣಗಳಲ್ಲಿ ಏರಿಕೆಯಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ಮಾಡಿದೆ.

ಎನ್‌ಸಿಆರ್‌ಬಿ ಹಂಚಿಕೊಂಡ ಮಾಹಿತಿಯ ಪ್ರಕಾರ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಶೇ.21ರಷ್ಟು ಇಳಿಕೆಯಾಗಿದ್ದು, 2018ರಲ್ಲಿ ಒಟ್ಟು 10,349 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2017ರಲ್ಲಿ 10,655 ಮತ್ತು 2016ರಲ್ಲಿ 11,379 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.

ತಿಂಗಳಿಗೆ 948 ಪ್ರಕರಣ
ವರದಿಯ ಪ್ರಕಾರ 2018ರಲ್ಲಿ ತಿಂಗಳಿಗೆ ಸರಾಸರಿ 948ರಂತೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರತಿದಿನ 31 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.

5,763 ಬಲಿ
2018ರಲ್ಲಿ ಭೂ ಮಾಲಕರು ಮತ್ತು ಸಾಗುವಳಿದಾರರು ಸೇರಿದಂತೆ ಒಟ್ಟಾರೆ 5,763 ರಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2015ರ ಅಂಕಿ ಅಂಶಗಳಿಗೆ ಹೋಲಿಸಿದರೆ 2,244ರಷ್ಟು ಪ್ರಕರಣಗಳು ಕಡಿಮೆಯಾಗಿವೆ. 2015ರಲ್ಲಿ 8,007 ಭೂಮಾಲಕರು ಮತ್ತು ಸಾಗುವಳಿದಾರರು ಆತ್ಮಹತ್ಯೆ ಮಾಡಿಕೊಂಡಿದ್ದರು.

ಕೃಷಿ ಕಾರ್ಮಿಕರ ಸಾವು ಹೆಚ್ಚಳ
2018ರಲ್ಲಿ 4,586 ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿ ಕೊಂಡಿದ್ದು, 2016ಕ್ಕೆ ಹೋಲಿಸಿದ್ದರೆ 532 ಪ್ರಕರಣಗಳು ಕಡಿಮೆಯಾಗಿವೆ. 2015ರಲ್ಲಿ 4,595 ಕೃಷಿಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದರು.

ರಾಜ್ಯಕ್ಕೆ 2ನೇ ಸ್ಥಾನ
2018ರಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ 10,349 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 5,763 ಮಂದಿ ಬೆಳೆಗಾರರು ಮತ್ತು 4,586 ಮಂದಿ ಕೃಷಿ ಕಾರ್ಮಿಕರು. ಮಹಾರಾಷ್ಟ್ರ ಮತ್ತು ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿವೆ. ಅಂದರೆ ಈ ರಾಜ್ಯಗಳಲ್ಲಿ ಕ್ರಮವಾಗಿ 3,594 ಮತ್ತು 2,405 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಹಾರ, ಪಶ್ಚಿಮ ಬಂಗಾಲ, ಒಡಿಶಾಗಳಲ್ಲಿ ರೈತರು ಆತ್ಮಹತ್ಯೆಯನ್ನೇ ಮಾಡಿಕೊಂಡಿಲ್ಲ. ಸತತ ಮೂರನೇ ವರ್ಷ ಈ ಕ್ಷೇತ್ರದಿಂದ ವರದಿಯಾದ ಆತ್ಮಹತ್ಯೆಗಳ ಸಂಖ್ಯೆ ಕಡಿಮೆ.

ಮಹಾರಾಷ್ಟ್ರ ಪ್ರಥಮ
ರಾಷ್ಟ್ರವ್ಯಾಪ್ತಿಯಾಗಿ ದಾಖಲಾದ 5,763 ರೈತರ ಆತ್ಮಹತ್ಯೆಗಳ ಪೈಕಿ ಸುಮಾರು 2,043 ಪ್ರಕರಣಗಳು ಮಹಾರಾಷ್ಟ್ರದಲ್ಲೇ ದಾಖಲಾಗಿವೆ. ಮಹಿಳೆಯರೂ ಇದ್ದಾರೆ ಒಟ್ಟು 5,763 ಕೃಷಿ ಆತ್ಮಹತ್ಯೆ ಪ್ರಕರಣಗಳಲ್ಲಿ 306 ರೈತ ಮಹಿಳೆ ಯರು ಸೇರಿದ್ದಾರೆ. 5,109 ಕೃಷಿ ಕಾರ್ಮಿಕ ಆತ್ಮಹತ್ಯೆ ಪ್ರಕರಣಗಳಲ್ಲಿ 515 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  2016ರ ವರೆಗೆ ದೇಶದಲ್ಲಿ 3,33, 407 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ.

ಏನು ಕಾರಣ?
-ಆತ್ಮಹತ್ಯೆಗಳಿಗೆ ಪ್ರಮುಖ ಕಾರಣವೆಂದರೆ ದಿವಾಳಿತನ, ಋಣಭಾರ, ಕುಟುಂಬದ ಸಮಸ್ಯೆಗಳು. ಕೃಷಿ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದರೆ ಬೆಳೆ ವೈಫ‌ಲ್ಯ, ಅನಾರೋಗ್ಯ ಮತ್ತು ಮಾದಕ ದ್ರವ್ಯ ಸೇವನೆ /ಮದ್ಯದ ಚಟ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

ನಾನೂ ಸೀನಿಯರ್‌ ಲೀಡರ್‌, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ

ನಾನೂ ಸೀನಿಯರ್‌ ಲೀಡರ್‌, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ

ಚುನಾವಣೆ ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

Election: ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.