ನಾಡಿನ ವಿವಿಧೆಡೆ ಪೇಜಾವರಶ್ರೀ ಸಂಸ್ಮರಣೆ, ಆರಾಧನೆ


Team Udayavani, Jan 10, 2020, 8:00 AM IST

51

ಉಡುಪಿ/ಬೆಂಗಳೂರು: ಬೆಂಗಳೂರು, ಉಡುಪಿ, ಮುಂಬಯಿ, ದಿಲ್ಲಿ, ಚೆನ್ನೈ, ಹುಬ್ಬಳ್ಳಿ-ಧಾರವಾಡ ಸಹಿತ ನಾಡಿನ 30ಕ್ಕೂ ಹೆಚ್ಚು ಕಡೆಗಳಲ್ಲಿ ಗುರುವಾರ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರ ಆರಾಧನೋತ್ಸವ ನಿಮಿತ್ತ ಅವರ ಸಂಸ್ಮರಣೆ, ಅನ್ನಸಂತರ್ಪಣೆ ನಡೆಯಿತು.

ವಿದ್ಯಾಪೀಠದಲ್ಲಿ ಯತಿಗಳ ಸಮಾವೇಶ
ಸ್ವಾಮೀಜಿಯವರನ್ನು ವೃಂದಾವನ ಮಾಡಿದ ಸ್ಥಳ ಬೆಂಗಳೂರು ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಯತಿಗಳ ಸಮಾವೇಶ ನಡೆಯಿತು. ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು, ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥರು, ಭಂಡಾರಕೇರಿ ಮಠದ ಶ್ರೀ ವಿದ್ಯೆಶತೀರ್ಥರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥರು, ಸೋಸಲೆ ಮಠದ ಶ್ರೀ ವಿದ್ಯಾಶ್ರೀಶತೀರ್ಥರು ಹಾಗೂ ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ಶ್ರೀಪಾದರು ಸೇರಿದಂತೆ ಹಲವು ಯತಿಗಳ ಪಾಲ್ಗೊಂಡಿದ್ದರು.

ಗುರುಗಳ ಆಶಯದಂತೆ ಪ್ರಯತ್ನ ಅಗತ್ಯ
ಕೃಷ್ಣನ ಉಪದೇಶದ ಮೂಲಕ ಭಕ್ತ ಸಮೂಹಕ್ಕೆ ಮಾರ್ಗದರ್ಶನ ನೀಡಿದರು. ಜ್ಯೋತಿ ಬತ್ತಿ ಹೋಗುವ ಮುನ್ನ ಹತ್ತಾರು ದೀಪಗಳಿಗೆ ಬೆಳಗುವ ಶಕ್ತಿ ನೀಡಿ ಹೋಗುತ್ತದೆೆ. ಅದೇ ರೀತಿಯಲ್ಲೇ ನಾವು ನಮ್ಮ ಶ್ರೀಗಳನ್ನು ಕಾಣೋಣ. ಕೃಷ್ಣ ಹೇಳಿದಂತೆ ನಿಷ್ಕಾಮ ಮನಸ್ಸಿನಿಂದ ಕೆಲಸ ಮಾಡಬೇಕು. ಆಗ ಜೀವನದಲ್ಲಿ ಸದ್ಗತಿ ಕಾಣಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ಇರಬೇಕು ಎಂದು ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳು ಹೇಳಿದರು.

ಉಡುಪಿಯಲ್ಲಿ ನುಡಿನಮನ
ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪೇಜಾವರ ಶ್ರೀಗಳ ಭಾವಚಿತ್ರದ ಎದುರು ದೀಪ ಬೆಳಗಿಸಿ ನುಡಿನಮನ ಸಲ್ಲಿಸಿದರು.
ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಪೇಜಾವರ ಮಠ, ತಲಪಾಡಿಯ ಕಣ್ವತೀರ್ಥ ಮಠ, ಪೇಜಾವರ ಮೂಲಮಠ, ಪೆರ್ಣಂಕಿಲ ದೇವಸ್ಥಾನ, ಮುಚ್ಚಲ ಕೋಡು ದೇವಸ್ಥಾನ, ವಿದ್ಯೋದಯ ಸಮೂಹ ಸಂಸ್ಥೆ, ಪಾಜಕದ ಆನಂದ ತೀರ್ಥ ವಿದ್ಯಾಲಯ, ರಾಮಕುಂಜದ ವಿದ್ಯಾಸಂಸ್ಥೆಗಳಲ್ಲಿ ಶ್ರೀಗಳ ಸ್ಮರಣೆ, ಅನ್ನಸಂತರ್ಪಣೆ ನಡೆಯಿತು. ವಿವಿಧ ಸಂಘ ಸಂಸ್ಥೆಗಳಲ್ಲಿ ಭಜನೆಗಳ ಮೂಲಕ ಗೌರವಾರ್ಪಣೆ ಸಲ್ಲಿಸಲಾಯಿತು.

ಬೆಂಗಳೂರಿನಲ್ಲಿ ಪೀಣ್ಯ, ಕನಕಪುರ, ನಾಗರಬಾವಿ, ಸಂಜಯನಗರ, ಗಿರಿನಗರ, ಕೋಣನಕುಂಟೆ
ಮೊದಲಾ ದೆಡೆ, ಬಳ್ಳಾರಿ, ಮೈಸೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ಮೊದಲಾದೆಡೆ ಅನ್ನಸಂತರ್ಪಣೆ, ಸಂಸ್ಮರಣೆ ಜರಗಿತು.

ಜ. 11ರ ಸಂಜೆ ಬೆಂಗಳೂರಿನ ನ್ಯಾಶನಲ್‌ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ನುಡಿನಮನ, ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಅದೇ ದಿನ ತುಮಕೂರು ಮೊದಲಾದೆಡೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ವಿದ್ಯಾಪೀಠಕ್ಕೆ ಖರ್ಗೆ ಭೇಟಿ
ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠಕ್ಕೆ ಭೇಟಿ ನೀಡಿ ಶ್ರೀಗಳ ವೃಂದಾವನದ ದರ್ಶನ ಪಡೆದರು. ನಮ್ಮಲ್ಲಿ ವೈಚಾರಿಕ ಭಿನ್ನಾಭಿಪ್ರಾಯಗಳು ಇದ್ದರೂ ಅವರು ಉದಾರ ಮನಸ್ಸಿನಿಂದ ನಮ್ಮನ್ನು ಕಾಣುತ್ತಿದ್ದರು ಎಂದರು. ಉಡುಪಿ ಮಠಕ್ಕೆ ನಾನು ಅನೇಕ ಬಾರಿ ಭೇಟಿ ನೀಡಿದ್ದೇನೆ. ಅವರು ನಮ್ಮ ಅಭಿಪ್ರಾಯಗಳಿಗೂ ಮನ್ನಣೆ ನೀಡುತ್ತಿದ್ದರು. ಧಾರ್ಮಿಕ ಚಿಂತನೆ ಅಷ್ಟೇ ಅಲ್ಲ, ದೇಶದ ಬಗ್ಗೆ ಹಲವು ಸಲಹೆಗಳನ್ನು ನೀಡುತ್ತಿದ್ದರು ಎಂದು ಹೇಳಿದರು.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.