ಸುಮಂತ್‌ ಗೋವಿಂದ ನಾಮ ಸ್ಮರಣೆ!

3 ವರ್ಷಗಳ ಬಳಿಕ ಹೊಸ ಜೋಶ್‌ನಲ್ಲಿ ಕಂ ಬ್ಯಾಕ್‌

Team Udayavani, Jan 11, 2020, 7:03 AM IST

Sumanth-Shylendra

ಕನ್ನಡದ ಹಿರಿಯ ನಿರ್ಮಾಪಕ ಎಸ್‌. ಶೈಲೇಂದ್ರ ಬಾಬು ಪುತ್ರ ಸುಮಂತ್‌ ಶೈಲೇಂದ್ರ ಈ ಬಾರಿ “ಗೋವಿಂದ’ನ ನಾಮ ಸ್ಮರಣೆ ಮಾಡುತ್ತ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಹೌದು, 2017ರಲ್ಲಿ ತೆರೆಕಂಡ “ಲೀ’ ಚಿತ್ರದ ನಂತರ ಕನ್ನಡದಲ್ಲಿ ಸುಮಂತ್‌ ಶೈಲೇಂದ್ರ ಅಭಿನಯದ ಯಾವ ಚಿತ್ರಗಳೂ ಬಿಡುಗಡೆಯಾಗಿರಲಿಲ್ಲ. ಇದರ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸುಮಂತ್‌, ಮತ್ತೆ ಚಿತ್ರರಂಗಕ್ಕೆ ಬರುತ್ತಾರಾ, ಸಿನಿಮಾಗಳನ್ನು ಮಾಡುತ್ತಾರಾ ಎಂಬ ಯಾವ ಪ್ರಶ್ನೆಗಳಿಗೂ ಉತ್ತರ ಸಿಕ್ಕಿರಲಿಲ್ಲ.

ಆದರೆ ಈಗ ಸುಮಂತ್‌ ಅದೆಲ್ಲದಕ್ಕೂ ಉತ್ತರ ನೀಡಲು ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈಗಾಗಲೇ ಸುಮಂತ್‌ ಸದ್ದಿಲ್ಲದೆ “ಗೋವಿಂದ ಗೋವಿಂದ’ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಚಿತ್ರದ ಚಿತ್ರೀಕರಣ ಕೂಡ ಒಂದಷ್ಟು ಪೂರ್ಣಗೊಂಡಿದೆ. ಸುಮಾರು ಎರಡೂವರೆ ವರ್ಷದ ನಂತರ ಸುಮಂತ್‌ ಈ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದ್ದು, ಚಿತ್ರಕ್ಕಾಗಿ ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದಾರೆ.

ಪಕ್ಕಾ ಕಾಮಿಡಿ ಕಂ ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಗೋವಿಂದ ಗೋವಿಂದ’ ಚಿತ್ರದಲ್ಲಿ ಸುಮಂತ್‌, ಅನೇಕ ವರ್ಷಗಳಿಂದ ಪಿಯುಸಿ ಫೇಲ್‌ ಆಗುತ್ತಲೇ ಬರುತ್ತಿರುವ ಹುಡುಗನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. “ಗೋವಿಂದ ಗೋವಿಂದ’ ಚಿತ್ರದ ಮೂಲಕ ರೀ-ಎಂಟ್ರಿ ಕೊಡುವುದರ ಬಗ್ಗೆ ಮಾತನಾಡುವ ಸುಮಂತ್‌, “ಕನ್ನಡದ ನಂತರ ತೆಲುಗಿನಲ್ಲಿ ಒಂದು ಚಿತ್ರದಲ್ಲಿ ಅಭಿನಯಿಸಿದೆ. ಅದಾದ ನಂತರ ಮದುವೆಯಾಯ್ತು. ಫ್ಯಾಮಿಲಿಗಾಗಿ ಒಂದಷ್ಟು ಸಮಯ ತೆಗೆದಿರಿಸಬೇಕಾಯ್ತು.

ಇದರ ನಡುವೆ ಕನ್ನಡದಲ್ಲಿ ಕೆಲವು ಆಫ‌ರ್ ಬಂದರೂ, ಸಬ್ಜೆಕ್ಟ್ ಇಷ್ಟವಾಗದಿದ್ದರಿಂದ ಯಾವುದನ್ನೂ ಒಪ್ಪಿಕೊಂಡಿ ರಲಿಲ್ಲ. ಹೀಗಾಗಿ ಸುಮಾರು ಎರಡೂವರೆ- ಮೂರು ವರ್ಷಗಳ ಕಾಲ ಸಿನಿಮಾಗಳಿಂದ ಸ್ವಲ್ಪ ಗ್ಯಾಪ್‌ ಆಗಿತ್ತು. ಮತ್ತೆ ಒಂದೊಳ್ಳೆ ಸಿನಿಮಾದ ಮೂಲಕ ಆಡಿಯನ್ಸ್‌ ಮುಂದೆ ಬರಬೇಕು ಅಂಥ ಕಾಯುತ್ತಿದೆ. ಅದೇ ವೇಳೆ “ಗೋವಿಂದ ಗೋವಿಂದ’ ಸಿನಿಮಾ ಸಿಕ್ಕಿತು. ನಾನು ಇಲ್ಲಿಯ ವರೆಗೆ ಮಾಡಿದ ಸಿನಿಮಾಗಳಿಗಿಂತ ಇದರ ಕಥೆ ತುಂಬ ವಿಭಿನ್ನವಾಗಿದ್ದರಿಂದ, ಮೊದಲು ಸ್ವಲ್ಪ ಸಮಯ ತೆಗೆದುಕೊಂಡೆ.

ನಂತರ ನಿರ್ದೇಶಕರು, ನಿರ್ಮಾಪಕರು, ಚಿತ್ರತಂಡ ಭರವಸೆ ತುಂಬಿದ ಮೇಲೆ ಸಿನಿಮಾ ಒಪ್ಪಿಕೊಂಡೆ’ ಎನ್ನುತ್ತಾರೆ. ಇನ್ನು “ಗೋವಿಂದ ಗೋವಿಂದ’ ಚಿತ್ರಕ್ಕೆ ನವ ನಿರ್ದೇಶಕ ತಿಲಕ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇಲ್ಲಿಯವರೆಗೆ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ತಿಲಕ್‌, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹಿರಿತೆರೆಗೆ ಪರಿಚಯವಾಗುತ್ತಿದ್ದಾರೆ.

ಚಿತ್ರದಲ್ಲಿ ಸುಮಂತ್‌ ಶೈಲೇಂದ್ರಗೆ ನಾಯಕಿಯಾಗಿ ಕವಿತಾ ಗೌಡ ಜೋಡಿ. ಜಾಕಿ ಭಾವನಾ ಕೂಡ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರೂಪೇಶ್‌ ಶೆಟ್ಟಿ, ಬೆನಕ ಪವನ್‌, ಅಚ್ಯುತ ಕುಮಾರ್‌, ವಿಜಯ್‌ ಚಂಡೂರ್‌, ಶೋಭರಾಜ್‌, ಸುನೇತ್ರಾ ಪಂಡಿತ್‌, ಪದ್ಮಾ ವಸಂತಿ, ಗೋವಿಂದೇಗೌಡ, ಶ್ರೀನಿವಾಸ ಪ್ರಭು ಇತರರು ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಸದ್ಯ “ಗೋವಿಂದ ಗೋವಿಂದ’ ಚಿತ್ರದ ಚಿತ್ರೀಕರಣ ಅಂತಿಮ ಹಂತದಲ್ಲಿದ್ದು, ಇದೇ ಏಪ್ರಿಲ್‌ಗೆ ತೆರೆಗೆ ಬರುವ ಸಾಧ್ಯತೆ ಇದೆ. ಹೊಸ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರೋದಕ್ಕೆ ರೆಡಿಯಾಗಿರುವ “ಗೋವಿಂದ ಗೋವಿಂದ’ ಎಷ್ಟರ ಮಟ್ಟಿಗೆ ಸುಮಂತ್‌ ಕೈ ಹಿಡಿಯುತ್ತಾನೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.