ವಿಮಾ ಕಂತಿಗೆ ಜಿಎಸ್‌ಟಿ: ಆಕ್ರೋಶ


Team Udayavani, Jan 11, 2020, 3:00 AM IST

vima-kantu

ಚಿಕ್ಕಬಳ್ಳಾಪುರ: ಭಾರತೀಯ ಜೀವಿ ವಿಮಾ ನಿಗಮದಲ್ಲಿ ಪಾಲಿಸಿದಾರರ ಮೇಲೆ ವಿಧಿಸುತ್ತಿರುವ ಜಿಎಸ್‌ಟಿಯನ್ನು ಕೂಡಲೇ ರದ್ದುಗೊಳಿಸಿ ಪಾಲಿಸಿದಾರರ ಬೋನಸ್‌ನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶುಕ್ರವಾರ ಜಿಲ್ಲಾ ಕೇಂದ್ರದ ಎಲ್‌ಐಸಿ ಶಾಖಾ ಕಚೇರಿ ಎದುರು ಎಲ್‌ಐಸಿ ಪ್ರತಿನಿಧಿಗಳ ಒಕ್ಕೂಟದ ಸದಸ್ಯರು ಪ್ರತಿಭಟನಾ ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು.

ಎಲ್‌ಐಸಿ ಪ್ರತಿನಿಧಿಗಳ ಒಕ್ಕೂಟದ ವಿಭಾಗೀಯ ಅಧ್ಯಕ್ಷ ವಿ.ರವೀಂದ್ರನಾಥ್‌ ನೇತೃತ್ವದಲ್ಲಿ ಜಿಲ್ಲೆಯ ಎಲ್‌ಐಸಿ ಪ್ರತಿನಿಧಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಡೀ ದಿನ ಧರಣಿ ನಡೆಸಿ ಗಮನ ಸೆಳೆದು ಪಾಲಿಸಿದಾರರ ಮೇಲೆ ಜಿಎಸ್‌ಟಿ ವಿಧಿಸುತ್ತಿರುವುದನ್ನು ತೀವ್ರ ಖಂಡಿಸಿ ಕೂಡಲೇ ಜಿಎಸ್‌ಟಿ ಹಾಕುವುದನ್ನು ಕೇಂದ್ರ ಸರ್ಕಾರ ಕೈ ಬಿಡಬೇಕೆಂದರು.

ಕಳವಳ: ಪಾಲಿಸಿದಾರರ ಮೇಲೆ ಜಿಎಸ್‌ಟಿ ವಿಧಿಸುತ್ತಿರುವುದರಿಂದ ಜೀವ ವಿಮಾ ಕಂತು ಪಾವತಿ ಮಾಡುವ ಪಾಲಿಸಿದಾರರ ಮೇಲೆ ಹೆಚ್ಚು ಆರ್ಥಿಕ ಹೊರೆ ಆಗುತ್ತದೆ. ಇದರಿಂದ ಪ್ರತಿನಿಧಿಗಳ ವಹಿವಾಟು ಮೇಲೆ ದುಷ್ಪರಿಣಾಮ ಬೀರುತ್ತದೆ. ಎಲ್‌ಐಸಿ ದೇಶದ ಆರ್ಥಿಕ ಭದ್ರತೆಗೆ ಸಾಕಷ್ಟು ಕೊಡುಗೆ ನೀಡಿದ್ದು, ಇಂತಹ ಸಂದರ್ಭದಲ್ಲಿ ಪಾಲಿಸಿದಾರರ ಮೇಲೆ ಜಿಎಸ್‌ಟಿ ಹಾಕುವುದರಿಂದ ಅದರ ನೇರ ಪರಿಣಾಮ ಪ್ರತಿನಿಧಿಗಳ ಮೇಲೆ ಉಂಟಾಗುತ್ತದೆ ಎಂದು ಪ್ರತಿಭಟನಾ ನಿರತ ಎಲ್‌ಐಸಿ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಚಿಕ್ಕಬಳ್ಳಾಪುರ ಶಾಖಾ ಅಧ್ಯಕ್ಷ ಎಂ.ಸೋಮಶೇಖರ್‌ ಮಾತನಾಡಿ, ಕೇಂದ್ರ ಸರ್ಕಾರ ಪಾಲಿಸಿದಾರರ ವಿಮಾ ಕಂತಿನ ಮೇಲೆ ಜಿಎಸ್‌ಟಿ ರದ್ದುಗೊಳಿಸಿ, ಪಾಲಿಸಿದಾರರ ಬೋನಸ್‌ ಹೆಚ್ಚಿಸಬೇಕು. ಐಆರ್‌ಡಿಎ ಪ್ರಕಾರ ಪ್ರತಿನಿಧಿಗಳ ಗ್ರೂಪ್‌ ಇನುÏರೆನ್ಸ್‌ ಮತ್ತು ಗ್ರಾಚ್ಯುಟಿಯನ್ನು ಹೆಚ್ಚಿಸಿ ಪ್ರತಿನಿಧಿಗಳ ಹಿತ ಕಾಯಬೇಕೆಂದರು.

ಪಾಲಿಸಿ ಮಾಡಿಸಲು ಹಿಂದೇಟು: ಈಗಾಗಲೇ ಐಆರ್‌ಡಿಎ ದೃಢೀಕರಿಸಿರುವ ಪ್ರತಿನಿಧಿಗಳ ಎಲ್ಲಾ ಬೇಡಿಕೆಗಳನ್ನು ಎಲ್‌ಐಸಿ ಆಡಳಿತ ಮಂಡಳಿ ಸಮರ್ಪಕವಾಗಿ ಜಾರಿಗೊಳಿಸಬೇಕೆಂದರು. ಎಲ್‌ಐಸಿ ನಂಬಿಕೊಂಡು ದೇಶದಲ್ಲಿ ಲಕ್ಷಾಂತರ ಪ್ರತಿನಿಧಿಗಳು ಇದ್ದಾರೆ. ಆದರೆ ಇತ್ತೀಚೆಗೆ ಹಲವು ನಿರ್ಧಾರಗಳು ಪ್ರತಿನಿಧಿಗಳ ವಾರ್ಷಿಕ ಗುರಿ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪ್ರಮುಖವಾಗಿ ಜಿಎಸ್‌ಟಿ ವಿಧಿಸುತ್ತಿರುವುದರಿಂದ ಯಾರು ಪಾಲಿಸಿ ಮಾಡಿಸಲು ಮುಂದೆ ಬರುತ್ತಿಲ್ಲ ಎಂದರು. ಅನೇಕ ಬಾರಿ ಸಾಕಷ್ಟು ಹೋರಾಟ, ಧರಣಿ ನಡೆಸಿ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಬೇಡಿಕೆಗಳು ಈಡೇರಿಲ್ಲ ಎಂದರು.

ಪ್ರತಿಭಟನೆಯಲ್ಲಿ ಎಲ್‌ಐಸಿ ಪ್ರತಿನಿಧಿಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಮೋಹನ್‌ಬಾಬು, ಖಜಾಂಚಿ ರಮೇಶ್‌ಗುಪ್ತಾ, ಸದಸ್ಯರಾದ ಟಿ.ಸಿ.ಲಕ್ಷ್ಮಣ್‌, ಗೌರಿಬಿದನೂರು ಮಂಜುನಾಥ್‌, ಬಾಗೇಪಲ್ಲಿ ಬೈಯ್ನಾರೆಡ್ಡಿ, ಸಿ.ಎಸ್‌.ನಾರಾಯಣ, ವೆಂಕಟೇಶ್‌ಪ್ರಸಾದ್‌, ವೆಂಕಟಶಿವಾರೆಡ್ಡಿ, ಬಿ.ಎನ್‌.ಗುರುರಾಜ್‌, ಶ್ರೀಕಾಂತ್‌, ಚಂದ್ರಕೀರ್ತಿ, ಎನ್‌.ರಾಮಚಂದ್ರರೆಡ್ಡಿ ಸೇರಿದಂತೆ ಅನೇಕ ಎಲ್‌ಐಸಿ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನ್ಯಾಯಯುತವಾದ ಬೇಡಿಕೆಗಳು ಈಡೇರಿಸದಿದ್ದಲ್ಲಿ ಜ.18, 20 ರಂದು ಮತ್ತೂಮ್ಮೆ ಶಾಂತಿಯುತ ಪ್ರತಿಭಟಿನೆ ನಡೆಸಲಾಗುವುದು. ಅಷ್ಟರೊಳಗಾಗಿ ಎಲ್‌ಐಸಿ ಆಡಳಿತ ಮಂಡಳಿಯು ಪ್ರತಿನಿಧಿಗಳು ಮುಂದಿಟ್ಟಿರುವ ಬೇಡಿಕೆಗಳು ಈಡೇರದಿದ್ದ ಪಕ್ಷದಲ್ಲಿ ಜ.21 ರಂದು ದೇಶವ್ಯಾಪ್ತಿ ಎಲ್ಲಾ ಶಾಖೆಗಳಲ್ಲಿ ಹೊಸ ಪಾಲಿಸಿಗಳು, ರಿನಿವಲ್ಸ್‌ ಹಾಗೂ ಆ ದಿನದ ಎಲ್‌ಐಸಿ ಶಾಖೆಗಳ ಪೂರ್ಣ ವಹಿವಾಟನ್ನು ಸ್ಥಗಿತಗೊಳಿಸಿ ಧ‌ರಣಿ ನಡೆಸಲಾಗುವುದು.
-ವಿ.ರವೀಂದ್ರನಾಥ್‌, ಪ್ರತಿನಿಧಿಗಳ ಒಕ್ಕೂಟದ ವಿಭಾಗೀಯ ಅಧ್ಯಕ್ಷರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.