ಅವನತಿಯತ್ತ ದೇಶೀ ರಾಸುಗಳ ಸಂತತಿ


Team Udayavani, Jan 11, 2020, 3:00 AM IST

avanati

ಹಿರೀಸಾವೆ: ಹೈನುಗಾರಿಕೆಗೆ ಜೆರ್ಸಿ ಹಸುಗಳನ್ನು ಸಾಕುತ್ತಿರುವುದಲ್ಲದೆ, ಅಧುನಿಕ ಕೃಷಿಯಿಂದ ಯಂತ್ರೋಪಕರಣ ಬಳಕೆ ಮಾಡುತ್ತಿರುವುದರಿಂದ ನಾಟಿರಾಸುಗಳ ಸಂತತಿ ಕ್ಷೀಣಿಸುತ್ತಿದೆ ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಹಿರೀಸಾವೆ ಹೋಬಳಿ ಬೂಕನ ಬೆಟ್ಟದ ರಂಗನಾಥಸ್ವಾಮಿ 89ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ರೈತರು ದೇಶೀಯ ರಾಸು ಸಂತತಿ ಉಳಿಸಲು ಮುಂದಾಗಲಿ: ಎರಡ್ಮೂರು ದಶಕದಿಂದ ದೇಶೀಯ ತಳಿಗಳ ಸಂತತಿ ಕಡಿಮೆಯಾಗುತ್ತಿದೆ. ಇವುಗಳನ್ನು ಉಳಿಸಲು ರೈತರು ಮುಂದಾಗಬೇಕಿದೆ. ನಾಟಿ ರಾಸುಗಳ ಹಾಲು ಉತ್ಕೃಷ್ಟವಾಗಿರುವುದಲ್ಲದೆ, ಹೆಚ್ಚು ಬೇಡಿಕೆಯಿದೆ. ಈ ಹಾಲನ್ನು ಹೆಚ್ಚು ಬೆಲೆಗೆ ಕೊಳ್ಳುತ್ತಾರೆ. ಬೇಸಿಗೆ, ಚಳಿ ಹಾಗೂ ಮಳೆಗಾಲಕ್ಕೆ ಹೊಂದಿಕೊಳ್ಳುತ್ತವೆ. ಯಾವಾಗಲು ಹಸಿರು ಮೇವು ಕೆಳುವುದಿಲ್ಲ. ಎಲ್ಲಾ ಹವಾಗುಣಕ್ಕೆ ಹೊಂದುಕೊಳ್ಳುವುದರಿಂದ ರೈತರಿಗೆ ಹೆಚ್ಚು ಹೊರಯಾಗುವುದಿಲ್ಲ. ಇನ್ನು ಬೇಸಾಯದ ವೇಳೆಯಲ್ಲಿ, ಇವುಗಳನ್ನು ಉಪಯೋಗಿಸುವುದರಿಂದ ಯಂತ್ರದ ಅವಲಂಬನೆ ತಪ್ಪಲಿದೆ ಎಂದು ತಿಳಿಸಿದರು.

ವಿವಿಧ ಜಿಲ್ಲೆ ಹಾಗೂ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸೇರುವುದರಿಂದ ಸರ್ಕಾರದ ವಿವಿಧ ಇಲಾಖೆ ಯೋಜನೆಗಳು ರೈತರಿಗೆ ತಲುಪಿಸುವ ಉದ್ದೇಶದಿಂದ ಪ್ರತಿ ವರ್ಷ ಕೃಷಿ ಮೇಳ ಆಯೋಜನೆ ಮಾಡಲಾಗುತ್ತಿದೆ. ಜಾತ್ರೆಯಲ್ಲಿ ರಾಸುಗಳನ್ನು ಕಟ್ಟಿರುವ ರೈತರಿಗೆ, ಸಮಸ್ಯೆ ಉಂಟಾದಲ್ಲಿ ತಾಲೂಕು ಆಡಳಿತದ ಗಮನಕ್ಕೆ ತರುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿದರು.

ನಿರೀಕ್ಷೆಗೂ ಮೀರಿ ಸೇರಿದ ಜಾನುವಾರು: ತಹಶೀಲ್ದಾರ್‌ ಜೆ.ಬಿ.ಮಾರುತಿ ಮಾತನಾಡಿ, ಜಾತ್ರೆಯ ಪ್ರಾರಂಭಕ್ಕೂ ಎರಡು ದಿನಗಳ ಮೊದಲೇ ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳು ಸೇರಿವೆ. ಈ ಬಾರಿ ನಿರೀಕ್ಷೆಗೂ ಮೀರಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಜೋಡಿರಾಸುಗಳು ಜಾತ್ರೆಗೆ ಬಂದವೆ. ಜಾತ್ರೆಗೆ ಬರುವ ಜನ-ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಜಾತ್ರೆಯಲ್ಲಿ ರಾಸುಗಳನ್ನು ಕಟ್ಟುವ ಪ್ರದೇಶದಲ್ಲಿ ಎರಡು ಕೊಳವೆ ಬಾವಿಗಳ ಸಹಾಯದಿಂದ ನೀರಿನ ಸರಬರಾಜು ಮಾಡಲಾಗುತ್ತಿದೆ. ರೈತರಿಗೂ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಜಾತ್ರೆಗೆ ಬರುವವರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಜಾತ್ರೆ ಮುಗಿಯುವವರೆಗೂ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

ರಾಸುಗಳ ಆರೋಗ್ಯ ಪರೀಕ್ಷೆ: ರಾತ್ರಿ ವೇಳೆ ವಿದ್ಯುತ್‌ ವ್ಯವಸ್ಥೆ ಕಲ್ಪಿಸಲು 40 ವಿದ್ಯುತ್‌ ಕಂಬ ನೆಟ್ಟು ಬೀದಿ ದೀಪ ಅಳವಡಿಸಲಾಗಿದೆ. ಜಾತ್ರೆ ಮುಗಿರಯುವ ವರೆಗೆ ನಿರಂತರ ವಿದ್ಯುತ್‌ ನೀಡುವಂತೆ ಸೆಸ್ಕ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಾತ್ರೆಗಾಗಿ ಪ್ರತ್ಯೇಕ ಪಶುವೈದ್ಯರ ನೇಮಕ ಮಾಡಿದ್ದು, ರಾಸುಗಳ ಆರೋಗ್ಯ ಪರೀಕ್ಷಿಸಲಾಗುತ್ತದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ ಮೇಲುಸ್ತುವಾರಿ ವಹಿಸಲಿದ್ದಾರೆ ಎಂದು ಹೇಳಿದರು.

ತಾಪಂ ಇಒ ಎಚ್‌.ಎಸ್‌.ಚಂದ್ರಶೇಖರ್‌ ಮಾತನಾಡಿ, ಜಾತ್ರೆ ಮಹೋತ್ಸವಕ್ಕೆ ರಾಜ್ಯದ ವಿವಿಧೆಡೆಯಂದ ಹೆಚ್ಚು ಜನ ಹಾಗೂ ಜಾನುವಾರು ಬಂದಿದ್ದು, ಜಾತ್ರೆಗೆ ಮೆರುಗು ಬಂದಿದೆ. ಬೇಸಿಗೆ ಇರುವುರಿಂದ ರೈತರ ಆರೋಗ್ಯದ ಮೇಲೂ ನಿಗಾವಹಿಸಲಾಗಿದ್ದು ತಾಲೂಕು ಆರೋಗ್ಯ ಇಲಾಖೆಯಿಂದ ಉಚಿತ ಚಿಕಿತ್ಸೆ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲಾಗಿದೆ ಎಂದು ನುಡಿದರು.

ಕೃಷಿ ಮೇಳದಲ್ಲಿ ಆರೋಗ್ಯ ಇಲಾಖೆ, ಪಶುಪಾಲನೆ, ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ, ಸಮಾಜ ಕಲ್ಯಾಣ ಇಲಾಖೆ, ಮೀನುಗಾರಿಕೆ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ ಹಮ್ಮಿಕೊಂಡಿದ್ದು ಹಿರೀಸಾವೆ ವ್ಯಾಪ್ತಿಯ ಸ್ತ್ರೀ ಶಕ್ತಿ ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಪಾಲ್ಗೊಂಡಿದ್ದರು.

ಹೇಮಾವತಿ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ತೋಟಿ ಜಯರಾಮ್‌, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಚನ್ನವೀರೇಗೌಡ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ಭಾನುಪ್ರಕಾಶ್‌, ಹಿರೀಸಾವೆ ಪೊಲೀಸ್‌ ಠಾಣೆಯ ಪಿಎಸ್‌ಐ ಭವಿತ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.