ಎನ್‌ಆರ್‌ಸಿ, ಸಿಎಎ ವಿವಾದ: ಗಣತಿಗೂ ಜನರ ಅಸಹಕಾರ

ಆರೋಗ್ಯ ಜಾಗೃತಿ ಯೋಜನೆ ಅನುಷ್ಠಾನಕ್ಕೆ ಸವಾಲು

Team Udayavani, Jan 11, 2020, 7:00 AM IST

CAA-Protest-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಮಂಗಳೂರು: ಎನ್‌ಆರ್‌ಸಿ ಮತ್ತು ಸಿಎಎ ಕುರಿತಾಗಿ ಉಂಟಾಗಿರುವ ವಿವಾದವು ಈಗ ಸರಕಾರದ ಇತರ ಗಣತಿ ಮತ್ತು ಸಮೀಕ್ಷೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಾರಂಭಿಸಿದೆ. ಇದ ರಿಂದಾಗಿ ಗಣತಿದಾರರು ಸಂಕಷ್ಟಕ್ಕೆ ಗುರಿ ಯಾಗುತ್ತಿದ್ದಾರೆ. ವಿಶೇಷವಾಗಿ ಈಗ ನಡೆಯುತ್ತಿರುವ ಆರೋಗ್ಯ ಇಲಾಖೆಯ “ನಾಗರಿಕರಿಗೆ ಒಂದು ಸವಾಲು’ ಕಾರ್ಯಕ್ರಮದ ಅನುಷ್ಠಾನಕ್ಕೆ ಹಲವು ರೀತಿಯ ತೊಂದರೆ ಎದುರಾಗಿದೆ.

ಈ ಕಾರ್ಯಕ್ರಮದ ಬಗ್ಗೆ ತಿಳಿವಳಿಕೆ ನೀಡಲು ಮನೆ ಮನೆಗೆ ತೆರಳುವ ಆಶಾ ಕಾರ್ಯಕರ್ತೆಯರಿಗೆ ಕೆಲವರು ಮಾಹಿತಿ ನೀಡಲು ನಿರಾಕರಿಸಿಸುತ್ತಿದ್ದಾರೆ. “ಮಾಹಿತಿ ಕಲೆ ಹಾಕಲು ಬರುವ ಆಶಾ ಅಥವಾ ಅಂಗನವಾಡಿ ಕಾರ್ಯ ಕರ್ತೆಯರಿಗೆ ಮಾಹಿತಿ ಕೊಡದಿರಿ’ ಎಂಬುದಾಗಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಸಂದೇಶ ವೈರಲ್‌ ಆಗಿದ್ದು, ಕೆಲವು ಪ್ರದೇಶಗಳಲ್ಲಿ ಕಾರ್ಯಕರ್ತೆಯರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ.

ಒಂದು ವಾರದಿಂದೀಚೆಗೆ ಬಂಟ್ವಾಳ ತಾಲೂಕಿನ ಸಜಿಪ, ಮಂಚಿ, ಮಂಗಳೂರು ತಾಲೂಕಿನ ಪಾಲಡ್ಕ, ಬೆಂಗ್ರೆ ಮತ್ತಿತರ ಕಡೆ ಆಶಾ ಕಾರ್ಯಕರ್ತೆಯರಿಗೆ ಈ ಕಹಿ ಅನುಭವ ಆಗಿದೆ. ಪಾಲಡ್ಕ ಪ್ರದೇಶದಲ್ಲಿ ಮಾಹಿತಿ ಪಡೆದುಕೊಂಡು ಬಂದ ಬಗ್ಗೆ ಗುರುವಾರ ಬೆದರಿಕೆ ಕರೆಯೂ ಬಂದಿದೆ. “ಮಾಹಿತಿ ಪಡೆದು ಭರ್ತಿ ಮಾಡಿದ ಪ್ರಶ್ನಾವಳಿ ಪತ್ರವನ್ನು ವಾಪಸ್‌ ಕೊಡಿ, ಇಲ್ಲದಿದ್ದರೆ ನಿಮ್ಮ ಕಚೇರಿಗೆ ಬರಬೇಕಾಗುತ್ತದೆೆ’ ಎಂಬುದಾಗಿ ಪಾಲಡ್ಕದಿಂದ ಕರೆ ಮಾಡಿದವರು ಹೇಳಿದ್ದಾರೆ ಎಂದು ಆರೋಗ್ಯ ಇಲಾಖೆಯ ಓರ್ವ ಅಧಿಕಾರಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಏನಿದು “ನಾಗರಿಕರಿಗೊಂದು ಸವಾಲು’ ಕಾರ್ಯಕ್ರಮ?
ಮಲೇರಿಯಾ, ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ಕಾಯಿಲೆಗಳ ಬಗ್ಗೆ ಮಾಹಿತಿ ನೀಡಿ ಈ ಕಾಯಿಲೆಗಳ ಬಗ್ಗೆ ವಹಿಸಬೇಕಾದ ಮುಂಜಾಗ್ರತೆಗಳ ಕುರಿತು ಜಾಗೃತಿ ಮೂಡಿಸುವುದು “ನಾಗರಿಕರಿ ಗೊಂದು ಸವಾಲು’ ಕಾರ್ಯ ಕ್ರಮದ ಮುಖ್ಯ ಉದ್ದೇಶ. ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿ ಇದು ನಡೆಯುತ್ತಿದೆ. ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೆಲಸ ಮಾಡುತ್ತಾರೆ. ಓರ್ವ ಆಶಾ ಕಾರ್ಯಕರ್ತೆ ಡಿಸೆಂಬರ್‌ ಮತ್ತು ಜನವರಿ ತಿಂಗಳಲ್ಲಿ 100 ಮನೆಗಳಿಗೆ ಭೇಟಿ ನೀಡ ಬೇಕಾಗಿದ್ದು, ಸೂಕ್ತ ಸಂಭಾವನೆ ನೀಡಲಾಗುತ್ತದೆ. ಮನೆ ಭೇಟಿ ಸಂದರ್ಭದಲ್ಲಿ ಅವರು 13 ಪ್ರಶ್ನೆಗಳನ್ನು ಒಳಗೊಂಡ ಪ್ರಶ್ನಾವಳಿ ಒಯ್ಯುತ್ತಿದ್ದು, ಮನೆ ಸುತ್ತಮುತ್ತ ಪರಿಶೀಲಿಸಿ, ಮನೆಮಂದಿಯಿಂದ ಮಾಹಿತಿ ಪಡೆಯಬೇಕು. ಆದರೆ ಮುಖ್ಯವಾಗಿ ಆಧಾರ್‌ ನಂಬರ್‌ ನೀಡಲು ಮತ್ತು ಸಹಿ ಮಾಡಲು ಕೆಲವರು ಹಿಂದೇಟು ಹಾಕುತ್ತಿದ್ದಾರೆ ಎನ್ನುವುದು ಕಾರ್ಯಕರ್ತೆಯರ ಅಳಲು.

ಆಶಾ ಕಾರ್ಯಕರ್ತೆಯರಿಗೆ ಕೆಲವರು ಮಾಹಿತಿ ನೀಡಲು ಹಿಂದೇಟು ಹಾಕುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ “ನಾಗರಿಕರಿಗೊಂದು ಸವಾಲು’ ಕಾರ್ಯಕ್ರಮದ ಬಗ್ಗೆ ಜನರಿಗೆ ಸಮರ್ಪಕ ಮಾಹಿತಿ ನೀಡಿ ಮನವರಿಕೆ ಮಾಡಲು ಪ್ರಯತ್ನಿಸುತ್ತೇವೆ.
– ಡಾ| ಆರ್‌. ಸೆಲ್ವಮಣಿ, ದ.ಕ. ಜಿ.ಪಂ. ಸಿಇಒ

- ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.