ಆಶಾ ಕಾರ್ಯಕರ್ತೆಯರ ಧರಣಿ


Team Udayavani, Jan 11, 2020, 2:43 PM IST

hv-tdy-1

ಹಾವೇರಿ: ವಿವಿಧ ಬೇಡಿಕೆ ಈಡೇರಿಸಲು ಆಶಾ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿದರು. ಸ್ಥಳೀಯ ಮುರುಘರಾಜೇಂದ್ರ ಮಠದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ. ರಸ್ತೆ ಮೂಲಕ ಮೈಲಾರ ಮಹದೇವ ವೃತ್ತಕ್ಕೆ ಆಗಮಿಸಿ ಸಮಾವೇಶಗೊಂಡಿತು.

ನಂತರ ಕಾರ್ಯಕರ್ತೆಯರು ಜಿಲ್ಲಾ ಸಶಸ್ತ್ರಪಡೆ ಕಚೇರಿ ಎದುರು ಧರಣಿ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಎಐಯುಟಿಯುಸಿ ರಾಜ್ಯ ಉಪಾಧ್ಯಕÒ‌ ಎಂ.ಶಶಿಧರ ಮಾತನಾಡಿ, ಇತ್ತೀಚೆಗೆ ಆಶಾ ಕಾರ್ಯಕರ್ತೆಯರು ಹಲವಾರು ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅಭೂತಪೂರ್ವ ಹೋರಾಟ ನಡೆಸಿದ್ದರಿಂದ ಸರ್ಕಾರ ಕೆಲವು ಬೇಡಿಕೆಗಳಿಗೆ ಸ್ಪಂದಿಸಿದೆ. ಆದರೆ, ಬಹುಮುಖ್ಯ ಬೇಡಿಕೆಯಾದ 15 ತಿಂಗಳ ಎಂಸಿಟಿಎಸ್‌ ಬಾಕಿ ಹಣ ಈವರೆಗೂಬಿಡುಗಡೆಯಾಗಿಲ್ಲ. ಇದರಿಂದಾಗಿ ಜನಗಳ ಮಧ್ಯೆ ಆರೋಗ್ಯ ಸೇವೆಯನ್ನು

ತಲುಪಿಸಲು ಬಸ್‌ ಚಾರ್ಜ್‌ ಇತ್ಯಾದಿ ಖರ್ಚುಗಳಿಗೆ ಅವರ ಬಳಿ ಹಣವಿಲ್ಲದಂತಾಗಿದೆ. ಆದ್ದರಿಂದ ಅನಿವಾರ್ಯವಾಗಿ ಬಾಕಿ ಹಣ ಪಾವತಿಸುವವರೆಗೂ ಕಾರ್ಯ ನಿರ್ವಹಿಸದಿರಲು ನಿರ್ಧರಿಸಿದ್ದಾರೆ ಎಂದರು. ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯಾದ್ಯಂತ ಬಂದ್‌ ಚಳವಳಿ ನಡೆಸಲು ನಿರ್ಧರಿಸಿದ್ದು, ಸರ್ಕಾರ ನ್ಯಾಯಯುತವಾಗಿ ಬರಬೇಕಾದ 15ತಿಂಗಳ ಬಾಕಿ ಹಣವನ್ನು ಕೂಡಲೇ ಪಾವತಿಸಲು ಮುಂದಾಗಬೇಕು. ಈ ಬೇಡಿಕೆ ಈಡೇರುವವರೆಗೂ “ಕೆಲಸ ಬಂದ್‌ ಚಳವಳಿ’ ನಡೆಸಲು ಕರೆ ನೀಡಿದರು.

ಸಂಘಟನೆಯ ಗೌರವ ಸಲಹೆಗಾರ ಗಂಗಾಧರ ಬಡಿಗೇರ ಮಾತನಾಡಿ, ಸೇವೆಗೆ ತಕ್ಕ ಪ್ರತಿಫಲ ದೊರಕದೇ ಆಶಾ ಕಾರ್ಯಕರ್ತೆರು ಕಂಗಾಲಾಗಿದ್ದಾರೆ. ಇಂದಿಗೂ ಪ್ರತಿ ತಿಂಗಳು ವೇತನವಿದಲ್ಲದೇ ಆಶಾ ಕಾರ್ಯರ್ತೆಯರು ಪರದಾಡುವಂತಾಗಿದೆ. ರಾಜ್ಯದಲ್ಲಿ ಕೇಂದ್ರ ಪ್ರೋತ್ಸಾಹಧನ ನೀಡುವ ಆಶಾ ಸಾಫ್ಟ್‌ ವೇತನ ಮಾದರಿಯಿಂದಾಗಿ ಕಾರ್ಯಕರ್ತೆಯರಿಗೆ ಕಳೆದ 4 ವರ್ಷಗಳಿಂದ ಸಾವಿರಾರು ರೂಪಾಯಿ ವಂಚಿತರಾಗಿದ್ದಾರೆ. ಆಂಧ್ರಪ್ರದೇಶದ ಮಾದರಿಯಲ್ಲಿ ರಾಜ್ಯದ ಆಶಾ ಕಾರ್ಯಕರ್ತೆರಿಗೆ ಗೌರವ ಧನ ನಿಗದಿ ಮಾಡಬೇಕು. ಈ ಬಗ್ಗೆ ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ, ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಕೂಡ ಸೂಕ್ತ ಸ್ಪಂದನೆ ದೊರಕಿಲ್ಲ. ಕೇವಲ ಭರವಸೆಗಳಾಗಿಯೇ ಉಳಿದಿವೆ. ಕೆಲಸಕ್ಕೆ ಪ್ರತಿಫಲ ಇಲ್ಲದೇ ಆಶಾ ಕಾರ್ಯಕರ್ತೆಯರು ಸಂಕಷ್ಟದಲ್ಲಿಯೇ ಜೀವನ ನಡೆಸುವಂತಾಗಿದೆ ಎಂದು ದೂರಿದರು.

ಕೂಡಲೇ ಸರ್ಕಾರ ಆಶಾಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡುವ ಪ್ರೋತ್ಸಾಹಧನವನ್ನು ಒಟ್ಟಿಗೆ ಸೇರಿಸಿ ಕನಿಷ್ಟ ಮಾಸಿಕ ಗೌರವಧನ 12 ಸಾವಿರ ನೀಡಬೇಕು. ಆಶಾ ಸಾಫ್ಟ್‌ಗೆ ಆಶಾ ಪ್ರೋತ್ಸಾಹಧನ ಜೋಡಣೆ ರದ್ದುಗೊಳಿಸಬೇಕು. ಕಳೆದ 15 ತಿಂಗಳಿನಿಂದ ಬಾಕಿ ಇರುವ ಎಂಸಿಟಿಎಸ್‌ ಸೇವೆಗಳ ಪ್ರೋತ್ಸಾಹಧನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ರಮೇಶ ಹೊಸಮನಿ, ಸಂಘಟನೆಯ ಜಿಲ್ಲಾಧ್ಯಕ್ಷೆ ಜಯಶೀಲಾ ಬಂಕಾಪುರಮಠ, ಮಂಜುಳಾ ಮಾಸೂರ, ಲಕ್ಷ್ಮೀ ಕಬ್ಬೂರ, ರತ್ನ ಮಕರವಳ್ಳಿ, ರೂಪಾ ಮಾನೆ, ರತ್ನ ಬೇಟಗೇರಿ, ಗೀತಾ ಮಡಿವಾಳರ, ವನಜಾಕ್ಷಿ ಅರ್ಕಚಾರಿ, ಪುಷ್ಪ ಮಾಡೂರಮಠ, ಚೇತನ ಹಿರೇಮಠ, ಅಂಬಿಕಾ ಮಹೇಂದ್ರಕರ, ಛಾಯಾ ಕುಲಕರ್ಣಿ, ಯಲ್ಲಮ್ಮ, ಈರಮ್ಮ ಚಿಕ್ಕಮಠ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.