ಅಕ್ರಮ ತಡೆಗೆ ಕಟ್ಟು ನಿಟ್ಟಿನ ನಿಗಾ ವಹಿಸಲು ಎಸಿ ಸೂಚನೆ


Team Udayavani, Jan 11, 2020, 3:57 PM IST

uk-tdy-1

ಶಿರಸಿ: ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗೃತೆ ವಹಿಸಬೇಕು ಎಂದು ಸಹಾಯಕ ಆಯುಕ್ತ ಡಾ| ಈಶ್ವರ ಉಳ್ಳಾಗಡ್ಡಿ ಸೂಚಿಸಿದರು.

ಅವರು ಶುಕ್ರವಾರ ನಗರದ ಮಿನಿ ವಿಧಾನ ಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ, ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ಜಾತ್ರೆ ಯಶಸ್ಸಿಗಾಗಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ಕೂಡ ಸಭೆ ಆಗಲಿದೆ.

ಸರಕಾರದಿಂದಲೂ ವಿಶೇಷ ಅನುದಾನ ಬರಲಿದೆ. ಆದರೆ, ಸ್ಥಳೀಯ ಮುಂಜಾಗೃತೆ ದೃಷ್ಟಿಯಲ್ಲಿ ಸಭೆ ನಡೆಸಲಾಗುತ್ತಿದ್ದು, ಜಾತ್ರೆಯ ಯಶಸ್ಸಿಗೆ ಆಯಾ ಇಲಾಖೆಗಳು ಏನೇನು ಮಾಡುತ್ತವೆ ಎಂಬ ವರದಿಯೊಂದಿಗೆ ಸಭಾಧ್ಯಕ್ಷರು ತೆಗೆದುಕೊಳ್ಳುವ ಸಭೆಗೆ ಬರಬೇಕಾಗಿದೆ. ಸಂಚಾರ, ಆರೋಗ್ಯ ಸುರಕ್ಷತೆ ಜೊತೆಗೆ ಜಾತ್ರೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲೂ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ನಟರಾಜ್‌ ರಸ್ತೆ ಭಾಗದಲ್ಲಿ ಅನಧಿಕೃತಅಂಗಡಿ ಮುಂಗಟ್ಟುಗಳನ್ನು ಹಾಕಿ ಸಂಚಾರಕ್ಕೆ ತೊಂದರೆ ಆಗುವುದನ್ನು ತಡೆಯಲಾಗುತ್ತದೆ. ಜಾತ್ರಾ ಬಯಲಿನಲ್ಲೂ ಅನ ಧಿಕೃತ ಅಂಗಡಿಗಳಿಗೆ, ಒಬ್ಬರಿಗೆ ಟೆಂಡರ್‌ ಆಗಿ ಇನ್ನೊಬ್ಬರಿಗೆ ನೀಡಿದರೆ ಆ ಬಗ್ಗೂ ಮುಂಜಾಗೃತೆ ವಹಿಸಲಾಗುತ್ತದೆ.  ಡಿಪಾಸಿಟ್‌ ಕೂಡ ವರ್ತಕರು ಇಟ್ಟು ಅಂಗಡಿ ಹಾಕುವಂತೆ ಆಗಬೇಕಿದೆ. ಅಕ್ರಮ ನಡೆಸಿದರೆ ಡಿಪಾಸಿಟ್‌ ಮುಟ್ಟುಗೋಲು ಹಾಕಿಕೊಂಡು ಕಾನೂನು ಕ್ರಮ ಜರುಗಿಸಲಾಗುತ್ತದೆ. ಜಾತ್ರಾ ವ್ಯವಸ್ಥಿತ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಜಾಗೃತ ದಳ ಮಾಡಲಾಗುತ್ತದೆ. ಜಾತ್ರಾ ನೈರ್ಮಲ್ಯಕ್ಕೆ ನಗರಸಭೆಗೆ ಜವಾಬ್ದಾರಿ ನೀಡಲಾಗಿದೆ ಎಂದರು.

ಮಾರಿಕಾಂಬಾ ದೇವಿ ಜಾತ್ರಾ ಬಯಲಿಗೆ ತೆರಳುವ ಮಾರ್ಗಕ್ಕೆ ಸಂಬಂಧಿಸಿ 22 ರಸ್ತೆಗಳನ್ನು ಬಂದ್‌ ಮಾಡಲಾಗುತ್ತದೆ. ವಿದ್ಯುತ್‌ ಸುರಕ್ಷತೆಗೆ ಆದ್ಯತೆ ನೀಡುತ್ತೇವೆ. ಕಳೆದ ಬಾರಿ ರಾಯಪ್ಪ ಹುಲೇಕಲ್‌ ಶಾಲೆಯಲ್ಲಿ ವಸತಿ ವ್ಯವಸ್ಥೆಮಾಡಲಾಗಿತ್ತು. ಸ್ವತ್ಛತೆಗೆ ಕಳೆದ ಜಾತ್ರೆಯಲ್ಲಿನಗರಸಭೆಗೆ 22 ಲ.ರೂ. ಖರ್ಚು ಬಂದಿತ್ತು. ಪ್ರತಿ ದಿನವೂ ಲಕ್ಷಾಂತರ ಭಕ್ತರು ಬರುವ ಕಾರಣದಿಂದ ಕುಡಿಯುವ ನೀರು, ಶೌಚ ಯಾವುದೇ ಸಮಸ್ಯೆ ಆಗಬಾರದು ಎಂದು 22 ಕಡೆ ಕುಡಿಯುವ ನೀರು ಹಾಗೂ 15ಕ್ಕೂ ಅಧಿಕ ಕಡೆ ಮೊಬೈಲ್‌ ಟಾಯಲೆಟ್‌ ಇಡುವುದಾಗಿ ನಗರಸಭೆ ಅಧಿಕಾರಿ ಆರ್‌.ಎಂ. ವೆರ್ಣೇಕರ್‌ ತಿಳಿಸಿದರು.

ನಗರಸಭೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ಪಕ್ಕ ಅಂಗಡಿಗಳು ಬಾರದಂತೆ ಮಾರ್ಕಿಂಗ್‌ ಮಾಡಬೇಕು. ಮಾರಿಕಾಂಬಾ ಜಾತ್ರಾ ಬಯಲಿನಲ್ಲಿ ನೀಡಲಾಗುವ ಅಂಗಡಿಗಳೂ ವಿಸ್ತಾರ ಆಗದಂತೆನೋಡಿಕೊಳ್ಳಬೇಕು ಎಂದಾಗ ದೇವಸ್ಥಾನದ ಧರ್ಮದರ್ಶಿ ಮಂಡಳಿ ಪ್ರಮುಖ ಲಕ್ಷ್ಮಣ ಕಾನಡೆ 203 ಅಂಗಡಿಗಳನ್ನು ಬಯಲಿನಲ್ಲಿನೀಡಲಾಗುತ್ತಿದ್ದು, ಅವುಗಳ ಟೆಂಡರ್‌ ದರವನ್ನು ಧರ್ಮದರ್ಶಿ ಮಂಡಳಿ ತೀರ್ಮಾನ ಮಾಡುತ್ತದೆ ಎಂದರು.

ಧರ್ಮದರ್ಶಿ ಶಾಂತಾರಾಮ ಹೆಗಡೆ ಬಂಡೀಮನೆ, ತಹಶೀಲ್ದಾರ್‌ ಆರ್‌.ಎಂ. ಕುಲಕರ್ಣಿ, ಎಸಿಎಫ್‌ ಡಿ.ರಘು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.