ಇನ್ನೂ ಸಿಕ್ಕಿಲ್ಲ ರುದ್ರಭೂಮಿಗೆ ಜಾಗ


Team Udayavani, Jan 12, 2020, 12:02 PM IST

gadaga-tdy-1

ರೋಣ: ರಾಜ್ಯ ಸರ್ಕಾರ ರುದ್ರಭೂಮಿ ಖರೀದಿಗೆ ನೀಡುವ ಹಣ ಕಡಿಮೆಯಾದ ಕಾರಣ ಭೂಮಾಲೀಕರು ತಮ್ಮ ಫಲವತ್ತಾದ ಭೂಮಿ ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಸಾರ್ವಜನಿಕರು ರುದ್ರಭೂಮಿ ಇಲ್ಲದೇ ರಸ್ತೆ ಬದಿಯಲ್ಲಿಯೇ ಶವ ಸಂಸ್ಕಾರ ಮಾಡಬೇಕಾದ ಪರಿಸ್ಥಿಯಿದೆ.

ಹೌದು. ಈ ಪರಿಸ್ಥಿತಿ ಇರುವುದು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ. ಜಿಲ್ಲಾಧಿಕಾರಿಗಳು ರುದ್ರಭೂಮಿಗೆ ಜಾಗ ಖರೀದಿಸಲು ಆಯಾ ತಾಲೂಕು ನೋಂದಣಿ ಇಲಾಖೆಯಲ್ಲಿ ಗ್ರಾಮವಾರು ನೊಂದಾವಣೆಯಾಗಿರುವ ದರಕ್ಕೆ ಮೂರು ಪಟ್ಟು ಹೆಚ್ಚು ನೀಡಿ ಖರೀದಿಸುತ್ತಿದ್ದಾರೆ. ಆದರೆ ಖಾಸಗಿ ವ್ಯಕ್ತಿಗಳು ಭೂಮಿ ಖರೀದಿಸುವಾಗ ತೆರಿಗೆ ಉಳಿಸಿಕೊಳ್ಳಲು ಕಡಿಮೆ ದರಕ್ಕೆ ನೊಂದು ಮಾಡಿಕೊಳ್ಳುತ್ತಾರೆ. ಉದಾಹರಣೆಗೆ ಖಾಸಗಿ ವ್ಯಕ್ತಿ1 ಲಕ್ಷ ರೂ.ಗೆ ಒಂದು ಎಕರೆ ಖರೀದಿ ಮಾಡಿದ್ದರೆ, ಸರ್ಕಾರ 3 ಲಕ್ಷ ಹಣವನ್ನು ನೀಡುತ್ತದೆ. ಆದರೆ ಕಪ್ಪು ಮಣ್ಣನ್ನು ಹೊಂದಿದ ಪ್ರದೇಶದಲ್ಲಿ 6 ಲಕ್ಷಕ್ಕೂ ಅಧಿಕ ದರದಲ್ಲಿ ಒಂದು ಎಕರೆ ಭೂಮಿ ಮಾರಾಟವಾಗುತ್ತಿದೆ. ಇದರಿಂದ ಸ್ಮಶಾನಕ್ಕೆ ಭೂಮಿ ಕೊಡಲು ಇಲ್ಲಿನ ರೈತರು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಮಾನವ ಸೂಚಾಂಕ ಹೊಂದಿದ ಗ್ರಾಮವೆಂದು ಪ್ರಶಸ್ತಿ ಪಡೆದ ತಾಲೂಕಿನ ಕುರಹಟ್ಟಿ ಗ್ರಾಮಕ್ಕೆ ಇಲ್ಲಿಯವರೆಗೆ ಒಂದು ರುದ್ರಭೂಮಿಯಿಲ್ಲ. ಇದರಿಂದ ಇಲ್ಲಿನ ಜನರು ಗ್ರಾಮದಲ್ಲಿ ಯಾರಾದರು ಮೃತಪಟ್ಟರೆ ಅವರನ್ನು ಗ್ರಾಮದ ಪಕ್ಕದಲ್ಲಿಯೇ ಹಾಗೂ ರಸ್ತೆ ಮೇಲೆ ಸುಡುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಈ ಗ್ರಾಮಕ್ಕೊಂದು ಗ್ರಾಪಂ ಇದ್ದು, 1000 ಮನೆಗಳು, 5000 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಆದರೆ ಇಷ್ಟೊಂದು ದೊಡ್ಡ ಗ್ರಾಮದಲ್ಲಿ ಹೆಣ ಸುಡಲು ರುದ್ರಭೂಮಿಯಿಲ್ಲ. ಇದರಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ.

ರಸ್ತೆಯಲ್ಲೇ ಶವ ಸಂಸ್ಕಾರ :  ಆರ್ಥಿಕವಾಗಿ ಸಬಲರಾಗಿರುವರು ಮೃತಪಟ್ಟರೆ ಅವರದೆ ಊರ ಪಕ್ಕದಲ್ಲಿ ಇರುವ ಹೊಲದಲ್ಲಿ ಅಂತ್ಯಕ್ರಿಯೆ ಮಾಡುತ್ತಾರೆ. ಅವರ ಭೂಮಿ ಇಲ್ಲವಾದರೆ ಸಂಬಂಧಿಕರ ಹೊಲದಲ್ಲಿ ವಿಧಿವಿಧಾನಗಳು ನಡೆಸುತ್ತಾರೆ. ಆದರೆ ಬಡವರು, ನಿರ್ಗತಿಕರ ಕುಟುಂಬದವರು ಸತ್ತರೆ ಅವರಿಗೆ ಹೂಳಲು ಭೂಮಿಯಿಲ್ಲ, ಸುಡಲು ಜಾಗವಿಲ್ಲ. ಇದರಿಂದ ಗ್ರಾಮದಿಂದ ಮುದೇನಗುಡಿ ರಸ್ತೆಯಲ್ಲಿ ಹೆಣಗಳನ್ನು ಸುಡುತ್ತಾರೆ. ಗ್ರಾಮದಿಂದ ಕೂದಲೆಳೆಯ ಅಂತರದಲ್ಲಿರುವ ಮನೆಗಳಿಗೆ ಹೊಗೆ ಹಾಗೂವಾಸನೆ ಬಂದು ವಾಯುಮಾಲಿನ್ಯ ಆಗುತ್ತಿದೆ. ಇದರ ಪರಿಣಾಮ ಇಲ್ಲಿರುವ ದಲಿತ ಹಾಗೂ ಹಿಂದುಳಿದ ಕುಟುಂಬಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಸ್ವತಂತ್ರ ಬಂದು ಏಳು ದಶಕ ಕಳೆದಿದ್ದೇವೆ. ಆದರೆ ಗ್ರಾಮಕ್ಕೊಂದು ರುದ್ರಭೂಮಿ ಪಡೆಯುವಲ್ಲಿ ನಾವು ಹಾಗೂ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ರಸ್ತೆಯ ಪಕ್ಕದಲ್ಲಿ ಅಂತ್ಯಕ್ರಿಯೆ ವಿಧಾನ ನಡೆಸುವುದರಿಂದ ಗ್ರಾಮ ತುಂಬೆಲ್ಲ ವಾಯುಮಾಲಿನ್ಯ ಆಗುತ್ತಿದೆ. ಆದ್ದರಿಂದ ಕೂಡಲೇ ಗ್ರಾಮಕ್ಕೆ ಸ್ಮಶಾನ ಮಂಜೂರು ಮಾಡಬೇಕು.ರಾಮನಗೌಡ ಪಾಟೀಲ, ಸ್ಥಳೀಯ

 

-ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.