ಆಟೋ ಚಾಲಕನಿಗೆ ಇಂಡಿಯಾ ಬುಕ್ ಆಪ್ ರೆಕಾರ್ಡ್ ಗೌರವ
Team Udayavani, Jan 13, 2020, 12:02 PM IST
ಬೆಳಗಾವಿ: ಕಳೆದ ಮೂರು ವರ್ಷಗಳಿಂದ ತುರ್ತು ಪರಿಸ್ಥಿತಿಯಲ್ಲಿರುವ ಸುಮಾರು 150ಕ್ಕೂ ಹೆಚ್ಚು ರೋಗಿಗಳಿಗೆ ಉಚಿತ ಅಂಬ್ಯುಲೆನ್ಸ್ ಆಟೋ ಸೇವೆ ನೀಡುತ್ತಿರುವ ಬೆಳಗಾವಿಯ ಮಂಜುನಾಥ ಪೂಜಾರಿ ಅವರು ಇಂಡಿಯಾ ಬುಕ್ ಆಪ್ ರೆಕಾರ್ಡ್ ಕೊಡ ಮಾಡುವ ರಾತ್ರಿಯ ಆಂಬ್ಯುಲೆನ್ಸ್ ಮನುಷ್ಯ ಗೌರವಕ್ಕೆ ಪಾತ್ರರಾಗಿದ್ದಾರೆ.
ಇಲ್ಲಿಯ ಅಶೋಕ ನಗರದ ಮಂಜುನಾಥ ಪೂಜಾರಿ ಆಟೋ ಚಾಲಕರಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಕಂಪನಿಯೊಂದರಲ್ಲಿ ಕಚೇರಿ ಸಹಾಯಕರಾಗಿ ದುಡಿಯುತ್ತಿದ್ದಾರೆ. ರಾತ್ರಿ ಹೊತ್ತಿನಲ್ಲಿ ತುರ್ತು ಪರಿಸ್ಥಿತಿ ವೇಳೆಮಂಜುನಾಥ ಅವರಿಗೆ ಕರೆ ಮಾಡಿದರೆ ಸಾಕು ನೇರವಾಗಿ ರೋಗಿ ಇದ್ದಲ್ಲಿಗೆ ಬಂದು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುತ್ತಾರೆ. ತಮ್ಮ ಆಟೋವನ್ನು ಆಂಬ್ಯುಲೆನ್ಸ್ವನ್ನಾಗಿ ರೂಪಿಸಿರುವ ಮಂಜುನಾಥ ತಡರಾತ್ರಿಯಲ್ಲಿ ಉಚಿತ ಸೇವೆ ಮಾಡುತ್ತಾರೆ.
ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಂಜುನಾಥ ಪೂಜಾರಿ, ಸಮಾಜ ಸೇವೆ ಮಾಡಬೇಕೆಂಬ ಕನಸು ಕಾಣುತ್ತಿದ್ದ ನನಗೆ ದೇಶದ ಅತ್ಯುನ್ನತ ಗೌರವ ಸಿಕ್ಕಿದ್ದು ಸಂತಸವಾಗುತ್ತಿದೆ. 2004ರಲ್ಲಿ ಅಪಘಾತವೊಂದರಲ್ಲಿ ನನ್ನ ಬಲಗಾಲು ಮುರಿದು ಮೂರು ತುಂಡುಗಳಾಗಿದ್ದವು. ಸರಿಯಾಗಿ ಕೆಲಸ ಮಾಡಲು ಬರುತ್ತಿರಲಿಲ್ಲ. ಇಂಥದರ ಮಧ್ಯೆಯೂ ಸಮಾಜ ಸೇವೆ ಮಾಡಬೇಕೆಂಬ ತುಡಿತ ಇತ್ತು. ಹೀಗಾಗಿ ತಡರಾತ್ರಿಯಲ್ಲಿ ಉಚುತ ಸೇವೆ ನೀಡುತ್ತಿದ್ದೇನೆ ಎಂದರು.
ಕೇಬಲ್ ಆಪರೇಟರ್ ಆಗಿಯೂ ಕೆಲಸ ಮಾಡುತ್ತಿದ್ದು, ನಾನು ದುಡಿದ ಹಣದಲ್ಲಿ ಎಚ್ಐವಿ ಸೋಂಕಿತರಿಗಾಗಿ ಕಾರ್ಯನಿರ್ವಹಿಸುತ್ತಿರುವ ಆಶ್ರಯ ಫೌಂಡೇಶಶನ್ಗೆ, ನಂದನಾ ಮಕ್ಕಳ ಧಾಮ, ಮಹೇಶ ಫೌಂಡೇಶನ್ ಗೆ, ಅನಾಥ ಮಕ್ಕಳ ಆಶ್ರಯ ತಾಣ ಚಿಕ್ಕುಂಬಿಮಠ ಅನಾಥಾಶ್ರಮಕ್ಕೆ ಸಹಾಯ ಮಾಡುತ್ತೇನೆ. ಮನೆಗೆ ಬೇಕಾಗುವ ವೆಚ್ಚ ತೆಗೆದು ಬಾಕಿ ಉಳಿದ ಹಣ ಸಮಾಜ ಸೇವೆಗೆ ಮೀಸಲಿಡುತ್ತೇನೆ ಎಂದರು.
ವೀರೇಶ ಕಿವಡಸಣ್ಣವರ, ನಾಗರತ್ನಾ ರಾಮಗೌಡ, ತಂದೆ ನಿಂಗಪ್ಪ, ತಾಯಿ, ಪತ್ನಿ, ಪುತ್ರ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ
Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.