ವೈಭವದ ಗವಿಸಿದ್ದೇಶ್ವರ ರಥೋತ್ಸವ


Team Udayavani, Jan 13, 2020, 1:25 PM IST

kopala-tdy-1

ಕೊಪ್ಪಳ: ಇಲ್ಲಿಯ ಗವಿಸಿದ್ದೇಶ್ವರರ ಮಹಾರಥೋತ್ಸವ ರವಿವಾರ ಸಂಜೆ ಲಕ್ಷಾಂತರ ಭಕ್ತ ಸಮೂಹದ ಮಧ್ಯೆ ವೈಭವದಿಂದ ನೆರವೇರಿತು. 6 ಲಕ್ಷಕ್ಕೂ ಅಧಿಕ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ಅಂತಾರಾಷ್ಟ್ರೀಯ ಕ್ರೀಡಾಪಟು ಡಾ| ಮಾಲತಿ ಹೊಳ್ಳ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು.

ನಾಡಿನ ಹರಗುರು ಚರಮೂರ್ತಿಗಳು ರಥೋತ್ಸವದಲ್ಲಿ ಪಾಲ್ಗೊಂಡು ಶುಭ ಹಾರೈಸಿದರು. ನಾಡಿನ ಗಣ್ಯಾತೀತರು ನಾಡಿನ ಒಳಿತಿಗೆ ಬೇಡಿಕೊಂಡರು. ಸುತ್ತಲಿನ ನೂರಾರು ಹಳ್ಳಿಗಳ ಜನರು ಎತ್ತಿನ ಬಂಡಿ, ಟಂಟಂ, ಲಾರಿ ಸೇರಿ ಬಸ್‌ಗಳನ್ನೇರಿ ರವಿವಾರ ಮಧ್ಯಾಹ್ನವೇ ಜಾತ್ರೆಗೆಆಗಮಿಸಿದ್ದರೆ, ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು. ಮಠದಲ್ಲಿ ಧಾರ್ಮಿಕ ಸಂಪ್ರದಾಯದಂತೆನಂದಿ ಕೋಲಿನ ಮೆರವಣಿಗೆ ಜರುಗಿತು. ಗವಿಸಿದ್ದೇಶ್ವರರ ಬೆಳ್ಳಿ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುತ್ತ ರಥೋತ್ಸವದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಬಳಿಕ ಧ್ವಜಾರೋಹಣ ಸ್ಥಳಕ್ಕೆ ಆಗಮಿಸಿದರು. ಅಂತಾರಾಷ್ಟ್ರೀಯ ಕ್ರೀಡಾಪಟು ಡಾ| ಮಾಲತಿ ಹೊಳ್ಳ ಧ್ವಜಾರೋಹಣ ನೆರವೇರಿಸಿ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

ಭಕ್ತಸಾಗರ ರಥೋತ್ಸವಕ್ಕೆ ಹೂವು, ಉತ್ತತ್ತಿ ಹಾಗೂ ಬಾಳೆಹಣ್ಣು ಸಮರ್ಪಿಸಿ ಭಕ್ತಿ ಸಮರ್ಪಿಸಿದರು. ಜಾತ್ರೋತ್ಸವದಲ್ಲಿ ಶಾಸಕ ವೆಂಕಟರಾವ್‌ ನಾಡಗೌಡ, ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್‌, ಮಾಜಿ ಸಚಿವ ಬಸವರಾಜ ರಾಯರಡ್ಡಿ, ಸಂಸದ ಸಂಗಣ್ಣ ಕರಡಿ, ಸಿ.ವಿ. ಚಂದ್ರಶೇಖರ, ಅಮರೆಗೌಡ ಬಯ್ನಾಪೂರ, ಬಸವರಾಜ ರಾಯರಡ್ಡಿ, ರಾಘವೇಂದ್ರ ಹಿಟ್ನಾಳ, ಇಕ್ಬಾಲ್‌ ಅನ್ಸಾರಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸುಗೂರು, ಜಿಪಂ ಅಧ್ಯಕ್ಷ ವಿಶ್ವನಾಥ ರಡ್ಡಿ, ಜಿಲ್ಲಾಧಿಕಾರಿ ಸುನೀಲ್‌ ಕುಮಾರ ಇದ್ದರು.

ಜಾತ್ರೋತ್ಸವದಲ್ಲಿ ಮೋದಿ ಘೋಷಣೆ :  ಮಹಾ ರಥೋತ್ಸವ ಸಾಗುವ ಅರ್ಧ ಗಂಟೆಗೂ ಮುನ್ನ ಸಿ.ಟಿ. ರವಿ, ಬಿ.ವೈ. ವಿಜಯೇಂದ್ರ ಅವರು ಭಾಷಣ ಆರಂಭಿಸುತ್ತಿದ್ದಂತೆ ಕೆಲ ಯುವಕರ ದಂಡು “ಮೋದಿ ಮೋದಿ’ ಎಂದು ಘೋಷಣೆ ಕೂಗಲಾರಂಭಿಸಿದರು. ಇದನ್ನರಿತು ಗವಿಸಿದ್ದಪ್ಪ ಕೊಪ್ಪಳ ಎಂಬ ಭಕ್ತರು ಕೂಡಲೇ ಮೈಕ್‌ ಹಿಡಿದು ಇದು ಮಠದ ಸಂಸ್ಕೃತಿಯಲ್ಲ. ಆ ರೀತಿ ವರ್ತಿಸುವುದು ಸರಿಯಲ್ಲ. ಮಠದ ಭಕ್ತರು ಗವಿಸಿದ್ದನಿಗೆ ಕಪ್ಪು ಚುಕ್ಕೆ ತಾರದಿರಲಿ ಎಂದು ಪದೇ ಪದೇ ಹೇಳಿ ಮನವಿ ಮಾಡಿದರು.

ಕಂಬಳಿ ಬೀಸಿದ ಯುವಕ :  ಗವಿಸಿದ್ದೇಶ್ವರ ಮಹಾರಥೋತ್ಸವ ಸಾಗುವ ಕೆಲ ಗಂಟೆಯ ಸಮಯದಲ್ಲಿ ಮಾಜಿ ಸಿಎಂಸಿದ್ದರಾಮಯ್ಯ ಅವರು ಮಹಾರಥೋತ್ಸವ ಸಾಗುವ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಜನಸಮೂಹಕೇಕೆ ಹಾಕಿತು. ಸಿದ್ದರಾಮಯ್ಯ ಅವರು ಧ್ವಜಾರೋಹಣದ ಸ್ಥಳಕ್ಕೆ ತೆರಳುತ್ತಿದ್ದಂತೆ ವ್ಯಕ್ತಿಯೋರ್ವ ಕಂಬಳಿ ಹಿಡಿದು ಬೀಸಲಾರಂಭಿಸಿದನು. ಇದನ್ನು ಕಂಡ ಕೆಲವರು ಕೇಕೆ ಹಾಕಿದರು.ಮಾತನ್ನಾಡಿ ಎಲ್ಲರ ಗಮನ ಸೆಳೆದರು.

ಹೌದ್ದ ಹುಲಿಯಾ ಎಂದ ಅನ್ಸಾರಿ :  ಗಂಗಾವತಿ ಮಾಜಿ ಶಾಸಕ ಇಕ್ಬಾಲ್‌ ಅನ್ಸಾರಿ ಅವರು ಗವಿಸಿದ್ದೇಶ್ವರ ಮಹಾರಥೋತ್ಸವ ವೇಳೆ ಭಾಷಣ ಆರಂಭಿಸಿದರು. ಗವಿಮಠದ ಜಾತ್ರೆ, ಗತ ವೈಭವಮಾತನಾಡುತ್ತಲೇ ಕೊನೆಗಳಿಗೆಯಲ್ಲಿ ಸಿದ್ದರಾಮಯ್ಯ ಅವರನ್ನು ನೋಡುತ್ತಲೇ ಈಗಎಲ್ಲವೂ ಹೌದ್ದ ಹುಲಿಯಾ ಎನ್ನುವ ಮಾತು ಕೇಳಿ ಬರುತ್ತಿವೆ ಎನ್ನುವ.

ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಧ್ಯಾತ್ಮ, ಅಕ್ಷರ,ಅನ್ನದಾಸೋಹ ಸಂಸ್ಕೃತಿಯಲ್ಲಿ ಹೆಸರು ಮಾಡಿದೆ.ಅನೇಕ ಮಕ್ಕಳಿಗೆ ಶಿಕ್ಷಣ ಕೊಡುವ ಕಾಯಕವೂ ಮಠದಿಂದ ನಡೆದಿದೆ. ಇತ್ತೀಚೆಗೆ ಶ್ರೀಗಳು ಕೈಗೊಂಡ ಹಿರೇಹಳ್ಳದ ಸ್ವಚ್ಛತಾ ಕಾರ್ಯ ನಿಜಕ್ಕೂ ಶ್ಲಾಘನೀಯ. ಶ್ರೀಗಳು ರೈತರ ಹಿತ ಕಾಯುತ್ತಿದ್ದಾರೆ. ಅದಕ್ಕೆ ಜಿಲ್ಲಾಡಳಿತವೂ ಸಹಕಾರ ನೀಡಿದೆ. ಗವಿಮಠವು ಸಾಮಾಜಿಕ ಆಂದೋಲನ ಜಾತ್ರೆಯಾಗಿದೆ.  –ಪಿ. ಸುನೀಲ್‌ಕುಮಾರ್‌, ಕೊಪ್ಪಳ ಜಿಲ್ಲಾ ಧಿಕಾರಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.