ಬಗೆಹರಿಯದ ಕಸ ವಿಲೇವಾರಿ ಸಮಸ್ಯೆ


Team Udayavani, Jan 14, 2020, 3:00 AM IST

bagehariyada

ಸಕಲೇಶಪುರ: ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫ‌ಲರಾಗಿರುವ ಶಾಸಕರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಪಟ್ಟಣದ ಜಾತ್ರೆ ಮೈದಾನದಲ್ಲಿರುವ ವರ್ತಕರು ಹಾಗೂ ಕಾರ್ಮಿಕರು ಅಲ್ಲಿ ತಂದು ಹಾಕುವ ಕಸದಿಂದ ನಿತ್ಯ ಮೂಗು ಮುಚ್ಚಿಕೊಂಡು ಕೆಲಸ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಪಟ್ಟಣದ ತ್ಯಾಜ್ಯವನ್ನು ಮಳಲಿ ಘನತ್ಯಾಜ್ಯ ಘಟಕದಲ್ಲೇ ವಿಲೇವಾರಿ ಮಾಡುವಂತೆ 2016ರಲ್ಲಿ ಹೈಕೋರ್ಟ್‌ ಸೂಚಿಸಿತ್ತು. ಆದರೆ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅವರು ಮಳಲಿ ಗ್ರಾಮದ ಘನತ್ಯಾಜ್ಯ ಘಟಕದಲ್ಲಿ ಪಟ್ಟಣದ ತ್ಯಾಜ್ಯ ವಿಲೇವಾರಿಗೆ ನಿರಂತರ ಹಸ್ತಕ್ಷೇಪ ನಡೆಸಿದ ಫ‌ಲವಾಗಿ ಪುರಸಭೆ ಅಧಿಕಾರಿಗಳು ತಮ್ಮ ಅಧಿಕಾರ ಚಲಾಯಿಸಲು ವಿಫ‌ಲರಾಗಿದ್ದರು.

ಖಾಲಿ ನಿವೇಶನದಲ್ಲಿ ಕಸ ಹಾಕಲು ವಿರೋಧ: ಪಟ್ಟಣದ ವಿವಿಧೆಡೆ ಖಾಲಿ ಇರುವ ನಿವೇಶನಗಳಲ್ಲಿ ಕಸ ವಿಲೇವಾರಿ ನಡೆಸುತ್ತಿದ್ದರು. ಖಾಲಿ ನಿವೇಶನಗಳಲ್ಲಿ ಕಸ ವಿಲೇವಾರಿಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಅಂತಿಮವಾಗಿ ಲಕ್ಷ್ಮೀಪುರಂ ಬಡಾವಣೆಯ ಹೇಮಾವತಿ ನದಿ ದಂಡೆಯಲ್ಲಿ ಕಸ ವಿಲೇವಾರಿ ನಡೆಸಲಾಗುತ್ತಿತ್ತು.

ಆದರೆ, ಇಲ್ಲಿ ತ್ಯಾಜ್ಯ ವಿಲೇವಾರಿ ನಡೆಸುವುದರಿಂದ ನದಿ ಕಲುಷಿತಗೊಳ್ಳುತ್ತದೆ ಎಂದು ಆರೋಪಿಸಿದ ಸಂಘಟನೆಗಳು ಪುರಸಭೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಮಧ್ಯ ಪ್ರವೇಶಿಸಿದ ಜಿಲ್ಲಾಧಿಕಾರಿ ತಾತ್ಕಾಲಿಕವಾಗಿ ಪಟ್ಟಣದ ತ್ಯಾಜ್ಯವನ್ನು ಹಾಸನದ ಅಗಿಲೆ ಘನತ್ಯಾಜ್ಯ ಘಟಕಕ್ಕೆ ಸಾಗಿಸುವ ಯೋಜನೆ ರೂಪಿಸಿದ್ದರು.

ಸಕಾಲಕ್ಕೆ ವಿಲೇವಾರಿಯಾಗದ ಕಸ: ಈ ಹಿನ್ನೆಲೆಯಲ್ಲಿ ಕಸವನ್ನು ಪಟ್ಟಣದ ಸುಭಾಷ್‌ ಮೈದಾನದ ಪಕ್ಕದ ಜಾತ್ರೆ ಮೈದಾನದಲ್ಲಿ ತಂದು ಸುರಿಯಲಾಗುತ್ತಿದ್ದು ಇಲ್ಲಿಂದ ಹಾಸನದ ಅಗಿಲೆ ಘಟಕಕ್ಕೆ ಟಿಪ್ಪರ್‌ಗಳ ಮೂಲಕ ಕಸವನ್ನು ಕಳುಹಿಸಲಾಗುತ್ತಿದೆ. ಕೆಲವೊಮ್ಮೆ ಎರಡು, ಮೂರು ದಿನಕ್ಕೊಮ್ಮೆ ಕಸ ವಿಲೇವಾರಿ ಮಾಡುವುದರಿಂದ ಇಲ್ಲಿ ಕೆಲಸ ಮಾಡುವ ವರ್ತಕರು ಹಾಗೂ ಕಾರ್ಮಿಕರು ಕಸದ ವಾಸನೆಯಿಂದ ಮೂಗು ಮುಚ್ಚಿಕೊಂಡು ಕೆಲಸ ಮಾಡಬೇಕಾಗಿದೆ.

ಸೊಳ್ಳೆ, ನೊಣಗಳ ಹಾವಳಿ: ಕಸದ ಸಮಸ್ಯೆ ನಿವಾರಿಸುವಂತೆ ಎರಡು ಬಾರಿ ಪ್ರತಿಭಟನೆ ಮಾಡಿದರೂ ¿ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿ ತಂದು ಹಾಕುತ್ತಿರುವ ಕಸದಿಂದ ಅಪಾಯಕಾರಿ ಸೊಳ್ಳೆಗಳು ಹಾಗೂ ಇನ್ನಿತರ ಕ್ರಿಮಿ ಕೀಟಗಳು ಉತ್ಪತ್ತಿಯಾಗುತ್ತಿದ್ದು, ಇದರಿಂದ ಇಲ್ಲಿನ ಗ್ಯಾರೇಜ್‌ ಲೈನ್‌ನ ಕೆಲಸಗಾರರು ಡೆಂ à ಮೊದಲಾಸ ರೋಗಗಳಿಂದ ಬಳಲುತ್ತಿದ್ದಾರೆ.

ದನಕರುಗಳು ಈ ಕಸದ ರಾಶಿಯಲ್ಲಿ ಆಹಾರ ಹುಡುಕಿಕೊಂಡು ಪ್ಲಾಸ್ಟಿಕ್‌ ತಿಂದು ಸಾವಿಗೀಡಾಗುತ್ತಿವೆ. ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವ ಬದಲು ಇಲ್ಲಿಯ ಜನಪ್ರತಿನಿಧಿಗಳು ಅಧಿಕಾರಿಗಳು ಕಾಲ ಹರಣ ಮಾಡುತ್ತ ಪಟ್ಟಣದ ಹೃದಯ ಭಾಗದಲ್ಲಿ ಈ ರೀತಿ ಕಸವನ್ನು ತಂದು ಹಾಕುತ್ತಿರುವುದರಿಂದ ಅನಾರೋಗ್ಯಕ್ಕೆ ಆಹ್ವಾನ ನೀಡಿದಂತಾಗುತ್ತದೆ.

ಕಸದ ಸಮಸ್ಯೆ ನಿವಾರಣೆ ಕುರಿತು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಅತಿ ಶೀಘ್ರದಲ್ಲಿ ಕಸ ವಿಲೇವಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲಾಗುತ್ತದೆ.
-ಸ್ಟೀಫ‌ನ್‌ ಪ್ರಕಾಶ್‌, ಪುರಸಭೆ ಮುಖ್ಯಾಧಿಕಾರಿ

ಪುರಸಭೆ ಅಧಿಕಾರಿಗಳು ಕಸ ವಿಲೇವಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು.
-ಮಹಮದ್‌ ಆಲಿ, ಗ್ಯಾರೇಜ್‌ ಮಾಲೀಕ

* ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.