ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಬಡ್ತಿ
Team Udayavani, Jan 14, 2020, 3:00 AM IST
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕ್ಷೇತ್ರ ಶಿಕ್ಷಣಾಧಿ ಕಾರಿ ಗಳು, ಉಪನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರಲ್ಲಿ ಕೆಲವರಿಗೆ ಬಡ್ತಿ ನೀಡಿ, ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳಿಗೆ ಉಪನಿರ್ದೇಶಕ ಹಾಗೂ ತತ್ಸಮಾನ ವೃಂದದ ಹುದ್ದೆಗೆ ಬಡ್ತಿ ನೀಡಲಾಗಿದೆ. ಉಪನಿರ್ದೇಶಕರು ಹಾಗೂ ತತ್ಸಮಾನ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲವು ಹಿರಿಯ ಅಧಿಕಾರಿಗಳನ್ನು ಜಂಟಿ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಹಾಗೆಯೇ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿಯೂ ಆದೇಶ ಹೊರಡಿಸಿದೆ.
ಅನುಕಂಪದ ಹುದ್ದೆ: ಮೈಸೂರು ವಿಭಾಗದ ಜಂಟಿ ನಿರ್ದೇಶಕರು ಹಾಗೂ ಬೆಂಗಳೂರು ವಿಭಾಗದ ಜಿಲ್ಲಾ ಉಪ ನಿರ್ದೇಶಕರ 7 ಪ್ರಥಮ ದರ್ಜೆ ಸಹಾಯಕ ಹುದ್ದೆ ಭರ್ತಿಗೆ ಅನುಮತಿ ಕೋರಿದ್ದರು. ಇಲಾಖೆಯ ಮತ್ತು ಸರ್ಕಾ ರದ ಷರತ್ತುಗಳಿಗೆ ಅನುಸಾರವಾಗಿ 7 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಇಲಾಖೆ ಅನುಮತಿ ನೀಡಿದೆ. ವಿದ್ಯಾರ್ಹತೆ, ದಾಖಲಾತಿ, ಸಾಮಾನ್ಯ ನೇಮಕಾತಿ ನಿಯಮಾನುಸಾರ ವಯೋಮಿತಿ ಇವೆಲ್ಲವನ್ನು ಕಡ್ಡಾಯವಾಗಿ ಪಾಲಿಸಿ, ಷರತ್ತುಗಳನ್ವಯ ನೇಮಕಕ್ಕೆ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.