ಕಾಸರಗೋಡು ಡಿಸಿಗೆ ರಾಷ್ಟ್ರೀಯ ಪ್ರಶಸ್ತಿ


Team Udayavani, Jan 24, 2020, 6:30 AM IST

kasargod-dc

ಕಾಸರಗೋಡು : 2019- 20ನೇ ವರ್ಷದ ಇ- ಗವರ್ನೆನ್ಸ್‌ಗಿರುವ ರಾಷ್ಟ್ರೀಯ ಪ್ರಶಸ್ತಿಗೆ ಕಾಸರಗೋಡು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರು ಆಯ್ಕೆಯಾಗಿದ್ದಾರೆ.

ಕೇಂದ್ರ ಪರ್ಸನಲ್‌, ಪಬ್ಲಿಕ್‌ ಗ್ರಿವೆನ್ಸೆಸ್‌ ಆ್ಯಂಡ್‌ ಪೆನ್ಶನ್ಸ್‌ ಸಚಿವಾಲಯ ಸಿಬ್ಬಂದಿ ಆಡಳಿತ ಪರಿಷ್ಕಾರ ಇಲಾಖೆ ಏರ್ಪಡಿಸಿರುವ ಪುರಸ್ಕಾರಕ್ಕೆ ಅವರು ಆಯ್ಕೆಗೊಂಡಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರ ನೇತೃತ್ವದಲ್ಲಿ ವಿಶೇಷಚೇತನರಿಗಾಗಿ ಜಾರಿಗೊಳಿಸಿರುವ “ವೀ ಡಿಸರ್ವ್‌’ ಯೋಜನೆಗಾಗಿ ಈ ಪುರಸ್ಕಾರ ಸಂದಿದೆ. ಇ-ಗವರ್ನೆನ್ಸ್‌ನಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಚಟುವಟಿಕೆ ನಡೆಸಿದ ಯೋಜನೆಗಾಗಿ ಚಿನ್ನದ ಪದಕ ಇವರಿಗೆ ಲಭಿಸಲಿದೆ. ಫೆ. 8ರಂದು ಮುಂಬಯಿಯಲ್ಲಿ ನಡೆಯುವ ಇ-ಗವರ್ನೆನ್ಸ್‌ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.

ಕಾಸರಗೋಡು ಜಿಲ್ಲೆಗೆ ಈ ಮೂಲಕ ಪ್ರಥಮ ಬಾರಿಗೆ ಈ ಪುರಸ್ಕಾರ ಲಭಿಸುತ್ತಿದೆ. ಕಂದಾಯ ಸಚಿವ ಇ.ಚಂದ್ರಶೇಖರನ್‌ ಅವರು ಜಿಲ್ಲಾ ಧಿಕಾರಿ ಅವರನ್ನು ಅಭಿನಂದಿಸಿದರು.

ಗಾಲಿಕುರ್ಚಿ, ಎಂ.ಆರ್‌. ಕಿಟ್‌, ಬ್ರೈಲಿ ಕೈನ್‌, ಸ್ಮಾರ್ಟ್‌ ಫೋನ್‌ ಸಹಿತ ಸಹಾಯಕ ಉಪಕರಣಗಳನ್ನು, ವಿವಿಧ ರೀತಿಯ ಕ್ರಚಸ್‌ ಸಹಿತ ಉಪಕರಣಗಳನ್ನು ಈ ಯೋಜನೆಯ ಅಂಗವಾಗಿ ಈಗಾಗಲೇ ವಿತರಣೆ ನಡೆಸಲಾಗಿದೆ. ಯೋಜನೆಯ ಅಂಗವಾಗಿ ನಡೆದ ಶಿಬಿರಗಳಲ್ಲಿ 19,578 ವಿಶೇಷಚೇತನರು ಭಾಗವಹಿಸಿದ್ದಾರೆ. ಇವರಲ್ಲಿ 4,886 ಮಂದಿಯ ಸಮಗ್ರ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. 3,745 ಮಂದಿಗೆ ವೈದ್ಯಕೀಯ ಮಂಡಳಿಯ ಅರ್ಹತಾಪತ್ರ ಲಭಿಸಿದೆ. 21 ಗ್ರಾಮ ಪಂಚಾಯತ್‌ಗಳಲ್ಲಿ ಈ ಶಿಬಿರ ಯಶಸ್ವಿಯಾಗಿ ನಡೆದಿದ್ದು, ಮುಂದಿನ ಹಂತದಲ್ಲಿ ಎಲ್ಲ ವಿಶೇಷ ಚೇತನರಿಗೆ ಯು.ಡಿ.ಐ.ಡಿ. ಕಾರ್ಡ್‌ ಲಭಿಸಲಿದೆ. ಈ ಯೋಜನೆ ಜಾರಿ ಮೂಲಕ 2016ರ ರಾಷ್ಟ್ರೀಯ ವಿಶೇಷಚೇತನ ಕಾಯಿದೆ ಜಾರಿಗೊಳಿಸಿದ ದೇಶದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆ ಕಾಸರಗೋಡಿಗೆ ಲಭಿಸಿದೆ.

“ವೀ ಡಿಸರ್ವ್‌’
ಅರ್ಹ ವ್ಯಕ್ತಿಗೆ ಸೂಕ್ತ ಅವಧಿಯಲ್ಲಿ ಅಗತ್ಯವಿರುವ ಸಹಾಯ ಒದಗಿಸುವ ಉದ್ದೇಶದಿಂದ ಕಾಸರಗೋಡು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರು ರಚಿಸಿದ ಯೋಜನೆ “ವೀ ಡಿಸರ್ವ್‌’. ಕೇಂದ್ರ ಸರಕಾರದ ಎ.ಡಿ.ಐ.ಪಿ. ಯೋಜನೆಯೊಂದಿಗೆ ಸಹಕರಿಸಿ ಈ ಯೋಜನೆ ಜಾರಿಗೊಳ್ಳುತ್ತಿದೆ. ಎ.ಡಿ.ಐ.ಪಿ. ಸ್ಕೀಂ ಪ್ರಕಾರ ಜಿಲ್ಲೆಯಲ್ಲಿ ನಡೆಸಿದ ಶಿಬಿರಗಳಲ್ಲಿ ಆಯ್ಕೆಗೊಂಡ ವಿಶೇಷ ಚೇತನರಿಗೆ ಕೇಂದ್ರ ಸರಕಾರಿ ಸಂಸ್ಥೆ ಅಲೀಂಕೋದ ಸಹಕಾರದೊಂದಿಗೆ ಸಹಾಯ ಉಪಕರಣಗಳನ್ನು ವಿತರಿಸಲಾಗಿದೆ. ಯೋಜನೆ ಪ್ರಕಾರ ಈಗಾಗಲೇ 757 ಅತ್ಯಾಧುನಿಕ ಸಹಾಯಕ ಉಪಕರಣಗಳನ್ನು ವಿತರಿಸಲಾಗಿದೆ. ಜಿಲ್ಲಾ ಆಡಳಿತಕ್ಕಾಗಿ ಕೇರಳ ಸಾಮಾಜಿಕ ಸುರಕ್ಷಾ ಮಿಷನ್‌ ಯೋಜನೆಯ ಏಕಸೂತ್ರತೆ ನಿರ್ವಹಿಸುತ್ತಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.