ಶರದ್ ಪವಾರ್ ದೆಹಲಿ ನಿವಾಸಕ್ಕಿದ್ದ ಭದ್ರತೆ ವಾಪಸ್; ಕೇಂದ್ರದ ನಡೆಗೆ ಎನ್.ಸಿ.ಪಿ., ಸೇನೆ ಟೀಕೆ
Team Udayavani, Jan 24, 2020, 9:03 PM IST
ನವದೆಹಲಿ: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್.ಸಿ.ಪಿ.) ಮುಖಂಡ ಮತ್ತು ಮಾಜೀ ಕೇಂದ್ರ ಸಚಿವ ಶರದ್ ಪವಾರ್ ಅವರ ದೆಹಲಿ ನಿವಾಸಕ್ಕಿದ್ದ ಸರಕಾರಿ ಭದ್ರತೆಯನ್ನು ಕೇಂದ್ರ ಸರಕಾರ ಇಂದು ವಾಪಾಸು ಪಡೆದುಕೊಂಡಿದೆ. ಕೇಂದ್ರದ ಈ ನಡೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಮೂಲಗಳ ಪ್ರಕಾರ ಶರದ್ ಪವಾರ್ ಅವರ ಮನೆಯಲ್ಲಿ ರಕ್ಷಣೆಗೆಂದು ನಿಯೋಜನೆಗೊಂಡಿದ್ದ ದೆಹಲಿ ಪೊಲೀಸ್ ಸಿಬ್ಬಂದಿಗಳನ್ನು ಜನವರಿ 20ರಂದು ಇದ್ದಕ್ಕಿದ್ದಂತೆಯೇ ವಾಪಾಸು ಕರೆಯಿಸಿಕೊಳ್ಳಲಾಗಿದೆ. ಆದಾಗ್ಯೂ ಈ ಹಿರಿಯ ನಾಯಕನಿಗೆ ಮಹಾರಾಷ್ಟ್ರದಲ್ಲಿ ಹಾಗೂ ಅವರ ಪ್ರಯಾಣ ಸಂದರ್ಭದಲ್ಲಿ ಸಾಕಷ್ಟು ಭದ್ರತೆಯನ್ನು ಒದಗಿಸಗುತ್ತಿದೆ.
6 ಜನಪಥದಲ್ಲಿರುವ ಶರದ್ ಪವಾರ್ ಅವರ ನಿವಾಸಕ್ಕಿದ್ದ ಸರಕಾರೀ ಭದ್ರತೆಯನ್ನು ವಾಪಾಸು ಪಡೆದುಕೊಂಡಿರುವ ನರೇಂದ್ರ ಮೋದಿ ಸರಕಾರದ ನಡೆಯನ್ನು ಎನ್.ಸಿ.ಪಿ. ಮತ್ತು ಮಹಾರಾಷ್ಟ್ರದಲ್ಲಿ ಇದರ ಮಿತ್ರಪಕ್ಷವಾಗಿರುವ ಶಿವಸೇನೆ ಸಹಿತ ಹಲವು ರಾಜಕೀಯ ಪಕ್ಷಗಳ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಆದರೆ ಪವಾರ್ ಕುಟುಂಬದ ಯಾರೊಬ್ಬರೂ ಸಹ ಈ ಬೆಳವಣಿಗೆಗೆ ಸಂಬಂಧಿಸಿದಂತೆ ಇದುವರೆಗೂ ಪ್ರತಿಕ್ರಿಯಿಸಿಲ್ಲ.
ಹಿರಿಯ ರಾಜಕಾರಣಿಯಾಗಿರುವ ಶರದ್ ಪವಾರ್ ಅವರಿಗೆ ಬೆದರಿಕೆ ಇರುವ ವಿಚಾರ ತಿಳಿದಿದ್ದರೂ ಮತ್ತು ಈ ಹಿಂದೊಮ್ಮೆ ಅವರು ದಾಳಿಗೊಳಗಾಗಿದ್ದರೂ ಅವರ ನಿವಾಸಕ್ಕೆ ನೀಡಲಾಗಿರುವ ಭದ್ರತೆಯನ್ನು ವಾಪಾಸು ಪಡೆದುಕೊಂಡಿರುವ ಕ್ರಮ ದ್ವೇಷದ ರಾಜಕಾರಣ ಪ್ರವೃತ್ತಿಯನ್ನು ತೋರಿಸುತ್ತದೆ ಎಂದು ಹಿರಿಯ ಶಿವಸೇನಾ ನಾಯಕ ಮತ್ತು ಆ ಪಕ್ಷದ ಸಂಸದ ಸಂಜಯ್ ರಾವತ್ ಅವರು ಹೇಳಿದ್ದಾರೆ.
ಕೇಂದ್ರ ಸರಕಾರವು ಈ ಹಿಂದೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರಿಗಿದ್ದ ಭದ್ರತೆಯನ್ನು ಕಡಿಮೆಗೊಳಿಸಿತ್ತು ಇದೀಗ ಇನ್ನೋರ್ವ ಹಿರಿಯ ರಾಜಕಾರಣಿ ಶರದ್ ಪವಾರ್ ಅವರ ನಿವಾಸಕ್ಕಿದ್ದ ಭದ್ರತೆಯನ್ನೇ ವಾಪಾಸು ಪಡೆದುಕೊಂಡಿದೆ, ಇದೊಂದು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ ಎಂದು ರಾವತ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ತಮ್ಮ ಪಕ್ಷಕ್ಕೆ ಅಧಿಕಾರ ಕೈತಪ್ಪಿರುವುದು ಕೇಂದ್ರ ಬಿಜೆಪಿ ನಾಯಕರನ್ನು ಕಂಗೆಡಿಸಿದೆ. ಹೀಗಾಗಿ ಬಿಜೆಪಿ ಇದೀಗ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಅವರು ಕೇಂದ್ರದ ಈ ನಡೆಯನ್ನು ಟೀಕಿಸಿದ್ದಾರೆ.
ಶರದ್ ಪವಾರ್ ಅವರೇನೂ ಸಹ್ಯಾದ್ರಿ ಪರ್ವತವಲ್ಲ! ಅವರನ್ನೂ ಬೆದರಿಕೆ ವಿಚಾರಗಳು ಕಾಡುವುದಿಲ್ಲವೇ? ಎಂದು ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅಹ್ವಾದ್ ಅವರು ಕೇಂದ್ರದ ಈ ಕ್ರಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.