ರಸ್ತೆ ಬದಿ ಕೊಳೆತ ತ್ಯಾಜ್ಯ; ಸ್ಥಳೀಯರ ಸಂಕಷ್ಟ


Team Udayavani, Jan 25, 2020, 3:00 AM IST

raste-badi

ಪಿರಿಯಾಪಟ್ಟಣ: ಪಿರಿಯಾಪಟ್ಟಣ-ಗೋಣಿಕೊಪ್ಪ ಮುಖ್ಯರಸ್ತೆ ಅಂಕನಹಳ್ಳಿಕೊಪ್ಪಲು ಹಾಗೂ ಮಾಲಂಗಿ ಗ್ರಾಮಕ್ಕೆ ತೆರಳುವ ತಿರುವಿನಲ್ಲಿ ಕೋಳಿ, ಹಂದಿ, ಇನ್ನಿತರ ತ್ಯಾಜ್ಯದ ದುರ್ವಾಸನೆ ಬೀರುತ್ತಿದೆ. ಪ್ರತಿನಿತ್ಯ ತ್ಯಾಜ್ಯ ಸುರಿಯುತ್ತಿರುವುದರಿಂದ ಸಾರ್ವಜನಿಕರು, ಇಲ್ಲಿನ ನಿವಾಸಿಗಳು ದುರ್ವಾಸನೆಗೆ ಬೇಸತ್ತು ಮೂಗುಮುಚ್ಚಿ ಓಡಾಡುವ ಪರಿಸ್ಥತಿ ನಿರ್ಮಾಣವಾಗಿದೆ.

ಪಟ್ಟಣದ ಸುತ್ತಮುತ್ತ ಕೋಳಿ ಹಾಗೂ ಮಾಂಸದ ಅಂಗಡಿ ಮಾಲಿಕರು ಕೋಳಿ ಹಾಗೂ ಮಾಂಸದ ತ್ಯಾಜ್ಯವನ್ನು ದೂರದ ಜಾಗಗಳಿಗೆ ಸಾಗಿಸುವ ಬದಲು ರಸ್ತೆ ಪಕ್ಕದಲ್ಲೇ ತಂದು ಸುರಿಯುತ್ತಿರುವುದರಿಂದ ಕೊಳೆತು ನಾರುತ್ತಿರುವುದರಿಂದ ಇಲ್ಲಿ ವಾಸಿಸುತ್ತಿರುವ ಜನ ಹಾಗೂ ದೂರದ ಊರುಗಳಿಗೆ ತೆರಳುವ ನಾಗರಿಕರು ಮುಗುಮುಚ್ಚಿ ತಿರುಗಾಡುತ್ತಿದ್ದಾರೆ.

ಕೈ ಕಟ್ಟಿ ಕುಳಿತ ಪುರಸಭೆ, ಗ್ರಾಪಂ: ಪುರಸಭಾ ವ್ಯಾಪ್ತಿ ಹಾಗೂ ಮಾಲಂಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರಲಿದೆ. ಅಂಗಡಿ ಮಾಲಿಕರು ಸತ್ತಂತಹ ಪ್ರಾಣಿ ಮತ್ತು ಕೋಳಿ ಹಾಗೂ ಮಾಂಸದ ತ್ಯಾಜ್ಯ ಮತ್ತು ಪ್ರತಿನಿತ್ಯ ರಸ್ತೆ ಬದಿಗೆ ತಂದು ಸುರಿಯುತ್ತಾರೆ. ಇದು ಕೊಳೆತು ನಾರುತ್ತ ದುರ್ವಾಸೆ ಬೀರಲು ಪ್ರಾರಂಭವಾಗಿ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಹಾಗೂ ದೂರದ ಗೋಣಿಕೊಪ್ಪ ಹಾಗೂ ಕೊಡಗು ಮತ್ತು ಕೇರಳಕ್ಕೆ ತೆರಳುವ ಪ್ರವಾಸಿಗರಿಗೆ ತೊಂದರೆಯಾಗಿದೆ. ಅಲ್ಲದೆ, ಈ ಮಾಂಸ ಹಾಗೂ ತ್ಯಾಜ್ಯ ತಿನ್ನಲು ಹಿಂಡಿಂಡು ನಾಯಿಗಳು ರಸ್ತೆಯಲ್ಲಿ ಅಡ್ಡಾಡುತ್ತಿರುತ್ತವೆ.

ನಾಯಿಗಳು ಕೆಲವೊಮ್ಮೆ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ಶಾಲೆಗಳಿಗೆ ತೆರಳುವ ಮಕ್ಕಳ ಮೇಲೆರಗುತ್ತಿವೆ. ಅಲ್ಲದೇ, ವಾಹನ ಸವಾರರಿಗೆ ನಾಯಿಗಳು ಅಡ್ಡ ಬರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಇದರಿಂದಾಗಿ ರಸ್ತೆ ಪಕ್ಕ ಸುರಿಯುತ್ತಿರುವ ತ್ಯಾಜ್ಯದಿಂದ ಇನ್ನಿಲ್ಲದ ಸಮಸ್ಯೆ ಉಂಟಾಗಿದೆ. ಸವಾರರು ಜೀವ ಭಯದಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿದ್ದರೂ ಪುರಸಭಾ ಮತ್ತು ಮಾಲಂಗಿ ಗ್ರಾಪಂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.

ಪುರಸಭಾ ವ್ಯಾಪ್ತಿಯಲ್ಲಿ ಬರುವ ಕೋಳಿ, ಮಾಂಸದ ಅಂಗಡಿ ಮಾಲಿಕರಿಗೆ ನೋಟಿಸ್‌ ನೀಡಿ ತ್ಯಾಜ್ಯವನ್ನು ತಾವೇ ಸೂಕ್ತ ಸ್ಥಳಗಳಿಗೆ ವಿಲೇವಾರಿ ಮಾಡಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ ಪುರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ಸಾಗಿಸಲು ವಾಹನಗಳಿಗೆ ಟೆಂಡರ್‌ ಕರೆಯಲಾಗಿದೆ.
-ಎ.ಪ್ರಸನ್ನ, ಪರಿಸರ ಎಂಜಿನಿಯರ್‌ ಪುರಸಭೆ ಪಿರಿಯಾಪಟ್ಟಣ

ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ತಾಜ್ಯದ ಕುರಿತು ಮಾಹಿತಿ ಪಡೆಯಲಾಗಿದೆ. ಮುಂದಿನ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆಗಿಟ್ಟು ತೀರ್ಮಾನದ ನಂತರ ಕ್ರಮ ವಹಿಸಲಾಗುವುದು.
-ಡಾ.ಆಶಾ, ಮಾಲಂಗಿ ಗ್ರಾಪಂ ಪಿಡಿಒ

ಪ್ರತಿನಿತ್ಯ ತ್ಯಾಜ್ಯ ತಂದು ಸುರಿಯುತ್ತಿರುವುದರಿಂದ ತಿನ್ನಲು ನಾಯಿಗಳ ಹಿಂಡು ಬರುತ್ತಿವೆ. ಅಲ್ಲದೇ, ನಾಯಿಗಳು ಶಾಲಾ ಮಕ್ಕಳು ಹಾಗೂ ದಾರಿ ಹೋಕರ ಮೇಲೆ ದಾಳಿ ಮಾಡುತ್ತಿವೆ. ವಾಹನ ಸವಾರರೂ ಸಂಕಷ್ಟ ಎದುರಿಸುತ್ತಿದ್ದಾರೆ.
-ಜಮೀಲ್‌, ಅಂಕನಹಳ್ಳಿ ಕೊಪ್ಪಲು ನಿವಾಸಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.