ವಸ್ತು ಸಂಗ್ರಹಾಲಯಕ್ಕೆ ಬ್ರೂಸ್‌ಫೂಟ್‌ ಹೆಸರಿಡಲು ತೀರ್ಮಾನ

ಸಂಗನಕಲ್ಲು ಬೆಟ್ಟಗಳಲ್ಲಿ ದೊರೆತ ವಸ್ತುಗಳ ಸಂಗ್ರಹ

Team Udayavani, Jan 25, 2020, 12:36 PM IST

25-January-9

ಬಳ್ಳಾರಿ: ತಾಲೂಕಿನ ಸಂಗನಕಲ್ಲು ಬೆಟ್ಟಗಳಲ್ಲಿ ದೊರೆತ ವಸ್ತುಗಳು ಸೇರಿದಂತೆ ಪ್ರಾಗೈತಿಹಾಸದ ಅಪೂರ್ವ ವಸ್ತುಗಳನ್ನು ಇಲ್ಲಿನ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದ ಕಲಾ ಪ್ರದರ್ಶನಾಲಯದಲ್ಲಿ ಸಂಗ್ರಹಿಸಿಡಲಾಗಿದ್ದು, ಇದಕ್ಕೆ ರಾಬರ್ಟ್‌ ಬ್ರೂಸ್‌ಫೂಟ್‌ ಸಂಗನಕಲ್ಲು ಪ್ರಾಚ್ಯವಸ್ತು ಸಂಗ್ರಹಾಲಯವೆಂದು ಹೆಸರಿಡಲು ತೀರ್ಮಾನಿಸಲಾಗಿದೆ.

ಜಿಲ್ಲೆಯ ಕೆಲವು ಪ್ರದೇಶಗಳು ಪ್ರಾಗೈತಿಹಾಸಿಕ ಕಾಲದ ನೆಲೆಗಳಾಗಿದ್ದವು. ಸಂಗನಕಲ್ಲು
ಬೆಟ್ಟಗಳಲ್ಲಿ ದೊರೆತ ವಸ್ತುಗಳು ಸೇರಿದಂತೆ ಪ್ರಾಗೈತಿಹಾಸದ ಅಪೂರ್ವ ವಸ್ತುಗಳನ್ನು ಈ ಸಂಗ್ರಹಾಲಯದಲ್ಲಿಡಲಾಗಿದೆ. ಇದರ ಅಭಿವೃದ್ಧಿಗೆ ಸಂಬಂಧಿ ಸಿದ ಕಾರ್ಯಗಳು ಈಗಾಗಲೇ ಕೈಗೊಳ್ಳಲಾಗಿದೆ. ತಾಲೂಕಿನ ಸಂಗನಕಲ್ಲು ಗ್ರಾಮದ ಬಳಿಯ ಬೆಟ್ಟಗಳು ಪ್ರಾಚೀನ ಮಾನವನ ವಾಸದ ಕುರುಹುಗಳನ್ನು ಹೊಂದಿವೆ. ಒಂದು ಸಾವಿರ ಎಕರೆ ಪ್ರದೇಶದಲ್ಲಿರುವ ಬೆಟ್ಟಗಳು ಐದು ಸಾವಿರ ವರ್ಷಗಳ ಹಿಂದಿನ ಇತಿಹಾಸ ಹೇಳುತ್ತವೆ.

ಈ ಬೆಟ್ಟಗಳಲ್ಲಿ ನವಶಿಲಾಯುಗದಿಂದ ಕಬ್ಬಿಣದ ಯುಗದವರೆಗಿನ ಮನುಷ್ಯ ನೆಲೆಯ ಅವಶೇಷಗಳಿವೆ. ಶಿಲಾ ಉಪಕರಣಗಳು, ಮಡಕೆಗಳು, ಉತ್ಖನದ ವೇಳೆ ದೊರೆತ ಇತ್ಯಾದಿ ವಸ್ತುಗಳನ್ನು ನಗರದ ಸಾಂಸ್ಕೃತಿಕ ಸಮುತ್ಛಯ ಆವರಣದಲ್ಲಿರುವ ಕಲಾ ಪ್ರದರ್ಶನಾಲಯ ಕಟ್ಟಡದಲ್ಲಿ ಸಂಗ್ರಹಿಸಿಡಲಾಗಿದೆ. ಮ್ಯೂಜಿಯಂ ಕೆಳಮಹಡಿಯಲ್ಲಿ ಮಾನವನ ಜೈವಿಕ, ಸಾಂಸ್ಕೃತಿಕ ವಿಕಸನ ಹಾಗೂ ಆದಿಮಾನವ ಮೂಲ ನೆಲೆಯಾದ ಆಫ್ರಿಕಾದಿಂದ ಜಗತ್ತಿನ ಇತರ ಭೂ ಭಾಗಕ್ಕೆ ವಲಸೆ ಹೋದ ಎಂಬುದರ ಮಾಹಿತಿ ಇದೆ. ಆದಿ ಮಾನವನ ವಿಕಸನದ ವಿವಿಧ ಹಂತಗಳ ಬುರಡೆ ಮಾದರಿಯ ಪ್ರತಿರೂಪಗಳಿವೆ. ಭಾರತದ ಪ್ರಾಚೀನತೆ, ಸಾಂಸ್ಕೃತಿಕ ಬೆಳವಣಿಗೆ, ಶಿಲಾಯುಗದ ವಿವಿಧ ಹಂತಗಳು ಹಾಗೂ ಕೃಷಿ ಜೀವನದ ಆರಂಭದವರೆಗಿನ ಬೆಳವಣಿಗೆಗಳ ಇತಿಹಾಸವನ್ನು ಮ್ಯೂಜಿಯಂನಲ್ಲಿ ನೋಡಬಹುದಾಗಿದೆ. ಉತ್ತರ ಕರ್ನಾಟಕ ಹಾಗೂ ಆಂಧ್ರದ ರಾಯಲಸೀಮಾ ಭಾಗದಲ್ಲಿ ದೊರೆತಿರುವ ಪ್ರಾಗೈತಿಕಹಾಸದ ವಸ್ತುಗಳು ಮ್ಯೂಜಿಯಂನಲ್ಲಿಡಲಾಗಿದೆ.

ಬ್ರೂಸ್‌ಫೂಟ್‌ ಹೆಸರು ನಾಮಕರಣ: ದೇಶದಲ್ಲಿ ಆದಿಮಾನವನ ನೆಲೆಗಳನ್ನು ಗುರುತಿಸಿದ ಮೊದಲ ವ್ಯಕ್ತಿ ರಾಬರ್ಟ್‌ ಬ್ರೂಸ್‌ಫೂಟ್‌. ಸಂಗನಕಲ್ಲು ನವಶಿಲಾಯುಗದ ಕುರಿತು ಅಧ್ಯಯನ ಮಾಡಿದ, ಬಳ್ಳಾರಿ, ಚಿತ್ರದುರ್ಗ ಭಾಗದಲ್ಲಿ ಪೂರ್ವ ಶಿಲಾಯುಗದ ಸ್ಥಳಗಳನ್ನು ಗುರುತಿಸಿದ, ಹಸುವಿನ ಸಗಣಿಯ ರಾಶಿಯಿಂದ ಸುಟ್ಟು ನಿರ್ಮಿಸಲಾಗಿರುವ ಬೂದಿ ದಿಬ್ಬಗಳು ನವಶಿಲಾಯುಗದ ಸಂಸ್ಕೃತಿ ಪ್ರತೀಕವಾಗಿವೆ ಎಂದು ಪ್ರತಿಪಾದಿಸಿದ ಮೊದಲ ವ್ಯಕ್ತಿಯೂ ಅವರು ಈ ಹಿನ್ನೆಲೆಯಲ್ಲಿ ರಾಬರ್ಟ್‌ ಬ್ರೂಸಫೂಟ್‌ ಸಂಗನಕಲ್ಲು ಪ್ರಾಚ್ಯವಸ್ತು ಸಂಗ್ರಹಾಲಯ ಎಂದು ಹೆಸರಿಡಲು ಮ್ಯೂಜಿಯಂ ಸಮಿತಿ ತೀರ್ಮಾನಿಸಲಾಗಿದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; Lokayukta raid on corporation officials

Bellary; ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

1-sp

Ballari: ನೂತನ ಎಸ್ ಪಿಯಾಗಿ ಶೋಭಾ ರಾಣಿ ನೇಮಕ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.