ಆತ್ಯಹತ್ಯೆ ಸಾಧ್ಯತೆ: ನಿರ್ಭಯಾ ಅತ್ಯಾಚಾರಿಗಳ ಮೇಲೆ ಹದ್ದಿನ ಕಣ್ಣು


Team Udayavani, Jan 26, 2020, 6:30 AM IST

nirbhaya

ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರಿಗಳನ್ನು ನೇಣುಗಂಬಕ್ಕೇರಿಸಲು ಇನ್ನು ಆರೇ ದಿನಗಳು ಬಾಕಿ ಉಳಿದಿದ್ದು, ಎಲ್ಲ ನಾಲ್ವರು ಅಪರಾಧಿಗಳ ಮೇಲೆಯೂ ತಿಹಾರ್‌ ಜೈಲಿನ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಗಲ್ಲುಶಿಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅತ್ಯಾಚಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆಯಿರುವ ಕಾರಣ ದಿನದ 24 ಗಂಟೆಯೂ ಅವರ ಮೇಲೆ ಕಣ್ಣಿಡಲಾಗುತ್ತಿದೆ. ಈ ಪ್ರಕ್ರಿಯೆಯನ್ನು “ಸೂಸೈಡ್‌ ವಾಚ್‌’ ಎಂದು ಕರೆಯಲಾಗುತ್ತದೆ.

ಜ.16ರಂದೇ ಅಪರಾಧಿಗಳಾದ ಮುಕೇಶ್‌ ಸಿಂಗ್‌, ಪವನ್‌ ಕುಮಾರ್‌ ಗುಪ್ತಾ, ವಿನಯ್‌ ಶರ್ಮಾ ಮತ್ತು ಅಕ್ಷಯ್‌ನನ್ನು ಜೈಲು ಸಂಖ್ಯೆ 3ಕ್ಕೆ ವರ್ಗಾಯಿಸಲಾಗಿದೆ. ಹೈರಿಸ್ಕ್ ವಾರ್ಡ್‌ನ ಪ್ರತ್ಯೇಕ ಕೊಠಡಿಗಳಲ್ಲಿ ಇವರನ್ನು ಇಡಲಾಗಿದೆ.

ಗೋಡೆಗೆ ತಲೆ ಜಜ್ಜಿಕೊಳ್ಳುವ ಸಾಧ್ಯತೆ: ಈ ಕೊಠಡಿಗಳು 6×8 ಅಳತೆ ಹೊಂದಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸದಾಕಾಲ ಕಾಯುತ್ತಿದ್ದಾರೆ. ಇಲ್ಲಿಗೆ ಅಪರಾಧಿಗಳನ್ನು ಶಿಫ್ಟ್ ಮಾಡುವ ಮೊದಲೇ, ಒಳಗೆ ಲೋಹದ ಚೂರು, ಮೊಳೆ ಇದೆಯೇ ಎಂಬುದನ್ನು ಪರಿಶೀಲಿಸಲಾಗಿದೆ. ಅಪರಾಧಿಗಳು ಸ್ವತಃ ನೋವು ಮಾಡಿಕೊಳ್ಳಲು ಇರುವ ಏಕೈಕ ಮಾರ್ಗ, ತಲೆಯನ್ನು ಗೋಡೆಗೆ ಚಚ್ಚಿಕೊಳ್ಳುವುದು. ಹಿಂದೆ ಅನೇಕ ಅಪರಾಧಿಗಳು ಗಲ್ಲುಶಿಕ್ಷೆ ಮುಂದೂಡಲು ಇಂಥ ಕೃತ್ಯ ಎಸಗಿದ್ದೂ ಇದೆ ಎನ್ನುತ್ತಾರೆ ಜೈಲಧಿಕಾರಿಗಳು. ಹೀಗಾಗಿ, ತೀವ್ರ ನಿಗಾ ವಹಿಸಲಾಗುತ್ತಿದೆ.

ಮತ್ತೆ ಮೇಲ್ಮನವಿ: ಪದೇ ಪದೆ ಅರ್ಜಿ ಸಲ್ಲಿಸಿ ಗಲ್ಲುಶಿಕ್ಷೆ ವಿಳಂಬವಾಗಿಸುವ ಪ್ರಯತ್ನವನ್ನು ಅತ್ಯಾಚಾರಿಗಳು ಮುಂದುವರಿಸಿದ್ದಾರೆ. ಅಪರಾಧಿ ಮುಕೇಶ್‌ ಸಿಂಗ್‌ ಶನಿವಾರ ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ತಮ್ಮ ಕ್ಷಮಾದಾನ ಅರ್ಜಿ ತಿರಸ್ಕಾರಗೊಂಡಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾನೆ. ಜ.17ರಂದೇ ಈತನ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ್ದರು.

ಟಾಪ್ ನ್ಯೂಸ್

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-modi

Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

arest

Puttur: ವಂಚನೆ ಪ್ರಕರಣದ ಆರೋಪಿ ತೆಲಂಗಾಣದಲ್ಲಿ ಬಂಧನ

accident

Kundapura: ಬೈಕ್‌ಗಳ ಮುಖಾಮುಖೀ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ

cow

Kundapura: ರಿಕ್ಷಾದಲ್ಲಿ ಬಂದು ಗೋ ಕಳ್ಳತನ

Untitled-1

Kundapura: ಹೈದರಾಬಾದ್‌ನಲ್ಲಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.