ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ: ವಾರ್ಷಿಕ ಮಹೋತ್ಸವ

ಐದು ದಿನಗಳ ಮಹೋತ್ಸವ ದಿವ್ಯ ಬಲಿಪೂಜೆಯೊಂದಿಗೆ ಆರಂಭ

Team Udayavani, Jan 26, 2020, 8:31 PM IST

ATTUR2

ಕಾರ್ಕಳ: ಸರ್ವಧರ್ಮ ಸಮನ್ವಯ ಕೇಂದ್ರ ಅತ್ತೂರು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಜ. 26ರಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ ಅವರು ಧ್ವಜಾರೋಹಣಗೈದು ಚಾಲನೆ ನೀಡಿದರು.

“ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ’ ಧ್ಯೇಯವಾಕ್ಯದ ಮೇಲೆ ನಡೆಯಲಿರುವ ಐದು ದಿನಗಳ ಮಹೋತ್ಸವವು ದಿವ್ಯ ಬಲಿಪೂಜೆಯೊಂದಿಗೆ ಆರಂಭಗೊಂಡಿತು.

ಗಣರಾಜ್ಯೋತ್ಸದ ಪ್ರಯುಕ್ತ ದೇಶಕ್ಕಾಗಿ ಹಾಗೂ ಎಲ್ಲ ನಾಗರಿಕರಿಗಾಗಿ ಧರ್ಮಾಧ್ಯಕ್ಷರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮಕೇಂದ್ರದ ಪ್ರಧಾನ ಗುರು ರೆ| ಫಾ| ಜಾರ್ಜ್‌ ಡಿ’ಸೋಜಾ ಉಪಸ್ಥಿತಿಯಲ್ಲಿ ಪವಿತ್ರ ಪುಷ್ಕರಿಣಿಯ ಬಳಿ ಸಂತ ಲಾರೆನ್ಸರ ಪ್ರತಿಮೆಯನ್ನು ಧರ್ಮಾಧ್ಯಕ್ಷರು ಪ್ರತಿಷ್ಠಾಪಿಸಿದರು.

ಬಲಿಪೂಜೆಯ ಬಳಿಕ ಅಲಂಕೃತಗೊಂಡ ವಾಹನದಲ್ಲಿ ದಿವ್ಯ ಪರಮ ಪ್ರಸಾದದ ಮೆರವಣಿಗೆ ನಡೆಸಲಾಯಿತು. ಪುಣ್ಯಕ್ಷೇತ್ರದಿಂದ ಹೊರಟು ಚೇತನಹಳ್ಳಿಯ ಯುವಕ ಮಂಡಳದ ವೇದಿಕೆಯ ಬಳಿ ಮೆರವಣಿಗೆ ಸಮಾಪನಗೊಳಿಸಲಾಯಿತು. ಶಿವಮೊಗ್ಗದ ಫಾ| ವೀನಸ್‌ ಪ್ರವೀಣ್‌ ಕೊಲಾಸೊ ನೇತೃತ್ವದಲ್ಲಿ ಕಾರ್ಯಕ್ರಮ ಜರಗಿತು.

ಜನಸಂದಣಿ
ಮಹೋತ್ಸವದ ಮೊದಲನೇ ದಿನ ರವಿವಾರವಾದ ಹಿನ್ನೆಲೆಯಲ್ಲಿ ಅತ್ತೂರು ಬಸಿಲಿಕಾದತ್ತ ಜನಸಾಗರವೇ ಹರಿದು ಬಂತು. ರಸ್ತೆಯ ಇಕ್ಕೆಲಗಳು ಕೂಡ ಜನಸಂದಣಿಯಿಂದ ಗಿಜಿಗುಡುತ್ತಿದ್ದವು. ದಿನದ ಎರಡನೇ ಪ್ರಮುಖ ಬಲಿಪೂಜೆಯನ್ನು ಮಂಗಳೂರಿನ ವಿಶ್ರಾಂತ ಧರ್ಮಾಧ್ಯಕ್ಷ ರೆ| ಡಾ| ಅಲೋಶಿಯಸ್‌ ಡಿ’ಸೋಜಾ ಅವರು ನಡೆಸಿಕೊಟ್ಟರು. ಫಾ| ಸ್ಟೀವನ್‌ ಲೋಬೊ, ಚೇತನ್‌ ಲೋಬೊ, ಜೇಸನ್‌ ಪಾಯ್ಸ ಹಾಗೂ ಮ್ಯಾಕ್ಷಿಮ್‌ ಡಿ’ಸೋಜಾ, ವಿನ್ಸೆಂಟ್‌ ಡಿ’ಸೋಜಾ, ರೂಪೇಶ್‌ ಮಾಡ್ತಾ ಅವರು ಉಪಸ್ಥಿತರಿದ್ದರು. ದಿನದ ಅಂತಿಮ ಬಲಿಪೂಜೆಯನ್ನು ಶಿವಮೊಗ್ಗದ ವಂ| ಗುರು ಸ್ಟ್ಯಾನಿ ಡಿ’ಸೋಜಾ ಅವರು ಕನ್ನಡ ಭಾಷೆಯಲ್ಲಿ ನಡೆಸಿಕೊಟ್ಟರು. ಅಂತಿಮ ಬಲಿಪೂಜೆಯ ಅನಂತರ, ಕಾಸರಗೋಡು ಕೆ.ವಿ. ರಮೇಶ್‌ ಹಾಗೂ ತಂಡದವರಿಂದ “ಕ್ರಿಸ್ತ ಕಾರುಣ್ಯ ಎಂಬ ಯಕ್ಷಗಾನ ಬೊಂಬೆಯಾಟ ಪ್ರದರ್ಶನಗೊಂಡಿತು.

ಚಿತ್ರಗಳು: ಶಿಲ್ಪಾ ಸ್ಟುಡಿಯೋ, ಕಾರ್ಕಳ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.