ಇಬ್ಬರು ಖತರ್ನಾಕ್‌ ಸರಗಳ್ಳರ ಬಂಧನ


Team Udayavani, Jan 29, 2020, 3:06 AM IST

ibbaru

ಬೆಂಗಳೂರು: ಯೂಟ್ಯೂಬ್‌ನಲ್ಲಿ ಸರಚೋರರ ಕರಾಮತ್ತು ವೀಕ್ಷಣೆ, ಆನ್‌ಲೈನ್‌ ತಾಣದಲ್ಲಿ ಕೃತ್ಯಕ್ಕೆ ಬೈಕ್‌ ಖರೀದಿ, ಪೊಲೀಸರಿಗೆ ಸಿಕ್ಕಿಬೀಳಬಾರದು ಎಂದು ದೇವರಿಗೆ ಪೂಜೆ..! ಬಸವನಗುಡಿ ಪೊಲೀಸರ ಬಲೆಗೆ ಬಿದ್ದಿರುವ ಇಬ್ಬರು ಸರಗಳ್ಳರ ಹಿನ್ನೆಲೆಯಿದು.

ಕಳೆದ 6 ತಿಂಗಳಿನಿಂದ ಬೆಂಗಳೂರು ದಕ್ಷಿಣ ವಿಭಾಗ ಸೇರಿ ಹಲವು ಕಡೆ ವೃದ್ಧ ಮಹಿಳೆಯರನ್ನು ಗುರುತಿಸಿ ಸರ ದೋಚುತ್ತಿದ್ದ ಚಿಕ್ಕಬಾಣಸವಾಡಿಯ ರಾಮಮೂರ್ತಿ (33) ಎಲೆಕ್ಟ್ರಾನಿಕ್‌ ಸಿಟಿಯ ಕಾರ್ತಿಕ್‌ (35) ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ. ಆರೋಪಿಗಳಿಂದ 3 ಬೈಕ್‌ಗಳು ಹಾಗೂ 12.28 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಜ.11ರಂದು ಮಧ್ಯಾಹ್ನ ಎನ್‌.ಆರ್‌ ಕಾಲೋನಿಯಲ್ಲಿ ನಡೆದುಹೋಗುತ್ತಿದ್ದ ವಿನೋದ ಲಕ್ಷ್ಮೀ (69) ಅವರನ್ನು ಬೈಕ್‌ನಲ್ಲಿ ಹಿಂಬಾಲಿಸಿದ್ದ ಇಬ್ಬರು ದುಷ್ಕರ್ಮಿಗಳು ಆಕೆಯ ಕತ್ತಿನಲ್ಲಿದ್ದ ಸುಮಾರು ಐವತ್ತು ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ ಇನ್ಸ್‌ಪೆಕ್ಟರ್‌ ಕೆಂಪೇಗೌಡ, ಪಿಎಸ್‌ಐ ರೇಷ್ಮಾ ನೇತೃತ್ವದ ತಂಡ ಆರೋಪಿಗಳಾದ ರಾಮ ಮೂರ್ತಿ ಹಾಗೂ ಕಾರ್ತಿಕ್‌ನನ್ನು ಬಂಧಿಸಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆರೋಪಿಗಳು ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ್ದ 9 ಸರಕಳವು ಪ್ರಕರಣಗಳು ಪತ್ತೆಯಾಗಿವೆ.

ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿದ್ದ ರಾಮಮೂರ್ತಿ ಹಾಗೂ ಕಾರ್ತಿಕ್‌ ಕಳೆದ ಆರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು. ಸುಲಭವಾಗಿ ಹಣ ಗಳಿಸಿ ಐಶಾರಾಮಿ ಜೀವನ ನಡೆಸಲು ಸರಕಳವು ಕೃತ್ಯಗಳಲ್ಲಿ ತೊಡಗಿಕೊಳ್ಳಲು ನಿರ್ಧರಿಸಿದ್ದರು.

ಅದರಂತೆ ಯೂಟ್ಯೂಬ್‌ನಲ್ಲಿ ಮಹಿಳೆಯರ ಸರ ಹೇಗೆ ಕದಿಯುತ್ತಾರೆ ಎಂದು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಆನ್‌ಲೈನ್‌ ಮಾರಾಟ ತಾಣದಲ್ಲಿ ಮೂರು ಬೈಕ್‌ಗಳನ್ನು ಕೂಡ ಖರೀದಿ ಮಾಡಿದ್ದರು. ಬಳಿಕ ಪೊಲೀಸರಿಗೆ ಸಿಕ್ಕಿ ಬೀಳಬಾರದು ಎಂಬ ಉದ್ದೇಶದಿಂದ ಮೈಸೂರು ರಸ್ತೆಯಲ್ಲಿರುವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹರಕೆ ಕಟ್ಟಿಕೊಳ್ಳುತ್ತಿದ್ದರು.

ರಸ್ತೆಬದಿ ನಡೆದುಕೊಂಡು ಹೋಗುವ ವೃದ್ಧ ಮಹಿಳೆಯರನ್ನು ಟಾರ್ಗೆಟ್‌ ಮಾಡುತ್ತಿದ್ದ ಆರೋಪಿಗಳು ಬೈಕ್‌ನಲ್ಲಿ ಅವರನ್ನು ಹಿಂಬಾಲಿಸಿ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಕೃತ್ಯದ ವೇಳೆ ಇಬ್ಬರು ಹೆಲ್ಮೆಟ್‌ ಧರಿಸುತ್ತಿದ್ದರು. ಕಳವು ಮಾಡಿದ ಸರಗಳನ್ನು ಮಾರಿ ಬಂದ ಹಣದಲ್ಲಿ ದುಶ್ಚಟಗಳಿಗೆ ಹಾಗೂ ಶೋಕಿ ಜೀವನಕ್ಕೆ ಖರ್ಚು ಮಾಡುತ್ತಿದ್ದರು ಎಂಬುದು ವಿಚಾರಣೆಯಿಂದ ಗೊತ್ತಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.