![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 30, 2020, 8:36 AM IST
ಹೊಸದಿಲ್ಲಿ: ನಿರ್ದಿಷ್ಟ ಅವಧಿಗೆ ಮಾತ್ರ ನಿರೀಕ್ಷಣಾ ಜಾಮೀನು ಇರುವುದರ ಬದಲು, ವಿಚಾರಣೆ ಪ್ರಕ್ರಿಯೆ ಮುಕ್ತಾಯದ ವರೆಗೆ ಈ ವ್ಯವಸ್ಥೆ ಇರುವಂತಾಗಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.
ನ್ಯಾ| ಅರುಣ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ ಈ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿ, ಕೆಲವು ವಿಶೇಷ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನಿನ ಅವಧಿ ಸಾಮಾನ್ಯವಾಗಿ ಕೊನೆಗೊಳ್ಳುವುದಿಲ್ಲ. ಆರೋಪಿ ವ್ಯಕ್ತಿಯು ಕೋರ್ಟ್ನಿಂದ ಸಮನ್ಸ್ ಪಡೆದಾಗ ಅಥವಾ ವ್ಯಕ್ತಿಯ ಮೇಲೆ ಆರೋಪ ಬಂದಾಗ, ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಳ್ಳುವವರೆಗೂ ನಿರೀಕ್ಷಣಾ ಜಾಮೀನು ಅವಧಿ ಮುಂದುವರಿಯಲಿದೆ ಎಂದು ಅಭಿಪ್ರಾಯಪಟ್ಟಿದೆ.
ವಿಶೇಷ, ವಿಭಿನ್ನ ಸಂದರ್ಭ ಅಗತ್ಯವಿದ್ದರೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅವಧಿಯನ್ನು ನಿಗದಿಪಡಿಸಲಿದೆ ಎಂದು ನ್ಯಾಯಪೀಠ ಪ್ರತಿಪಾದಿಸಿದೆ. ಈ ಪ್ರಕರಣದಲ್ಲಿ ನ್ಯಾ| ಎಸ್. ರವೀಂದ್ರ ಭಟ್, ನ್ಯಾ| ಎಂ.ಆರ್. ಶಾ ಪ್ರತ್ಯೇಕವಾಗಿ ತೀರ್ಪು ಬರೆದಿದ್ದಾರೆ. ಇದರ ಜತೆಗೆ ದೇಶದ ಕೋರ್ಟ್ಗಳಲ್ಲಿ ಯಾವ ರೀತಿಯಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದರ ಬಗ್ಗೆಯೂ ನ್ಯಾಯಪೀಠ ನಿರ್ದೇಶನಗಳನ್ನು ನೀಡಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.