ಕಂಬಳದಲ್ಲಿ “ಚೆನ್ನ’ನ ಓಟಕ್ಕೆ ಯಾರೂ ಸಾಟಿಯಿಲ್ಲ


Team Udayavani, Feb 1, 2020, 7:34 AM IST

Chinna

ಪಡುಬಿದ್ರಿ: ನಿರಂತರ 5 ವರ್ಷಗಳಲ್ಲಿ ಸರಣಿ ಶ್ರೇಷ್ಠ ಗೌರವ ಪಡೆದು, 13 ವರ್ಷಗಳಲ್ಲಿ 150ಕ್ಕೂ ಅಧಿಕ ಚಿನ್ನ ಗೆದ್ದ ಮಹತ್ತರ ಸಾಧನೆ ಮಾಡಿದ ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ರ ಅವರ ಕೋಣ “ಚೆನ್ನ’ ಕಂಬಳ ಕ್ಷೇತ್ರದ ಮಿಂಚಿನ ಓಟಗಾರ.

ಈಗ 19ರ ಹರೆಯವಾದರೂ ಓಟದಲ್ಲಿ ಮೀರಿಸುವ ಕೋಣ ಮತ್ತೂಂದಿಲ್ಲ. ಯಾವುದೇ ತರಬೇತಿಯಿಲ್ಲದೆ 4ರ ಹರೆಯದಲ್ಲೇ ಕಂಬಳಕ್ಕೆ ಇಳಿದಿದ್ದ ಚೆನ್ನ ಸೆಮಿಫೈನಲ್‌ಗೇರಿದ್ದ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ. 75 ಬಾರಿ ಬಿರುಸಿನ ಫೈನಲ್‌ ಸ್ಪರ್ಧೆಯಲ್ಲಿ ವೀಡಿಯೋ ತೀರ್ಪಿನಲ್ಲಿ ಗೆಲುವು ಸಾಧಿಸಿದ್ದಿದೆ. ತನ್ನೊಂದಿಗೆ ಜೊತೆಯಾದ ಯಾವುದೇ ಕೋಣಗಳಿದ್ದರೂ, ಗೆಲುವು ದಕ್ಕಿಸಿಕೊಂಡಿದೆ.

ನಾಲ್ವರು ಯಜಮಾನರು:
ಹಲವಾರು ಓಟಗಾರರು
ಬೆಳುವಾಯಿ ಪೈರಿನಿಂದ ಕಾಂತಾವರ ಗ್ರಾಮದ ಬೈದೊಟ್ಟು ಪ್ರಕಾಶ್‌ ಪೂಜಾರಿ ಮನೆಗೆ ಬಂದಿದ್ದ 2 ವರ್ಷದ ಚೆನ್ನ ಬಳಿಕ ಕಡಂದಲೆ ಕಾಳು ಪಾಣಾರ, ಬಾಕೂìರು ಶಾಂತಾರಾಮ ಶೆಟ್ಟಿ ಹಾಗೂ ಪ್ರಸ್ತುತ 13 ವರ್ಷಗಳಿಂದ ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿಯವರ ಬಳಿ ಇದೆ. 2004ರಿಂದ 2009 ರವರೆಗೆ ನೇಗಿಲು ಕಿರಿಯ, ಹಿರಿಯ ಹಾಗೂ ಹಗ್ಗ ಹಿರಿಯ ವಿಭಾಗಳಲ್ಲಿ ಚಿನ್ನದ ಬೇಟೆ ಮೂಲಕ ಸತತ 5 ವರ್ಷ ಸರಣಿ ಶ್ರೇಷ್ಠ ಗೌರವ ಪಡೆದಿದೆ. 2006 ನವೆಂಬರ್‌ನಿಂದ 2007 ಜನವರಿವರೆಗೆ 10 ಕಂಬಳ ಕೂಟಗಳಲ್ಲಿ 8 ಮೆಡಲ್‌ ಪಡೆದಿದೆ.

ನಕ್ರೆ ಜಯಕರ ಮಡಿವಾಳ, ಅಳದಂಗಡಿ ರವಿ ಕುಮಾರ್‌, ಮರೋಡಿ ಶ್ರೀಧರ್‌, ಮಾರ್ನಾಡ್‌ ರಾಜೇಶ್‌, ಹಕ್ಕೇರಿ ಸುರೇಶ್‌ ಶೆಟ್ಟಿ, ಅಳದಂಗಡಿ ಸತೀಶ್‌ ದೇವಾಡಿಗ, ಪಣಪೀಲು ಸಾಧು ಶೆಟ್ಟಿ ಸಹಿತ ದೀರ್ಘ‌ ಕಾಲ ಪಲಿಮಾರು ದೇವೇಂದ್ರ ಕೋಟ್ಯಾನ್‌ ಚೆನ್ನನಿರುವ ಜೋಡಿ ಕೋಣಗಳನ್ನು ಓಡಿಸಿ ಓಟದ ಚಾಕಚಕ್ಯತೆ ಪ್ರದರ್ಶಿಸಿದ್ದಾರೆ.

ಇಂದು ಚೆನ್ನಗೆ ಸಮ್ಮಾನ
2019ರ ಅಕ್ಟೋಬರ್‌ನಲ್ಲಿ ನಾರಾವಿ ಬೊಟ್ಟು ಜವನೆರ್‌, ಶ್ರೀ ಸೂರ್ಯ ಫ್ರೆಂಡ್ಸ್‌ ಸಂಘಟನೆ ಚಿನ್ನದ ವೀರ ಚೆನ್ನನನ್ನು ಸಮ್ಮಾನಿಸಿತ್ತು. ಫೆ.1 ರಂದು ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಬೃಹತ್‌ ಗೋ ಸಮ್ಮೇಳನದಲ್ಲಿ ಚೆನ್ನನನ್ನು ಸಮ್ಮಾನಿಸುವ ಕಾರ್ಯಕ್ರಮವನ್ನು ಸಂಘಟಕರು ಇಟ್ಟುಕೊಂಡಿದ್ದಾರೆ.

ದೈಹಿಕ ಕ್ಷಮತೆ ಇರುವವರೆಗೆ ಓಟ
ಸುಮಾರು 150 ಚಿನ್ನದ ಪದಕ ಗಳಿಸುವ ಮೂಲಕ ಯಜಮಾನನಿಗೆ ನ್ಯಾಯ ಒದಗಿಸಿಕೊಟ್ಟಿರುವ ಚೆನ್ನ, ಕಂಬಳ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಕ್ರೀಡಾರತ್ನ ಪುರಸ್ಕಾರ ಲಭಿಸಲು ಕಾರಣನಾಗಿದ್ದಾನೆ. ಅಡ್ವೆ ಕಂಬಳದಲ್ಲಿ ಹಗ್ಗ ಹಿರಿಯ ವಿಭಾಗದಲ್ಲಿ ಚೆನ್ನನ ಕೊನೆ ಓಟವಾಗಿತ್ತು. ದೈಹಿಕ ಕ್ಷಮತೆ ಇರುವವರೆಗೆ ನೇಗಿಲು ವಿಭಾಗದಲ್ಲಿ ಸ್ಪರ್ಧೆಗಿಳಿಯಲಿದ್ದಾನೆ ಎಂದು ಚೆನ್ನನ ಯಜಮಾನ ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿ ಹೇಳಿದ್ದಾರೆ.

ಅಪಾರ ಬುದ್ಧಿ
ಸಾಧು ಸ್ವಭಾವದ ಚೆನ್ನ ಕಂಬಳದ ದಿನ ಹಟ್ಟಿಯಿಂದ ಹೊರಬಂದಂತೆ ಮನೆ ತುಳಸೀ ಕಟ್ಟೆಗೆ ಪ್ರದಕ್ಷಿಣೆ ಬಂದು ತಾನು ಸಾಗುವ‌ ವಾಹನವನ್ನೇರಿ ಮಲಗಿಬಿಡುವ ಬುದ್ಧಿಮತ್ತೆಗೆ ಸಲಾಂ ಹೊಡೆಯಲೇ ಬೇಕು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.