BB-07: ಕರಾವಳಿಯ ಪ್ರತಿಭೆ ಶೈನ್ ಶೆಟ್ಟಿ ‘ಬಿಗ್ ಬಾಸ್’ ವಿನ್ನರ್; ಕುರಿ ಪ್ರತಾಪ್ ರನ್ನರ್ ಅಪ್

ಮೂರು ತಿಂಗಳ ಕಾಲ ನಡೆದ ರಿಯಾಲಿ ಶೋ ಟೈಟಲ್ ಗೆದ್ದ ‘ರಿಯಲ್ ಸ್ಟಾರ್’ ಶೈನ್ ಶೆಟ್ಟಿ ; ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡ ವಾಸುಕಿ ವೈಭವ್

Team Udayavani, Feb 2, 2020, 11:41 PM IST

BB-Winner-01

ಬೆಂಗಳೂರು: ಕನ್ನಡ ಮನೋರಂಜನಾ ಲೋಕದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮ ಬಿಗ್ ಬಾಸ್ ಸೀಸನ್ 7ರ ವಿನ್ನರ್ ಆಗಿ ಉಡುಪಿ ಮೂಲದ ನಟ ಶೈನ್ ಶೆಟ್ಟಿ ಅವರು ಮೂಡಿಬಂದಿದ್ದಾರೆ. ಮಜಾ ಟಾಕೀಸ್ ಖ್ಯಾತಿಯ ನಟ ಕುರಿ ಪ್ರತಾಪ್ ರನ್ನರ್‌ ಅಪ್ ಆಗಿದ್ದಾರೆ. ಪ್ರತಿಭಾವಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ವಾಸುಕಿ ವೈಭವ್ ಅವರು ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.


ಇಂದು ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ಬಿಗ್ ಬಾಸ್ ಫಿನಾಲೆ ಮೆಗಾ ಶೋನಲ್ಲಿ ಈ ಕಾರ್ಯಕ್ರಮದ ನಿರೂಪಕ ಚಿತ್ರ ನಟ ಕಿಚ್ಚ ಸುದೀಪ್ ಅವರು ಶೈನ್ ಶೆಟ್ಟಿ ಅವರ ಹೆಸರನ್ನು ಘೋಷಿಸುತ್ತಿದ್ದಂತೆ ಬಿಗ್ ಬಾಸ್ ಸ್ಟೇಜ್ ಬಾಣ ಬಿರುಸುಗಳಿಂದ ತುಂಬಿಹೋಯಿತು. ಶೈನ್ ಹೆಸರು ಘೋಷಣೆಯಾಗುತ್ತಿದ್ದಂತೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಈ ಸೀಸನ್ ನ ಇತರೇ ಸ್ಪರ್ಧಿಗಳ ಹಾಗೂ ಪ್ರೇಕ್ಷಕರ ಭಾರೀ ಕರಾಡತನ ಸಭಾಂಗಣವನ್ನು ತುಂಬಿಕೊಂಡಿತು. ವಿಜೇತ ಶೈನ್ ಶೆಟ್ರಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ರೋಫಿ ಹಾಗೂ 50 ಲಕ್ಷ ರೂ. ನಗದು ಬಹುಮಾನವನ್ನು ವಿತರಿಸಿದರು.

ಈ ಬಾರಿಯ ಬಿಗ್ ಬಾಸ್ ನಲ್ಲಿ 18 ಜನ ಸ್ಪರ್ಧಿಗಳು ಮನೆಯೊಳಗೆ ಪ್ರವೇಶಿಸಿದ್ದರು. ಇವರಲ್ಲಿ ಜನಪ್ರಿಯ ಪತ್ರಕರ್ತ ರವಿ ಬೆಳಗೆರೆ, ಹಿರಿಯ ನಟ, ನಿರ್ಮಾಪಕ ಜೈ ಜಗದೀಶ್, ರಂಗಭೂಮಿ ಹಾಗೂ ಚಿತ್ರ ನಟ ರಾಜು ತಾಳಿಕೋಟೆ, ಸಂಗೀತ ನಿರ್ದೇಶಕ ವಾಸುಕಿ ವೈಭವ್, ನಿರೂಪಕಿ, ನಟಿ, ಸುಜಾತ ಅವರು ಪ್ರಮುಖರಾಗಿದ್ದರು. ಒಟ್ಟು 113 ದಿನಗಳ ಕಾಲ ನಡೆದ ಈ ಸ್ಪರ್ಧೆಯಲ್ಲಿ ಪ್ರತೀ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದರು.

ಅಂತಿಮವಾಗಿ ಶೈನ್ ಶೆಟ್ಟಿ, ಕುರಿ ಪ್ರತಾಪ್, ವಾಸುಕಿ ವೈಭವ್, ದೀಪಿಕಾ ದಾಸ್ ಮತ್ತು ಭೂಮಿ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದರು. ಅವರಲ್ಲಿ ಭೂಮಿ ಶೆಟ್ಟಿ ಮತ್ತು ದೀಪಿಕಾ ದಾಸ್ ಅವರು ಶನಿವಾರ ಮನೆಯಿಂದ ಹೊರಬಿದ್ದಿದ್ದರು. ಆ ಮೂಲಕ ಶೈನ್, ಪ್ರತಾಪ್ ಮತ್ತು ವಾಸುಕಿ ಬೆಸ್ಟ್ ತ್ರೀ ಸ್ಪರ್ಧಿಗಳಾಗಿ ಮೂಡಿಬಂದಿದ್ದರು.

ಆದಿತ್ಯವಾರ ಮೆಗಾ ಫೈನಲ್ ಗೂ ಮುಂಚೆ ವಾಸುಕಿ ವೈಭವ್ ತೃತೀಯ ಸ್ಥಾನಿಯಾಗಿ ಹೊರಬಿದ್ದರು. ಬಳಿಕ ಇದ್ದಿದ್ದು ಶೈನ್ ಮತ್ತು ಪ್ರತಾಪ್ ಅವರ ನಡುವೆ ವಿನ್ನರ್ ಯಾರೆಂಬ ಕುತೂಹಲ.

ಮೂಲತಃ ಕುಂದಾಪುರದವರಾದ ಶೈನ್ ಶೆಟ್ಟಿ ಶರಶ್ಚಂದ್ರ ಶೆಟ್ಟಿ ಹಾಗೂ ಇಂದಿರಾ ಎಸ್. ಶೆಟ್ಟಿ ದಂಪತಿಯ ಹಿರಿಯ ಪುತ್ರ. ಶೈನ್ ಹೆತ್ತವರು ಕಳೆದ 10 ವರ್ಷಗಳಿಂದ ಉಡುಪಿಯ ಆತ್ರಾಡಿಯಲ್ಲಿ ವಾಸವಾಗಿದ್ದಾರೆ. ಶೈನ್ ಅವರು ತಮ್ಮ ಶಿಕ್ಷಣವನ್ನು ಉಡುಪಿ ಸುತ್ತಮುತ್ತಲೇ ಪೂರೈಸಿದ್ದಾರೆ.  ಬ್ರಹ್ಮಾವರದ ಲಿಟಲ್ ರಾಕ್, ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು, ಮಣಿಪಾಲದ ಎಂಪಿಎಂಸಿ, ಹೆಬ್ರಿಯ ನವೋದಯ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಯಾಗಿರುವ ಶೈನ್ ಅವರು ಬಳಿಕ ನಟನಾ ಕ್ಷೇತ್ರದಲ್ಲಿ ಅವಕಾಶವನ್ನು ಅರಸಿಕೊಂಡು ಉದ್ಯಾನ ನಗರಿ ಬೆಂಗಳೂರಿಗೆ ಬಂದರು.

ಬಹುಮುಖ ಪ್ರತಿಭೆಯು ಶೈನ್ ಶೆಟ್ಟಿ ಅವರು ಸ್ಯಾಂಡಲ್‌ವುಡ್‌ನಲ್ಲಿ ಸಾಧನೆ ಮಾಡುವ ಗುರಿ-ಛಲದೊಂದಿಗೆ ಕಳೆದ 7 ವರ್ಷಗಳ ಹಿಂದೆ ಬೆಂಗಳೂರಿಗೆ ಪ್ರಯಾಣಿಸಿದರು. ಇವರಲ್ಲಿರುವ ನಟನಾ ಪ್ರತಿಭೆಗೆ ಆರಂಭದಲ್ಲೇ ಕಿರುತೆರೆಯಲ್ಲಿ ಅವಕಾಶಗಳು ಅರಸಿ ಬಂದವು. ‘ಮೀರಾ ಮಾಧವ’, ‘ಲಕ್ಷ್ಮೀ ಬಾರಮ್ಮ’, ‘ಮನೆದೇವ್ರು’, ‘ಕೋಗಿಲೆ’, ‘ಕನಕ’ ಮತ್ತಿತರ ಧಾರಾವಾಹಿಗಳಲ್ಲಿ ನಟಿಸಿ ಕರ್ನಾಟಕದ ಮನೆಮಾತಾದರು. ಉತ್ತಮ ಕಂಠಸಿರಿಯನ್ನೂ ಹೊಂದಿರುವ ಶೈನ್ ಅವರು ಸುವರ್ಣ ಸ್ಟಾರ್ ಸಿಂಗರ್‌ ಕಾರ್ಯಕ್ರಮದ ಫೈನಲ್ ಹಂತದವರೆಗೂ ತಲುಪಿದ್ದರು. ಶೈನ್ ಅವರು ‘ಕುಡ್ಲ ಕೆಫೆ’, ‘ರಂಗ್’ ಎಂಬ ಎರಡು ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತುಳು ಚಿತ್ರರಂಗದಲ್ಲೂ ತಮ್ಮ ಅಭಿನಯ ಚಾತುರ್ಯವನ್ನು ಪ್ರದರ್ಶಿಸಿದ್ದಾರೆ.

ಇನ್ನುಳಿದಂತೆ ‘ಒಂದು ಮೊಟ್ಟೆಯ ಕಥೆ’, ‘ಅಸ್ತಿತ್ವ’, ‘ಜೀವನ ಯಜ್ಞ’, ‘ಕ’ ಮೊದಲಾದ ಕನ್ನಡ ಚಿತ್ರಗಳಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಯನ್ನು ನಡೆಸಿದ್ದಾರೆ. ಗಾಯಕರೂ, ಕಾರ್ಯಕ್ರಮ ನಿರೂಪಕರೂ ಆಗಿರುವ ಶೈನ್ ಶೆಟ್ರು ತಮ್ಮ ಜೀವನದಲ್ಲಿ ಹಲವು ಏಳುಬೀಳುಗಳನ್ನು ಕಂಡವರು. ಕಠಿಣ ಪರಿಶ್ರಮದ ಮೂಲಕ ಚಿತ್ರರಂಗದಲ್ಲಿ ತನ್ನ ಛಾಪನ್ನು ಮೂಡಿಸುತ್ತಿರುವ ಕರಾವಳಿಯ ಈ ಪ್ರತಿಭೆಯ ಮುಡಿಗೆ ಇದೀಗ ಬಿಗ್ ಬಾಸ್ ಕಿರೀಟ ಲಭಿಸಿರುವುದು ಅವರ ಪ್ರತಿಭೆಗೆ ಸಿಕ್ಕಿದ ಮನ್ನಣೆಯಾಗಿದೆ.

ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ, ಎರಡನೇ ಸ್ಥಾನ ಗಳಿಸಿದ ಕುರಿ ಪ್ರತಾಪ್ ಮತ್ತು ತೃತೀಯ ಸ್ಥಾನ ಗಳಿಸಿದ ವಾಸುಕಿ ವೈಭವ್ ಅವರಿಗೆ ಅಭಿನಂದನೆಗಳು.

ಟಾಪ್ ನ್ಯೂಸ್

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

1-mmmm

PM Modi ಕಿಡಿ ; ರೊಹಿಂಗ್ಯಾ ಜತೆ ಜೆಎಂಎಂ ಶಾಮೀಲಾಗಿದೆ

1-weewqeqwe

Bihar;ಹೊಲಕ್ಕೆ ನುಗ್ಗಿದ ರೈಲು ಎಂಜಿನ್‌: ನೆಟ್ಟಿಗರ ಕಟು ಟೀಕೆ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

deepak subramanya’s Mr Rani movie

Kannada Movie: ಮಿ.ರಾಣಿ ಎಂದ ದೀಪಕ್‌ ಸುಬ್ರಹ್ಮಣ್ಯ

Kiran raj

Ronny: ಗಿಮಿಕ್‌ ಅಗತ್ಯ ನನಗಿಲ್ಲ…: ಅಪಘಾತ ಹಿನ್ನೆಲೆಯಲ್ಲಿ ಕಿರಣ್‌ ರಾಜ್‌ ಮಾತು

simha roopini Kannada movie

Simha Roopini; ಹಾಡಿನಲ್ಲಿ ʼಸಿಂಹ ರೂಪಿಣಿ’

Abhimanyu Kashinath starrer Ellige Payana Yavudo Daari movie teaser

Abhimanyu Kashinath: ʼಎಲ್ಲಿಗೆ ಪಯಣ ಯಾವುದೋ ದಾರಿ’ ಟೀಸರ್‌ ಬಂತು

Kannada Movie; ಟೀಸರ್‌ ನಲ್ಲಿ ಅಸುರರು

Kannada Movie; ಟೀಸರ್‌ ನಲ್ಲಿ ಅಸುರರು

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

train-track

Landslide: ತುರ್ತು ಬ್ರೇಕ್‌ ಹಾಕಿದ ಕಾರಣ ತಪ್ಪಿದ ರೈಲು ದುರಂತ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

1-ghhh

ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.