ಕನ್ನಡ ಕಾವ್ಯ ರಚನೆಯಿಂದ ಮನಸು ಪ್ರಪುಲ್ಲ


Team Udayavani, Feb 3, 2020, 3:06 AM IST

kannada-kavya

ಬೆಂಗಳೂರು: ಕನ್ನಡದ ಅಕ್ಷರ ನನಗೆ ಎಲ್ಲವನ್ನೂ ಕರುಣಿಸಿದೆ. ನನ್ನ ಏಳ್ಗೆಗೆ ಕನ್ನಡ ಭಾಷಾ ಸಾಹಿತ್ಯ ರಚನೆ ಕಾರಣವಾಗಿದೆ.ಹೀಗಾಗಿ ಕನ್ನಡ ಮಾತೆಗೆ ನಾನು ಸದಾ ಋಣಿ ಎಂದು ನಿತ್ಯೋತ್ಸವ ಕವಿ ನಾಡೋಜ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ನಾಡೋಜ ನಿಸಾರ್‌ ಅಹಮದ್‌ ಅಭಿಮಾನಿಗಳ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ “ನಿತ್ಯೋತ್ಸವ-84′ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಕನ್ನಡ ಭಾಷೆಯಲ್ಲಿನ ಕಾವ್ಯ ರಚನೆ ನನ್ನನ್ನು ಬಹು ಎತ್ತರಕ್ಕೆ ಕೊಂಡೊಯ್ದಿದೆ. ಹೀಗಾಗಿ ಮನಸು ಕೂಡ ಪ್ರಪುಲ್ಲವಾಗಿದೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಅಧ್ಯಾಪಕನಾಗಿದ್ದಾಗ ನಿತ್ಯೋ ತ್ಸವ ಕವನ ಸಂಕಲನ ಹೊರತಂದೆ. ಆ ವೇಳೆ ಸುಗಮ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಹಿರಿಯ ಗಾಯಕ ಮತ್ತು ಸಂಗೀತ ನಿರ್ದೇಶಕ ಮೈಸೂರು ಅನಂತಸ್ವಾಮಿ ಅವರಿಗೆ ನನ್ನ ನಿತ್ಯೋತ್ಸವ ಕವನ ಸಂಕಲ ಕಣ್ಣಿಗೆ ಬಿತ್ತು. ಅವರಿಂದಾಗಿಯೇ ನಿತ್ಯೋ ತ್ಸವ ಗೀತೆಗಳು ನಾಡಿನಾದ್ಯಂತ ಮನ-ಮನೆಗಳಿಗೆ ತಲುಪಿದವು. ನನ್ನ ಕವಿತೆಗಳ ಯಶಸ್ಸಿನ ಶ್ರೇಯಸ್ಸು ಮೈಸೂರು ಅನಂತಸ್ವಾಮಿ ಅವರಿಗೆ ಸಲ್ಲುತ್ತದೆ ಎಂದರು.

ಅನನ್ಯತೆ ತಂದು ಕೊಟ್ಟರು: ಹಿರಿಯ ವಿಮರ್ಶಕ ಡಾ.ಸಿ.ಎನ್‌.ರಾಮಚಂದ್ರನ್‌ ಮಾತನಾಡಿ, ಕನ್ನಡ ಸಾಹಿತ್ಯ ಲೋಕಕ್ಕೆ ಕೆ.ಎಸ್‌.ನಿಸಾರ್‌ ಅಹಮದ್‌ ಅವರ ಕೊಡುಗೆ ಅಪಾರ. ಜತೆಗೆ ಹೊಸ ಹೊಸ ಆಯಾಮಗಳಲ್ಲಿ ಕವಿತೆಗಳನ್ನು ರಚಿಸಿ ಕನ್ನಡ ಕಾವ್ಯಲೋಕ್ಕೆ ಅನನ್ಯತೆ ತಂದು ಕೊಟ್ಟ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ ಎಂದು ಶ್ಲಾ ಸಿದರು.

ಸಾಹಿತ್ಯ ಕೃಷಿ: ಅನುವಾದಕ ಎಂ.ಎಸ್‌.ರಘುನಾಥ್‌ ಮಾತನಾಡಿ, ನಿಸಾರ್‌ ಅಹಮದ್‌ ಅವರ ಮನೆ ಮಾತು ಉರ್ದು. ಆದರೂ ಕನ್ನಡ ಭಾಷೆಯ ಮೇಲಿದ್ದ ಪ್ರೀತಿ ಅವರನ್ನು ಕಾವ್ಯ ರಚನೆಗೆ ಕರೆತಂದಿತು. “ಬೆಣ್ಣೆ ಕದ್ದ ನಮ್ಮ ಕೃಷ್ಣ ‘ ಕವನ ನಿಸಾರ್‌ ಅವರ ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿದೆ. ಸಂವೇದನ ಶೀಲತೆ ಅವರ ಕಾವ್ಯದಲ್ಲಿ ಹುದು ಗಿದೆ ಎಂದು ತಿಳಿಸಿದರು. ಲೇಖಕ ಮತ್ತು ಅನು ವಾದಕರಾದ ಸ.ರಘುನಾಥ್‌, ಪಾರ್ವತಿ ಐತಾಳ್‌, ಲತಾಬಾಯಿ, ಮಾಹಿರ್‌ ಮನ್ಸೂರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.