ಅಪಾಯ ಆಹ್ವಾನಿಸುತ್ತಿವೆ ವಿದ್ಯುತ್‌ ಸ್ವಿಚ್‌ಬೋರ್ಡ್‌


Team Udayavani, Feb 3, 2020, 2:56 PM IST

hv-tdy-1

ಹಾವೇರಿ: ನಗರದ ವಿವಿಧ ಬಡಾವಣೆ ಹಾಗೂ ವಿವಿಧ ಸ್ಥಳಗಳಲ್ಲಿ ಅಳವಡಿಸಿರುವ ವಿದ್ಯುತ್‌ ಸ್ವಿಚ್‌ಬೋರ್ಡ್‌ಗಳು ಜನ-ಜಾನುವಾರುಗಳ ಪ್ರಾಣಕ್ಕೆ ಸಂಚಕಾರ ಮೂಡಿವಂತಿದ್ದು, ಪಾದಾಚಾರಿಗಳಲ್ಲೂ ಆತಂಕ ಮೂಡಿಸಿದೆ.

ಸ್ಥಳೀಯ ವಿವಿಧ ಬಡಾವಣೆಗಳಲ್ಲಿ ವಿದ್ಯುತ್‌ ಕಂಬಗಳಲ್ಲಿ ಬೀದಿದೀಪದ ನಿರ್ವಹಣೆಗೆ ಸ್ವಿಚ್‌ ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯ, ನಿರ್ವಹಣೆ ಕೊರತೆಯಿಂದ ಅನೇಕ ಸ್ವಿಚ್‌ಬೋರ್ಡ್‌ಗಳು ಹಾಳಾಗಿದ್ದು, ವೈಯರ್‌ಗಳು ಹೊರಬಂದಿವೆ. ಈ ವೈಯರ್‌ಗಳಲ್ಲಿ ವಿದ್ಯುತ್‌ ಪ್ರವಹಿಸುತ್ತಿವೆ. ಇಂಥ ಸ್ವಿಚ್‌ ಬೊರ್ಡ್‌ಗಳು ಮಕ್ಕಳು, ಸಾರ್ವಜನಿಕರ ಕೈಗೆಟುಕುವಂತಿರುವುದು ಅಪಾಯ ತಂದೊಡ್ಡುವ ಸಾಧ್ಯತೆ ಇದೆ.

ಸ್ಥಳೀಯ ವಿದ್ಯಾನಗರದ 3ನೇ ಕ್ರಾಸ್‌ ಫೆಡರಲ್‌ ಬ್ಯಾಂಕ್‌ ಪಕ್ಕದ ರಸ್ತೆ, ವಿದ್ಯಾನಗರದ 3ನೇ ಕ್ರಾಸ್‌ ಮೇನ್‌ರೋಡ್‌, ಪಿ.ಬಿ.ರಸ್ತೆ, ಶಿವಾಜಿನಗರ 4ನೇ ಕ್ರಾಸ್‌ ಹತ್ತಿರ, ಸಂಚಾರಿ ಪೊಲೀಸ್‌ ಠಾಣೆ ಎದುರು, ಬಸವೇಶ್ವರ ನಗರ, ಅಶ್ವಿ‌ನಿ ನಗರ, ನಾಗೇಂದ್ರನಮಟ್ಟಿ, ಶಿವಬಸವ ನಗರ, ಕಲ್ಲುಮಂಟಪ ರೋಡ್‌, ಎಂ.ಜಿ.ರಸ್ತೆ, ತರಕಾರಿ ಮಾರುಕಟ್ಟೆ, ಹೊಸನಗರ, ಮಂಜುನಾಥ ನಗರ ಸೇರಿದಂತೆ ನಗರ ಬಹುತೇಕ ಕಡೆಗಳಲ್ಲಿನ ಸ್ವಿಚ್‌ಬೋರ್ಡ್‌ಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.

ಹಾಳಾದ ಸ್ವಿಚ್‌ಬೋರ್ಡ್‌: ನಗರದ ವಿವಿಧ ಬಡಾವಣೆಗಳಲ್ಲಿ ಅಳವಡಿಸಿರುವ ಸ್ವಿಚ್‌ಬೋರ್ಡ್‌ಗಳು ತುಕ್ಕು ಹಿಡಿದು ಹಾಳಾಗಿವೆ. ಅಲ್ಲದೇ ಬಹುತೇಕ ಸ್ವಿಚ್‌ಬೋರ್ಡ್‌  ಗಳಿಗೆ ಬಾಗಿಲು ಇಲ್ಲದೇ ತೆರೆದುಕೊಂಡಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿವೆ. ಇನ್ನು ಕೆಲವುಕಡೆಗಳಲ್ಲಿ ಸಿಬ್ಬಂದಿ ಬೋರ್ಡ್‌ನಲ್ಲಿ ಸ್ವಿಚ್‌ಆನ್‌ ಮಾಡಿ ಬಾಗಿಲು ಹಾಕದೇ ಹಾಗೆ ಹೊರಟು ಹೋಗುತ್ತಿದ್ದಾರೆ. ಕೆಲವು ಕಡೆಗಳಲ್ಲಿ ವೈಯರ್‌ಗಳು ಹೊರಗೆ ಬಿದ್ದಿದ್ದು ಅದನ್ನು ಸರಿಪಡಿಸುವ ಗೋಜಿಗೆ ಯಾರೂ ಹೋಗುತ್ತಿಲ್ಲ. ಇದರಿಂದಾಗಿ ನಗರದಲ್ಲಿ ವಿದ್ಯುತ್‌ ಸ್ವಿಚ್‌ಬೋರ್ಡ್‌ಗಳಿಂದ ಜಾನುವಾರು ಹಾಗೂ ಜನರ ಪ್ರಾಣಕ್ಕೆ ಕಂಟಕಪ್ರಾಯವಾಗುವ ಸಾಧ್ಯತೆ ಇದೆ.

ನಗರದಲ್ಲಿ ಸುಮಾರು 20ಸಾವಿರಕ್ಕೂ ಹೆಚ್ಚು ವಿದ್ಯುತ್‌ ಕಂಬಗಳಿವೆ. ಅವುಗಳಲ್ಲಿ ಕೆಲವೊಂದು ಪ್ರಮುಖ ಸ್ಥಳಗಳಲ್ಲಿ ಸ್ವಿಚ್‌ ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ಆದರೆ, ಇಲ್ಲಿ ಸಾರ್ವಜನಿಕರ ಗಮನಕ್ಕೆ ಬರುವಂತೆ ಎಚ್ಚರಿಕೆಯ ನಾಮಫಲಕಗಳನ್ನು ಅಳವಡಿಸಿಲ್ಲ. ಇನ್ನೂ ಕೆಲವಡೆ ನಗರದಲ್ಲಿ ವಿದ್ಯುತ್‌ ಪರಿವರ್ತಕಗಳ ಸುತ್ತ ಹಾಕಲಾಗಿರುವ ತಂತಿಬೇಲಿ ಸಹ ಹಾಳಾಗಿದ್ದು, ದನಕರುಗಳು ಒಳಗಡೆ ಪ್ರವೇಶ ಮಾಡುವಂತಾಗಿದೆ. ಅಪಾಯ ಆಹ್ವಾನಿಸುತ್ತಿರುವ ವಿದ್ಯುತ್‌ ಕಂಬಗಳ ಸ್ವಿಚ್‌ ಬೋರ್ಡ್‌ಗಳನ್ನು ದುರಸ್ತಿಗೊಳಿಸಿ ಅಪಾಯ ತಪ್ಪಿಸಬೇಕಾಗಿದೆ.

ಟಾಪ್ ನ್ಯೂಸ್

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.