9ರಂದೇ ಜಾತ್ರೆ ನಡೆಸುವುದು ಸೂಕ್ತ: ಪ್ರಮೋದಾದೇವಿ


Team Udayavani, Feb 4, 2020, 3:00 AM IST

9randu-jatre

ಮೈಸೂರು: ಸರ್ಕಾರಿ ಉತ್ತನಹಳ್ಳಿಯ ಜ್ವಾಲಾಮುಖೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವದ ದಿನಾಂಕವು ದಿನದರ್ಶಿಕೆಯಲ್ಲಿ ತಪ್ಪಾಗಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಗೊಂದಲ ನಿವಾರಿಸಲು ಮುಂದಾಗಿರುವ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌, ಅರಮನೆಯ ಪಂಚಾಂಗದಂತೆ ಫೆ. 9ರಂದೇ ಜಾತ್ರೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ತನಹಳ್ಳಿ ಗ್ರಾಮಸ್ಥರ ನಿಯೋಗವು ಸೋಮವಾರ ಪ್ರಮೋದಾದೇವಿ ಒಡೆಯರ್‌ ಅವರನ್ನು ಭೇಟಿ ಮಾಡಿತ್ತು. ಇದಕ್ಕೂ ಮುನ್ನ ಚಾಮುಂಡಿಬೆಟ್ಟದ ಅರ್ಚಕರು ಮತ್ತು ಅರಮನೆ ಅರ್ಚಕರ ಸಭೆ ನಡೆಸಿದ್ದ ಪ್ರಮೋದಾದೇವಿಯವರು ಯಾವ ದಿನ ಸೂಕ್ತವೆಂಬ ಮಾಹಿತಿ ಪಡೆದುಕೊಂಡಿದ್ದರು. ಮಾಘ ಮಾಸದ ಮೂರನೇ ಭಾನುವಾರವೇ ಜ್ವಾಲಾಮುಖೀ ತ್ರಿಪುರ ಸುಂದರಿ ವರ್ಧಂತಿ ನಡೆಸಬೇಕು. ಈ ಲೆಕ್ಕಾಚಾರದ ಪ್ರಕಾರ ಫೆ. 9ರಂದು ನಡೆಸುವುದು ಸೂಕ್ತ’ ಎಂಬ ಅಭಿಪ್ರಾಯವನ್ನು ಅರಮನೆ ಪಂಚಾಂಗ ತಜ್ಞರು ತಿಳಿಸಿದ್ದಾರೆ.

ಈ ವಿಚಾರವನ್ನು ಗ್ರಾಮಸ್ಥರಿಗೆ ತಿಳಿಸಿದ ಪ್ರಮೋದಾದೇವಿ ಒಡೆಯರ್‌, 1868ರಿಂದಲೂ ಅರಮನೆ ಪಂಚಾಂಗ ಪ್ರಕಾರವೇ ಉತ್ತನಹಳ್ಳಿ ಜಾತ್ರೆ ನಡೆಸಿಕೊಂಡು ಬರಲಾಗಿದೆ. ಈವರೆಗೂ ಯಾವುದೇ ಬದಲಾವಣೆಯಾಗಿಲ್ಲ. ಈ ಸಲ ದಿನಾಂಕ ಏಕೆ ತಪ್ಪಾಗಿ ಪ್ರಕಟವಾಗಿದೆ ಎಂಬುದು ನನಗೆ ಗೊತ್ತಿಲ್ಲ. ಪ್ರತಿ ವರ್ಷ ಉತ್ತನಹಳ್ಳಿ ಜಾತ್ರೆಯ ದಿನದಂದು ಅರಮನೆಯಲ್ಲಿಯೂ ಮಾರಿಸಾರು ಸಾರಿಕೆ ಮಾಡಿಸಲಾಗುತ್ತದೆ.

ಹೀಗಾಗಿ ಗ್ರಾಮಸ್ಥರು ಒಮ್ಮತದಿಂದ ಫೆ. 9ರಂದು ಆಚರಿಸುವುದು ಸೂಕ್ತ. ಆದರೆ ಯಾವುದೇ ಪೂರ್ವ ತಯಾರಿ ಮಾಡಿಕೊಂಡಿಲ್ಲ ಎನ್ನುವುದಾದರೆ ಫೆ.16 ರಂದು ಜಾತ್ರೆ ನಡೆಸಲು ನಮ್ಮ ಅಡ್ಡಿಯಿಲ್ಲ. ಒಟ್ಟಿನಲ್ಲಿ ಯಾವುದಾದರೂ ನಿರ್ಧಾರ ತೆಗೆದುಕೊಳ್ಳಲು ಗ್ರಾಮಸ್ಥರು ಸ್ವತಂತ್ರರು, ನನ್ನ ಅಭಿಪ್ರಾಯವನ್ನಷ್ಟೇ ಹೇಳುತ್ತಿದ್ದೇನೆ ಎಂದು ಗ್ರಾಮಸ್ಥರಿಗೆ ಸ್ಪಷ್ಟಪಡಿಸಿದರು ಎನ್ನಲಾಗಿದೆ.

ಈ ಸಂಬಂಧ ಗ್ರಾಮದಲ್ಲಿಯೇ ಎಲ್ಲಾ ಕೋಮಿನವರ ಸಭೆ ನಡೆಸಿ ಫೆ.9 ಅಥವಾ 16ರಲ್ಲಿ ಯಾವ ದಿನ ಜಾತ್ರೆ ನಡೆಸಬೇಕೆಂಬ ನಿರ್ಧಾರವನ್ನು ಗ್ರಾಮಸ್ಥರೆ ಕೈಗೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಜಾತ್ರೆ ಆಚರಣೆ ವಿಚಾರವಾಗಿ ತಮ್ಮ ಹೆಸರನ್ನು ಮಧ್ಯ ತರದಂತೆಯೂ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಫೆ.11ರಂದು ತಾಂಡವಪುರ ಜಾತ್ರೆ: ಉತ್ತನಹಳ್ಳಿ ಜಾತ್ರೆ ನಡೆಯುವ ಮೊದಲು ತಾಂಡವಪುರ ಜಾತ್ರೆ ನಡೆಯುವುದು ವಾಡಿಕೆ. ಅದರಂತೆ ಫೆ. 16ರ ದಿನಾಂಕವನ್ನೇ ಆಧರಿಸಿ ತಾಂಡವಪುರ ಮಾರಿ ಜಾತ್ರೆ ಫೆ. 11 ರಂದು ನಡೆಯಲಿದೆ. ಉತ್ತನಹಳ್ಳಿ ಜಾತ್ರೆಯ ದಿನಾಂಕ ಗೊಂದಲವು ತಾಂಡವಪುರ ಜಾತ್ರೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುದು ತಾಂಡವುಪರ ಗ್ರಾಮಸ್ಥರ ಅನಿಸಿಕೆಯಾಗಿದೆ.

ಜಿಲ್ಲಾಧಿಕಾರಿ ನಿರ್ಧಾರ ಕೈಗೊಳ್ಳುವರೆ?: ಉತ್ತನಹಳ್ಳಿ ಜ್ವಾಲಾಮುಖೀ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನವು ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವುದರಿಂದ ಶಿಷ್ಟಾಚಾರದಂತೆ ಎಲ್ಲಾ ರೀತಿಯ ಕ್ರಮ ವಹಿಸುವುದು ಜಿಲ್ಲಾಧಿಕಾರಿಗಳ ಸುಪರ್ದಿಗೆ ಬರುತ್ತದೆ. ಈಗ ಉದ್ಭವಿಸಿರುವ ಗೊಂದಲವನ್ನು ನಿವಾರಿಸಲು ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.