ತಂತ್ರಾಂಶ ಲೋಪ; ರಾಗಿ ಮಾರಾಟ ಕಗ್ಗಂಟು


Team Udayavani, Feb 4, 2020, 3:00 AM IST

tantranmsha

ತುರುವೇಕೆರೆ: ತಾಲೂಕಿನಾದ್ಯಂತ ಕಳೆದ ಸಾಲಿನಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಇಲಾಖೆ ಅಂದಾಜಿನ ಪ್ರಕಾರ 3.45 ಸಾವಿರ ಟನ್‌ ರಾಗಿ ಉತ್ಪಾದನೆಯಾಗಲಿದ್ದು, ಆದರೆ ಖರೀದಿ ಕೇಂದ್ರದಲ್ಲಿ ತಾಂತ್ರಿಕ ಕಾರಣದಿಂದ ರೈತರು ಪರದಾಡುವಂತಾಗಿದೆ.

ಪಟ್ಟಣದ ಕೃಷಿ ಮಾರುಕಟ್ಟೆ ಆವರಣದಲ್ಲಿ ಜ.13ರಂದು ನಾಫೆಡ್‌ ಖರೀದಿ ಕೇಂದ್ರ ತೆರದಿದ್ದು, 3,150 ರೂ. ದರದಲ್ಲಿ ಕ್ವಿಂಟಲ್‌ ರಾಗಿ ಖರೀದಿಸುವುದಾಗಿ ಘೋಷಿಸಿದೆ. ಪ್ರಸ್ತುತ ಉತ್ಪದನಾ ವೆಚ್ಚಕ್ಕೆ ಹೋಲಿಸಿದರೆ ಈ ಬೆಲೆ ಕಡಿಮೆಯಾದರೂ ಮಾರುಕಟ್ಟೆ ಬೆಲೆಗಿಂತ ಉತ್ತಮ ಬೆಲೆಯಾಗಿದೆ. ಜ.13ರಿಂದ 27ವರೆಗೆ ಕೇವಲ 537 ರೈತರಷ್ಟೇ ಹೆಸರು ನೋಂದಾಯಿಸಿಕೊಂಡು ಟೋಕನ್‌ ಪಡೆದಿದ್ದಾರೆ. ಆದರೆ ಕೇಂದ್ರಕ್ಕೆ ಆಗಮಿಸಿದರೆ ತಾಂತ್ರಿಕ ಅಡಚಣೆ, ನಿಯಮ, ಮಾನದಂಡದ ಕಾರಣದಿಂದ ವಾಪಸ್‌ ಹೋಗಿದ್ದಾರೆ.

ತಾಂತ್ರಿಕ ತೊಂದರೆ: ರಾಗಿ ಮಾರಾಟ ಮಾಡಲು ಕೃಷಿ ಇಲಾಖೆಯ ಬೆಳೆ ತಂತ್ರಾಂಶದಲ್ಲಿ ರೈತರು ನೋಂದಾಯಿಸಿಕೊಳ್ಳುವುದು ಕಡ್ಡಾಯ. ಕಂದಾಯ ಇಲಾಖೆ ನೀಡುವ ಪಹಣಿಯಲ್ಲಿ ರಾಗಿ ನಮೂದಾಗಿದ್ದರೂ, ಕೃಷಿ ಇಲಾಖೆ ಕೈಗೊಂಡಿರುವ ಬೆಳೆ ಸಮೀಕ್ಷೆಯಲ್ಲಿ ತೋಟಗಾರಿಕೆ ಬೆಳೆ ಎಂದು ನಮೂದಾಗಿದೆ. ರಾಗಿ ಬೆಳೆ ಬದಲು ತೋಟಗಾರಿಕೆ ಬೆಳೆ ನಮೂದಾಗಿರುವುದರಿಂದ ಖರೀದಿ ಕೇಂದ್ರದವರು ಬೆಳೆ ತಂತ್ರಾಂಶ ಸಂಖ್ಯೆ ತರಬೇಕೆಂದು ಸೂಚಿಸುತ್ತಾರೆ.

ಆದರೆ ಸಂಖ್ಯೆ ಇದ್ದವರಿಗೆ ಆಧಾರ್‌, ಖಾತೆ ಸಂಖ್ಯೆ ಹೊಂದಾಣಿಕೆ ಆಗುತ್ತಿಲ್ಲ. ತಾಲೂಕಿನಲ್ಲಿ ಶೇ.50ಕ್ಕೂ ಹೆಚ್ಚು ರೈತ ಕುಟುಂಬಗಳು ಹಲವು ಬೆಳೆಗಳೊಂದಿಗೆ ಮಿಶ್ರ ಬೆಳೆಯಾಗಿ ರಾಗಿ ಬೆಳೆಯುತಿದ್ದು, ಏಪ್ರಿಲ್‌ವರೆಗೆ ಖರೀದಿ ದಿನಾಂಕ ವಿಸ್ತರಿಸಿದರೆ ತಾಲೂಕಿನ ಕೃಷಿಕರು ರಾಗಿ ಕೇಂದ್ರಕ್ಕೆ ಮಾರಲು ಸಾಧ್ಯ ಎಂಬುದು ರೈತರ ಒಕ್ಕೂರಲ ಅಭಿಮತ.

ಕೃಷಿ ಇಲಾಖೆ ಅಂಕಿ ಅಂಶದ ಅನ್ವಯ 17.265 ಹೆಕ್ಟೇರ್‌ ರಾಗಿ ಬಿತ್ತನೆ ಕೈಗೊಂಡಿದ್ದು, ಅಂದಾಜಿನ ಪ್ರಕಾರ 3.45 ಸಾವಿರ ಟನ್‌ ರಾಗಿ ಇಳುವರಿ ಸಾಧ್ಯತೆ ಇದೆ. ಕುಟುಂಬ ನಿರ್ವಹಣೆಗೆ ಸ್ವಲ್ಪ ರಾಗಿ ದಾಸ್ತಾನು ಇರಿಸಿಕೊಂಡರೂ ಸುಮಾರು 3 ಸಾವಿರ ಟನ್‌ ರಾಗಿ ನಫೆಡ್‌ ಕೇಂದ್ರ ಖರೀದಿಸಬೇಕಾಗುತ್ತದೆ.

ಆನ್‌ಲೈನ್‌ ಸಮಸ್ಯೆಯಿಂದ ರೈತರು ಪರದಾಡುವಂತಾಗಿದೆ. ಶೇ. 60 ರೈತರು ತೆಂಗಿನೊಂದಿಗೆ ಮಿಶ್ರ ಬೆಳೆಯಾಗಿ ರಾಗಿ ಬೆಳೆಯುತ್ತಿದ್ದು, ಆನ್‌ಲೈನ್‌ನಲ್ಲಿ ತೆಂಗು ನಮೂದಾಗಿದೆ. ಹೀಗಾಗಿ ರಾಗಿ ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲು ಆಗುತ್ತಿಲ್ಲ. ತಾಂತ್ರಿಕ ತೊಂದರೆ ಇಲಾಖೆ ಸರಿಪಡಿಸದಿದ್ದಲ್ಲಿ ಕೃಷಿ ಇಲಾಖೆ ಎದುರು ಪ್ರತಿಭಟಿಸಬೇಕಾಗುತ್ತದೆ.
-ಬಿ.ಎಸ್‌. ರವೀಂದ್ರ ಕುಮಾರ್‌, ಕೃಷಿಕ ಬಿಗನೇಹಳ್ಳಿ

ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆಗಳ ಸಿಬ್ಬಂದಿ ಬೆಳೆ ಪ್ರದೇಶಗಳಿಗೆ ತೆರಳಿ ಬೆಳೆ ಬಗ್ಗೆ ಸಮೀಕ್ಷೆ ಕೈಗೊಂಡಿದ್ದಾರೆ. ಅದನ್ನೇ ಬೆಳೆ ಕಾಲಂನಲ್ಲಿ ನಮೂದಿಸಿ ಆಧಾರ್‌ ಜೋಡಣೆಯೊಂದಿಗೆ ತಂತ್ರಾಂಶದಲ್ಲಿ ಅಳವಡಿಸಿರುತ್ತಾರೆ. ಸಣ್ಣ ಹಿಡುವಳಿ ರೈತರ ಬೆಳೆ ತಂತ್ರಾಂಶದ ಸಂಖ್ಯೆ ಆನ್‌ಲೈನ್‌ನಲ್ಲಿ ತೆರೆದಾಗ ಪಹಣಿ ಒಟ್ಟು ಹಿಡುವಳಿ ಕೃಷಿ ಜಮೀನು ಹಾಗೂ ಯಾವ ಬೆಳೆ ಕೈಗೊಂಡಿದ್ದಾರೆ ಎಂಬುದರ ಪೂರ್ಣ ವಿವರ ಲಭ್ಯವಾಗುತ್ತದೆ. ಆ ಮಾನದಂಡದ ಆಧಾರದ ಮೇಲೆ ರಾಗಿ ಖರೀದಿಸಬೇಕಾಗಿದೆ.
-ನಾರಾಯಣ್‌, ರಾಗಿ ಖರೀದಿ ಕೇಂದ್ರದ ಅಧಿಕಾರಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.