ನೀರಿನ ಸಮಸ್ಯೆಗೆ ಅಂತರ್ಜಲ ಮರುಪೂರಣ ಪರಿಹಾರ


Team Udayavani, Feb 4, 2020, 3:00 AM IST

neerina

ಚಾಮರಾಜನಗರ: ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ನಿರೀನ ಸಮಸ್ಯೆ ತಪ್ಪಿಸಲು ಅಂತರ್ಜಲ ಮರುಪೂರಣ ಕಾರ್ಯ ಅತ್ಯವಶ್ಯಕ ಎಂದು ಜಿಯೊ ರೈನ್‌ ವಾಟರ್‌ ಬೋರ್ಡ್‌ನ ಭೂವಿಜ್ಞಾನಿ ಎನ್‌.ಜೆ.ದೇವರಾಜ್‌ ರೆಡ್ಡಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಸಹಯೋಗದಲ್ಲಿ ನಡೆದ ಜಲಮೂಲಗಳ ಪುನಶ್ಚೇತನ ಹಾಗೂ ವೈಜ್ಞಾನಿಕ ನಿರ್ಮಾಣ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಹೆಚ್ಚುತ್ತಿರುವ ನೀರಿನ ಅಭಾವ: ಭಾರತ ದೇಶ ಪ್ರಪಂಚದಲ್ಲೇ ಎರಡನೇ ಅತೀ ದೊಡ್ಡ ಜಲ ಸಂಪತ್ತನ್ನು ಹೊಂದಿದೆ. ಹೀಗಿದ್ದೂ ಸಹ ದಿನ ಕಳೆದಂತೆ ನೀರಿನ ಅಭಾವ ಹೆಚ್ಚುತ್ತಲಿದೆ. ಸಾವಿರಾರು ಕೆರೆಗಳಿದ್ದರೂ, ವರ್ಷ ಪೂರ್ತಿ ನೀರು ಹೊಂದಿರದ ಕಾರಣ ಹಾಗೂ ಮಾಲಿನ್ಯದಿಂದಾಗಿ ಬಳಕೆಗೆ ಅಲಭ್ಯವಾಗಿದೆ. ಈ ಎಲ್ಲಾ ಸಮಸ್ಯೆಗಳಿಂದ ಹೊರ ಬರಲು ವೈಜ್ಞಾನಿಕ ರೀತಿಯಲ್ಲಿ ಅಂತರ್ಜಲ ಮರುಪೂರಣ ಕಾರ್ಯ ಅಗತ್ಯವಾಗಿ ಆಗಬೇಕಿದೆ ಎಂದರು.

ಮಳೆ ಕೊರತೆಯಿಂದ ಅಂತರ್ಜಲ ಕಡಿಮೆ: ಮಳೆ ಕೊರತೆಯಿಂದಾಗಿ ಅಂತರ್ಜಲ ಪ್ರಮಾಣ ಕಡಿಮೆಯಾಗಿದೆ. ಸಮುದ್ರ ತೀರ ಅಥವಾ ನೀರು ಹರಿವಿನ ಹತ್ತಿರ ಕೊಳವೆ ಬಾವಿ ಕೊರೆದರೆ ನೀರು ಬರುತ್ತದೆ ಎಂಬ ಮನಸ್ಥಿತಿ ಇದೆ. ಆದರೆ ಅಂತರ್ಜಲದ ಬಗೆಗೆ ಇದ್ಯಾವುದು ಪೂರ್ಣ ಸತ್ಯವಲ್ಲ. ಮಳೆ ಪ್ರಮಾಣ ಹೆಚ್ಚಿರುವ ಜಾಗದಲ್ಲೂ ಅಂತರ್ಜಲ ಮಟ್ಟ ಕಡಿಮೆ ಇರುವ ಎಷ್ಟೋ ಉದಾಹರಣೆಗಳಿವೆ. ನೀರು ಹತ್ತಿರವಿರುವೆಡೆ ತೆರೆದ ಕೊಳವೆ ಬಾವಿಗಳು ವಿಫ‌ಲವಾದ ನಿದರ್ಶನಗಳಿವೆ. ನೈಜವಾಗಿ ಮಾನವ ಅನುಸರಿಸುವ ಅವೈಜ್ಞಾನಿಕ ಪದ್ಧತಿಗಳು ಅಂತರ್ಜಲ ಕುಸಿತಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಅಂತರ್ಜಲ ಮರುಪೂರಣದಿಂದ ಜಲ ಪ್ರಮಾಣ ಹೆಚ್ಚಳ: ನೀರಿನ ಸಮಸ್ಯೆಗಳನ್ನು ದೀರ್ಘ‌ಕಾಲಿಕವಾಗಿ ನಿವಾರಿಸುವ ನಿಟ್ಟಿನಲ್ಲಿ ಅಂತರ್ಜಲ ಮರುಪೂರಣ ಕಾರ್ಯವನ್ನು ಮಾಡಲಾಗುತ್ತದೆ. ನೀರು ಬತ್ತಿ ಹೋದ ಅಥವಾ ಬಾರದೇ ಇರುವ ಕೊಳವೆ ಬಾವಿಗಳನ್ನು ಪರೀಕ್ಷಿಸಿ, ಅಲ್ಲಿ ನೀರಿನ ಪೊರೆಗಳ ಇರುವಿಕೆ ಕಂಡುಬಂದಲ್ಲಿ ಮರುಪೂರಣ ಪದ್ಧತಿಯನ್ನು ಅನುಷ್ಠಾಗೊಳಿಸಲಾಗುತ್ತದೆ. ಇದರಿಂದ ಜಲ ಪ್ರಮಾಣ ಹೆಚ್ಚುವು ದಲ್ಲದೇ ನೀರು ಸದಾ ಕಾಲ ಇರುವಂತೆ ಮಾಡುತ್ತದೆ ಎಂದು ಮಾಹಿತಿ ನೀಡಿದರು.

ನೀರನ್ನು ಪೋಲು ಮಾಡದಿರಿ: ನೀರಿನ ಸಮಸ್ಯೆಯನ್ನು ಮೂಲದಿಂದ ಸರಿಪಡಿಸಿಕೊಳ್ಳಲು ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ ಅಗತ್ಯ. ನೀರನ್ನು ಅನವಶ್ಯಕವಾಗಿ ಪೋಲು ಮಾಡದಂತೆ ಎಚ್ಚರ ವಹಿಸುವುದು, ಮಳೆ ನೀರು ಕೋಯ್ಲು ಮೂಲಕ ಮಳೆ ನೀರಿನ ಶೇಖರಣೆ ಮತ್ತು ಬಳಕೆಯಂಥಹ ಕೆಲವು ಉಪಕ್ರಮಗಳು ಎಲ್ಲರಿಂದ ಆಗಬೇಕು. ಕೊಳವೆ ಬಾವಿಗಳ ಬದಲಾಗಿ ತೆರೆದ ಬಾವಿಗಳಿಗೆ ಆದ್ಯತೆ ನೀಡಬೇಕು. ಇದು ಅಂತರ್ಜಲ ಮಟ್ಟವನ್ನು ಕಾಪಾಡಲು ಸಹಾಯಕಯವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಉಪ ಕಾರ್ಯದರ್ಶಿ ಧರಣೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.