ದಾಸೋಹಕ್ಕೆ ಅನುದಾನ: 18 ಕೋ.ರೂ. ಬಿಡುಗಡೆಗೆ ಒಪ್ಪಿಗೆ


Team Udayavani, Feb 5, 2020, 6:30 AM IST

bsy

ಬೆಂಗಳೂರು: ಮೂರು ತಿಂಗಳುಗಳಿಂದ ಸ್ಥಗಿತವಾಗಿದ್ದ ಅನ್ನದಾಸೋಹ ಯೋಜನೆಗೆ ರಾಜ್ಯ ಸರಕಾರ 18 ಕೋ.ರೂ. ಅನುದಾನ ಬಿಡುಗಡೆ ಮಾಡಿದೆ.
ಮಠಗಳು, ಇತರ ಧಾರ್ಮಿಕ ಕೇಂದ್ರಗಳ ಸಹಿತ ಖಾಸಗಿ ಸಂಘ- ಸಂಸ್ಥೆಗಳು ನಡೆಸುತ್ತಿದ್ದ ವೃದ್ಧಾಶ್ರಮ, ಅನಾಥಾ ಶ್ರಮ, ನಾರಿನಿಕೇತನ, ಹಾಸ್ಟೆಲ್‌ಗ‌ಳು, ನಿರಾಶ್ರಿತರು, ಭಿಕ್ಷುಕರ ಕೇಂದ್ರಗಳಲ್ಲಿ ಇರುವವರಿಗಾಗಿ ಉಚಿತ ಅಕ್ಕಿ ಮತ್ತು ಗೋಧಿ ನೀಡುವ ಅನ್ನದಾಸೋಹ ಯೋಜನೆಗೆ 3 ತಿಂಗಳುಗಳಿಂದ ಅನುದಾನ ಬಿಡುಗಡೆಯಾಗಿರಲಿಲ್ಲ.

ಕಾಂಗ್ರೆಸ್‌ ಆಕ್ರೋಶ
ದಾಸೋಹ ಯೋಜನೆಯನ್ನು ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಮಂಗಳವಾರ ಯು.ಟಿ.ಖಾದರ್‌ ಪತ್ರಿಕಾಗೋಷ್ಠಿ ನಡೆಸಿ ಅನುದಾನ ಸ್ಥಗಿತ ವಿಚಾರ ಬಹಿರಂಗಗೊಳಿಸಿದ್ದರು. ಬಿಜೆಪಿ ಸರಕಾರಕ್ಕೆ ಬಡವರ ಬಗ್ಗೆ ಕರುಣೆ ಇಲ್ಲ ಎಂದಿದ್ದರು.

ಈ ವಿಚಾರ ಬೆಳಕಿಗೆ ಬರುತ್ತಲೇ ಎಚ್ಚೆತ್ತುಕೊಂಡ ಬಿಜೆಪಿ ಸರಕಾರ, ಯೋಜನೆಗೆ ತತ್‌ಕ್ಷಣ 18 ಕೋ.ರೂ. ಬಿಡುಗಡೆ ಮಾಡಲು ನಿರ್ಧರಿಸಿದೆ. ಅನ್ನದಾಸೋಹ ಯೋಜನೆಯಡಿ 32,700 ಮಕ್ಕಳಿಗೆ 351 ಕಲ್ಯಾಣ ಸಂಸ್ಥೆಗಳ ಮೂಲಕ ಉಚಿತ ಅಕ್ಕಿ, ಗೋಧಿಯನ್ನು ವರ್ಷದ ಅವಧಿಗೆ ವಿತರಿಸಲು ಮಂಗಳವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.

ಸಚಿವೆ ವಿರುದ್ಧ ಸಿಎಂ ಗರಂ?
ಈ ವಿಚಾರ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಅನುದಾನ ಸ್ಥಗಿತ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಆಹಾರ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಖಾದರ್‌ ಆರೋಪಕ್ಕೆ ಪತ್ರಕರ್ತರ ಬಳಿ ಪ್ರತಿಕ್ರಿಯಿಸಿದ್ದ ಜೊಲ್ಲೆ, ಆರೋಪವನ್ನು ನಿರಾಕರಿಸಿ ದ್ದರು. ಬಿಜೆಪಿ ಸರಕಾರ ಸಂಸ್ಥೆಗಳಿಗೆ ಅಕ್ಕಿ, ಗೋಧಿ ವಿತರಣೆಯನ್ನು ನಿಲ್ಲಿಸಿಲ್ಲ. ಹಿಂದಿನ ಸರಕಾರದ ಕಾಲದಲ್ಲೇ ಪೂರೈಕೆ ನಿಲ್ಲಿಸಲಾಗಿತ್ತು ಎಂದು ಖಾದರ್‌ಗೆ ತಿರುಗೇಟು ನೀಡಿದ್ದರು.

ಹೊಟ್ಟೆಗೆ ಬರೆ
ದಾಸೋಹದಡಿ ತುಮಕೂರಿನ ಸಿದ್ಧಗಂಗಾ ಮಠ, ಮೈಸೂರಿನ ಸುತ್ತೂರು ಮಠ ಮತ್ತು ಆದಿಚುಂಚನಗಿರಿ ಮಠದ ಸುಮಾರು 25 ಸಾವಿರಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ನೂರಾರು ಖಾಸಗಿ ಸಂಘಸಂಸ್ಥೆಗಳ ಸಾವಿರಾರು ಬಡ ಮಕ್ಕಳು, ಅನಾಥರು, ವಿಧವೆಯರು, ನಿರ್ಗತಿಕರು, ವೃದ್ಧರಿಗೆ ಅನ್ನದಾನ ನಡೆಯುತ್ತಿತ್ತು. ಮುಖ್ಯವಾಗಿ ಕಿದ್ವಾಯಿ ಕ್ಯಾನ್ಸರ್‌ ಸಂಸ್ಥೆಯಲ್ಲಿ ರೋಗಿಗಳು ಮತ್ತು ಅವರ ಆರೈಕೆಗೆ ಬಂದವರ ಸಹಿತ ಪ್ರತಿ ತಿಂಗಳು ಕನಿಷ್ಠ ಸಾವಿರ ಮಂದಿಗೆ ಈ ಯೋಜನೆಯಡಿ ಊಟದ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ಸಂಬಂಧ ಹೇಳಿಕೆ ನೀಡಿದ್ದ ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳು, ದಾಸೋಹ ಅಕ್ಕಿ ವಿತರಣೆ ಸ್ಥಗಿತವಾಗಿರುವುದು ಸತ್ಯ. ಪುನರಾರಂಭಿಸುವುದಕ್ಕೆ ಸರಕಾರಕ್ಕೆ ಪತ್ರ ಬರೆದಿದ್ದೇವೆ, ಕೇಂದ್ರಕ್ಕೂ ಮನವಿ ಮಾಡಿದ್ದೇವೆ ಎಂದಿದ್ದರು.

ಸ್ಥಗಿತ ಏಕೆ?
ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಗೋಲ್‌ಮಾಲ್‌ ನಡೆದದ್ದರಿಂದ ಖಾಸಗಿ ಕಲ್ಯಾಣ ಸಂಸ್ಥೆಗಳನ್ನು ಬಿಟ್ಟು ಕೇವಲ ಸರಕಾರಿ ಸ್ವಾಮ್ಯದ ಸಂಘ-ಸಂಸ್ಥೆಗಳಿಗೆ ಮಾತ್ರ ಆಹಾರಧಾನ್ಯ ಹಂಚಿಕೆ ಮಾಡಬೇಕು ಎಂದು ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಅದರಂತೆ ಕರ್ನಾಟಕದಲ್ಲಿ ಆಹಾರಧಾನ್ಯ ಹಂಚಿಕೆ ಸ್ಥಗಿತಗೊಳಿಸಲಾಗಿದೆ.

ಬಡವರು, ನಿರ್ಗತಿಕರ ಬಗ್ಗೆ ಕರುಣೆ-ಮಾನವೀಯತೆ ಇಲ್ಲದ ಬಿಜೆಪಿ ಸರ್ಕಾರ ದಾಸೋಹ ಯೋಜನೆ ಸ್ಥಗಿತಗೊಳಿಸಿದೆ. ಸಿದ್ದರಾಮಯ್ಯ ಕಾಲದ ಈ ಯೋಜನೆ ಸ್ಥಗಿತಗೊಳಿಸಿದರೆ ಸುಮ್ಮನಿರಲ್ಲ.
– ಯು.ಟಿ. ಖಾದರ್‌, ಮಾಜಿ ಸಚಿವ

ಮಠಮಾನ್ಯಗಳಿಗೆ ಅನ್ನಭಾಗ್ಯದ ಅಕ್ಕಿ, ಗೋಧಿಯನ್ನು ಬುಧವಾರದಿಂದಲೇ ಪೂರೈಸಲಿದ್ದೇವೆ. ಈ ಹಿಂದಿನ ಪ್ರಮಾಣದಲ್ಲಿಯೇ ಪೂರೈಕೆಯಾಗಲಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ.
– ಬಿ.ಎಸ್‌.ಯಡಿಯೂರಪ್ಪ , ಸಿಎಂ

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.