ಅಯೋಧ್ಯೆ ಟ್ರಸ್ಟ್‌ ಗೌರವ ಸಮಗ್ರ ಆಸ್ತಿಕ ಸಮಾಜಕ್ಕೆ ಅರ್ಪಣೆ

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು

Team Udayavani, Feb 7, 2020, 6:07 AM IST

sam-42

ಉಡುಪಿ: ಅಯೋಧ್ಯೆ ರಾಮಮಂದಿರ ಬಗ್ಗೆ 1980ರ ದಶಕದಿಂದ ನಿರಂತರವಾಗಿ ಹೋರಾಡಿದ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪ್ರತಿನಿಧಿಯಾಗಿ ಅವರ ಪಟ್ಟಶಿಷ್ಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಕೇಂದ್ರ ಸರಕಾರ ರಾಮಮಂದಿರ ನಿರ್ಮಾಣ ಜವಾಬ್ದಾರಿ ಹೊತ್ತ “ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಟ್ರಸ್ಟ್‌ನ ಟ್ರಸ್ಟಿಯಾಗಿ ನಿಯೋಜಿಸಿದೆ. ಇದು ಸಮಸ್ತ ಆಸ್ತಿಕ ವರ್ಗಕ್ಕೆ ವಿಶೇಷವಾಗಿ ದಕ್ಷಿಣ ಭಾರತದ ಸಾಧು ಸಂತರು, ಆಸ್ತಿಕ ವರ್ಗಕ್ಕೆ ಸಂದ ಗೌರವವಾಗಿದೆ ಮತ್ತು ಇದನ್ನು ಇದೇ ಅನುಸಂಧಾನದಲ್ಲಿ ಸಮರ್ಪಿಸುತ್ತಿದ್ದೇನೆ ಎಂದು ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಅವರೊಂದಿಗೆ “ಉದಯವಾಣಿ’ ನಡೆಸಿದ ಮಾತುಕತೆ ಸಾರಾಂಶ ಹೀಗಿದೆ:

 ದೇಶ ಮಟ್ಟದ ದೊಡ್ಡ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಇದೆ. ಇದನ್ನು ಯಾವ ರೀತಿಯಲ್ಲಿ ಸ್ವೀಕರಿಸುತ್ತೀರಿ?
ದಕ್ಷಿಣ ಭಾರತದಿಂದ ಬೇರಾರೂ ಟ್ರಸ್ಟಿಗಳಿಲ್ಲ. ಹೀಗಾಗಿ ಇದು ದಕ್ಷಿಣ ಭಾರತಕ್ಕೆ ಸಂದ ಗೌರವ. ಎಲ್ಲ ಸಾಧು ಸಂತರು, ಸಜ್ಜನ ವರ್ಗಕ್ಕೆ ಇದನ್ನು ಸಮರ್ಪಿಸುತ್ತೇವೆ. ಗುರುಗಳು ಮಾಡಿದ ಸೇವೆಗಾಗಿ ಈ ಗೌರವ ಬಂದಿದೆ. ರಾಮಮಂದಿರ ನಿರ್ಮಾಣದಲ್ಲಿ ಸೇವೆ ಸಲ್ಲಿಸುವ ಪ್ರಸಾದ ಎಂದು ಸಂತೋಷದಿಂದ ಸ್ವೀಕರಿಸುತ್ತೇವೆ.

 ಗುರುಗಳು ಹಲವು ದಶಕಗಳ ಕಾಲ ಎಡೆಬಿಡದೆ ಹೋರಾಟ ನಡೆಸಿದ್ದರು. ನೀವೂ ಅದೇ ವೇಗದಲ್ಲಿ ಹೋಗುವಿರಾ?
ಅಯೋಧ್ಯೆ ಹೋರಾಟ ಶತಶತ ಮಾನಗಳ ಕಾಲದಿಂದ ನಡೆದು ಬಂದಿದೆ. ಇನ್ನೂ ಇದು ಬಳಲಬಾರದು. ನಮ್ಮ ವೇಗಕ್ಕಿಂತ ಅಲ್ಲೇನು ಅಗತ್ಯವಿದೆ ಎಂಬುದನ್ನು ತಿಳಿದು ಅದಕ್ಕೆ ತಕ್ಕಂತೆ ನಾವು ಹೋಗಬೇಕಾಗಿದೆ.

 ಟ್ರಸ್ಟ್‌ ರಚನೆಗೂ ಮುನ್ನ ಯಾರದ್ದಾದರೂ ಸೂಚನೆ ಬಂದಿತ್ತೆ?
ವಿಶ್ವ ಹಿಂದೂ ಪರಿಷತ್‌ನ ಚಂಪತ್‌ ರಾಯ್‌ ಕರೆ ಮಾಡಿ, ಇದನ್ನು ಒಪ್ಪಿಕೊಳ್ಳಬೇಕು ಎಂದಿದ್ದರು. ಅನಂತರ ಇಂದು ಕರೆ ಮಾಡಿ ಟ್ರಸ್ಟಿಯಾಗಲು ಒಪ್ಪಿಗೆ ಪತ್ರವನ್ನು ಕಳುಹಿಸಿಕೊಡಬೇಕೆಂದು ತಿಳಿಸಿದರು.

ಅಯೋಧ್ಯಾ ಚಳವಳಿಯಲ್ಲಿ ತಾವು ಪಾಲ್ಗೊಂಡಿದ್ದೀರಾ?
1992ರ ಡಿ. 6ರಂದು ಉಡುಪಿಯಿಂದ ಎಲ್ಲ ಸ್ವಾಮೀಜಿಯವರು ಅಯೋಧ್ಯೆ ಕರಸೇವೆಗೆ ಹೋಗಿದ್ದರು. ಪೂಜೆಗಾಗಿ ಒಬ್ಬರು ನಿಲ್ಲಬೇಕಾಯಿತು. ಆದ್ದರಿಂದ ಉಳಿದವರೆಲ್ಲ ಹೋಗಿ ನಾವು ಮಾತ್ರ ಉಳಿದೆವು ಅದಕ್ಕೂ ಮುನ್ನ ಮುಲಾಯಂ ಸಿಂಗ್‌ ಸರಕಾರ ವಿರುವಾಗ ಒಮ್ಮೆ ಗೋಲಿಬಾರ್‌ ಆಗಿತ್ತು. ಆಗ ನಡೆದ ಚಳವಳಿಯಲ್ಲಿ ಪಾಲ್ಗೊಂಡಿದ್ದೆ. ಅನಂತರ ಗುರುಗಳ ಜತೆ ವಿವಿಧ ಸಭೆಗಳಲ್ಲಿ ಪಾಲ್ಗೊಂಡಿದ್ದೆ. ಇತ್ತೀಚೆಗೆ ಪ್ರಯಾಗದಲ್ಲಿ ನಡೆದ ಮಾಘ ಮೇಳದಲ್ಲಿ ಭಾಗವಹಿಸಿದ್ದೆ.

 ಮಂದಿರ ನಿರ್ಮಾಣ ಕುರಿತು ಏನೇನು ಸಿದ್ಧತೆ ನಡೆದಿದೆ?
ನಾವು ಕೇಳಿದ, ನೋಡಿದ ಪ್ರಕಾರ ಮಂದಿರ ನಿರ್ಮಾಣಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳೂ ನಡೆದಿವೆ. ಆ ಸ್ಥಳದಲ್ಲಿ ಅವುಗಳನ್ನು ಜೋಡಿಸಿದರೆ ಸಾಕು. ಆದರೆ ಇದಾವುದೂ ನಮ್ಮ ನಿಖರ ಮಾಹಿತಿಯಲ್ಲ. ಏಕೆಂದರೆ ಸ್ಪಷ್ಟವಾಗಿ ನಾವು ಇದಾವುದನ್ನೂ ನೋಡಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಟ್ರಸ್ಟ್‌ನ ಸಭೆ ನಡೆಯಬಹುದು. ಅಲ್ಲಿ ಒಂದು ನಿಖರವಾದ ರೂಪರೇಖೆ ನಿರ್ಧಾರವಾಗಬಹುದು.

ಗುರುಗಳು ಹರಿಪಾದ ಸೇರುವ ಸುಮಾರು ಒಂದು ತಿಂಗಳ ಹಿಂದೆ ಈ ಕುರಿತು ತಿಳಿಸಿದ್ದರು. ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ ರಚನೆಯಾಗುತ್ತದೆ ಎಂಬ ಮಾತುಗಳು ಕೇಳಿಬರುವಾಗ ವಿಹಿಂಪ ಪದಾಧಿಕಾರಿಗಳು ಗುರುಗಳಲ್ಲಿ ನಿಮ್ಮ ಮಠದಿಂದ ಪ್ರತಿನಿಧಿಯಾಗಬೇಕು ಎಂದು ತಿಳಿಸಿದ್ದರು. ಆಗ ಗುರುಗಳು “ನಮಗೆ ವಯಸ್ಸಾ ಯಿತು. ನಮ್ಮ ಶಿಷ್ಯರನ್ನು ನೇಮಿಸಿಕೊಳ್ಳಿ’ ಎಂದು ಹೇಳಿದರು. ಅನಂತರ ನಮಗೂ, “ಟ್ರಸ್ಟ್‌ ಪ್ರಸ್ತಾವ ಬಂದರೆ ಒಪ್ಪಿಕೊಳ್ಳಿ’ ಎಂದು ಹೇಳಿದ್ದರು.
– ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು

– ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.