ಭಜನೆಯಿಂದ ಸಾಮಾಜಿಕ ಪ್ರಜ್ಞೆಯ ಜಾಗೃತಿ: ಹೇಮಾವತಿ ಹೆಗ್ಗಡೆ
ಪುತ್ತೂರಿನಲ್ಲಿ ಭಜನ ಸತ್ಸಂಗ ಸಮಾವೇಶ
Team Udayavani, Feb 9, 2020, 5:52 AM IST
ಪುತ್ತೂರು: ಭಜನೆಯು ವೈಯಕ್ತಿಕ ಮತ್ತು ಸಾಮಾಜಿಕ ಪ್ರಜ್ಞೆಯ ಜಾಗೃತಿಗೆ ಅಗತ್ಯ ಮಾಧ್ಯಮ. ಭಕ್ತಿ, ಭಾವದೊಂದಿಗಿನ ಶ್ರದ್ಧೆಯ ಸ್ತುತಿಗೆ ಭಗವಂತನ ಅನುಗ್ರಹ ಸಿಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಹೇಳಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್, ಭಜನ ಸತ್ಸಂಗ ಸಮಾವೇಶ ಸಮಿತಿ ಪುತ್ತೂರು, ಶ್ರೀ ಕ್ಷೇ. ಧ. ಗ್ರಾ. ಯೋಜನೆ ಪುತ್ತೂರು ಸಹಯೋಗದಲ್ಲಿ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ರವಿವಾರ ನಡೆದ ಬೃಹತ್ ಭಜನ ಸತ್ಸಂಗ ಸಮಾವೇಶದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
ದೊಡ್ಡ ಪರಿಣಾಮದ ಕಾರ್ಯಕ್ರಮ
ಅಧ್ಯಕ್ಷತೆ ವಹಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಪುತ್ತೂರಿನಲ್ಲಿ ನಿರೀಕ್ಷೆಗೂ ಮೀರಿ ದೊಡ್ಡ ಮಟ್ಟದಲ್ಲಿ ಭಜನ ಸತ್ಸಂಗ ನಡೆದಿರುವುದು ಖುಷಿ ನೀಡಿದೆ ಎಂದರು.
ಅಭೂತಪೂರ್ವ: ಸುಬ್ರಹ್ಮಣ್ಯ ಶ್ರೀ
ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಭಜನ ಸತ್ಸಂಗ ಸಮಾವೇಶದಲ್ಲಿ ಅಭೂತಪೂರ್ವ ಸಂಖ್ಯೆಯ ಜನರು ಪಾಲ್ಗೊಳ್ಳುವ ಮೂಲಕ ಜಾಗೃತಿ ಸಾಬೀತುಪಡಿಸಿದ್ದಾರೆ. ರಾಮಮಂದಿರದ ವಿಚಾರದಲ್ಲೂ ಇಂತಹ ಜಾಗೃತಿ ಕೆಲಸ ಮಾಡಬೇಕಾ ಗಿದೆ ಎಂದರು.
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಗ್ರಾಮಾಭಿ ವೃದ್ಧಿ ಯೋಜನೆಯ ಸಿಇಒ ಡಾ| ಎಲ್.ಎಚ್. ಮಂಜುನಾಥ್, ತಾ.ಪಂ. ಇಒ ನವೀನ್ ಭಂಡಾರಿ, ಸಮಿತಿ ಗೌರವ ಸಲಹೆಗಾರರಾದ ಮಲ್ಲಿಕಾ ಪ್ರಸಾದ್, ಶಕುಂತಳಾ ಟಿ. ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸಮಿತಿಯ ಪ್ರಮುಖರಾದ ರಾಮಣ್ಣ ಗೌಡ ಗುಂಡೋಳೆ, ಸಾಜ ರಾಧಾಕೃಷ್ಣ ಆಳ್ವ, ಪದ್ಮಾನಾಭ ಶೆಟ್ಟಿ, ಮಹಾಬಲ ರೈ ಒಳತ್ತಡ್ಕ, ಚಂದ್ರನ್ ತಲಪಾಡಿ, ಕೋಲ್ಪೆಗುತ್ತು ರಾಜಾರಾಮ ಶೆಟ್ಟಿ, ಜಯರಾಮ ನೆಲ್ಲಿತ್ತಾಯ ಉಪಸ್ಥಿತರಿದ್ದರು.
ಸತ್ಸಂಗ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಪ್ರಸ್ತಾ ವನೆಗೈದರು. ಅಧ್ಯಕ್ಷ ಧನ್ಯಕುಮಾರ್ ಬೆಳಿಯೂರುಗುತ್ತು ಸ್ವಾಗತಿಸಿ, ಸಂಚಾಲಕ ಶಶಿಕುಮಾರ್ ಬಾಲೊÂಟ್ಟು ವಂದಿಸಿದರು. ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರ್ವಹಿಸಿದರು.
ಸರಕಾರಕ್ಕೆ ಬೇಡಿಕೆ
ಭಜನ ಮಂದಿರಗಳು ಇರುವ ಸ್ಥಳವನ್ನು ಸಕ್ರಮಗೊಳಿಸಿ ಮಂದಿರಗಳ ಹೆಸರಿಗೆ ನೀಡಬೇಕು, ಭಜನ ಪರಿಷತ್ಗೆ ಭಜನ ಅಕಾಡೆಮಿ ಗೌರವ ನೀಡಬೇಕು, ಹನುಮ ಜಯಂತಿ ದಿನವನ್ನು ಭಜನ ದಿನವಾಗಿ ಆಚರಿಸಲು ಘೋಷಣೆ ಮಾಡಬೇಕು ಮೊದಲಾದ 10 ಬೇಡಿಕೆಗಳನ್ನು ಶಾಸಕ ಸಂಜೀವ ಮಠಂದೂರು ಅವರ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು.
ನಗರ ಸಂಕೀರ್ತನೆ
ಅಪರಾಹ್ನ ನಗರದ ಮುಖ್ಯ ರಸ್ತೆಯಲ್ಲಿ ಸುಮಾರು 25 ಸಾವಿರಕ್ಕೂ ಮಿಕ್ಕಿ ಭಜಕರು ದೇವರ ನಾಮ ಸಂಕೀರ್ತನೆ ಯಾತ್ರೆ ನಡೆಸಿದರು. ಕೋಟಿ ಶಿವ ಪಂಚಾಕ್ಷರಿ ಪಠಣ
ಸಂಜೆ ಪ್ರಧಾನ ವೇದಿಕೆಯಲ್ಲಿ ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಜಪಯಜ್ಞ ನಡೆಯಿತು. ರಾಮಕೃಷ್ಣ ಕಾಟುಕುಕ್ಕೆ ನೇತೃತ್ವದಲ್ಲಿ ಸಾವಿರಾರು ಭಜಕರು 108 ಶಿವ ಜಪ ಉಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.