ಅನ್ನದಾತರ ಒಪ್ಪಿಗೆ ಇಲ್ಲದೆ ಭೂಮಿ ಸ್ವಾಧೀನ ಸರಿಯಲ್ಲ


Team Udayavani, Feb 13, 2020, 3:00 AM IST

annadatara

ತುಮಕೂರು: ರೈತ ಆಧಾರಿತ ಕೃಷಿ ಉಳಿಸಲು ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಭಯ್ನಾರೆಡ್ಡಿ ತಿಳಿಸಿದರು.ನಗರದ ಕನ್ನಡ ಸಾಹಿತ್ಯ ಸುವರ್ಣ ಸಭಾಂಗಣದಲ್ಲಿ ಬುಧವಾರ ನಡೆದ ದುಂಡು ಮೇಜಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಭೆಗೆ ಸಚಿವರು, ಮಾಜಿ ಸಚಿವರು, ಶಾಸಕರು ಭಾಗವಹಿಸದೆ ರೈತರ ಕಡೆಗಣಿಸುವ ಪರಿಸ್ಥಿತಿ ಗಮನಿಸಿದರೆ ಅವರಿಗೆ ರೈತಪರ ಕಾಳಜಿ ಇಲ್ಲ ಎಂದು ಅರ್ಥವಾಗುತ್ತಿದೆ ಎಂದ‌ು ಬೇಸರಿಸಿದರು.

ಹಲವು ಹೋರಾಟಗಳ ಪ್ರತಿಫ‌ಲವಾಗಿ “ಉಳುವವನೇ ಭೂಮಿಯ ಒಡೆಯ’ ಘೋಷಣೆ ಬಂದಿದ್ದರೂ “ದುಡ್ಡಿದ್ದವನೇ ಭೂಮಿಯ ಒಡೆಯ’ ಎಂಬ ಸ್ಥಿತಿ ನಿರ್ಮಾಣವಾಗುತ್ತಿದೆ. ಕೈಗಾರಿಕೆ, ರೈಲ್ವೆ, ವಿದ್ಯುತ್‌, ವಿಮಾನ ನಿಲ್ದಾಣಗಳ ರಿಯಲ್‌ ಎಸ್ಟೇಟ್‌ ಕಾರಿಡಾರ್‌ ಇತ್ಯಾದಿ ಅಭಿವೃದ್ಧಿ ಹೆಸರಿನಲ್ಲಿ ಹತ್ತಾರು ಸಾವಿರ ಎಕರೆ ಭೂಮಿ ರೈತರ ಒಪ್ಪಿಗೆ ಇಲ್ಲದೆ ಸ್ವಾಧೀನಪಡಿಸಿಕೊಳ್ಳುತ್ತಿರುವುದು ವಿಷಾದನೀಯ ಎಂದರು.

ಭೂಮಿ ಕಂಪನಿಗಳ ಪಾಲು: ರೈತ ವಿರೋಧಿ ಸರ್ಕಾರಗಳ ವಿರುದ್ಧ ಹಲವು ಹೋರಾಟಗಳು ದೇಶಾದ್ಯಂತ ನಡೆಯುತ್ತಿರುವಾಗಲೇ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಗುತ್ತಿಗೆ ಆಧಾರದಲ್ಲಿ ಕಂಪನಿಗಳಿಗೆ ಭೂಮಿ ಕೊಡಲು ಸರ್ಕಾರಗಳು ತುದಿಗಾಲಲ್ಲಿ ನಿಂತಿದ್ದರಿಂದ ಭೂಮಿಗಳು ಕಂಪನಿಗಳ ಪಾಲಾಗಿದೆ. ಇಂತಹ ಸ್ಥಿತಿಯಲ್ಲಿ ದೇಶಕ್ಕೆ ಅನ್ನ ಹಾಕುವ ಅನ್ನದಾನ ಪರ ನಿಲ್ಲಬೇಕಾದದ್ದು ಎಲ್ಲಾ ಕಾರ್ಮಿಕ, ದಲಿತ, ರೈತ ಸಂಘಟನೆಗಳ, ಜನಸಾಮಾನ್ಯರ ಆದ್ಯ ಕರ್ತವ್ಯ ಎಂದರು.

ಈ ಸಾಲಿನ ಬಜೆಟ್‌ನಲ್ಲಿ ಕಾಲಮಿತಿಯೊಳಗೆ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆ ಇತ್ಯರ್ಥಪಡಿಸಿ ಪಹಣಿಯಲ್ಲಿನ ಪೈಕಿ (ಪಿ) ನಂಬರ್‌ನೂ° ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಿಂದ ಘೋಷಣೆ ಮಾಡಿಸಿ ಇದಕ್ಕೆ ಅಗತ್ಯವಾಗಿರುವ ಮಾನವ ಸಂಪನ್ಮೂಲ ಮತ್ತು ಹಣಕಾಸು ಒದಗಿಸಲು ಮುಂದಾಗಬೇಕೆಂದು ಆಗ್ರಹಿಸಿದರು.

ಪ್ರಗತಿಪರ ಚಿಂತಕ ಕೆ.ದೊರೈರಾಜ್‌ ಮಾತನಾಡಿ, ಸರ್ಕಾರ ರಚನೆಯಾದ ಮೇಲೆ ನಿಯಂತ್ರಣ ಮಾಡುವ ಅಧಿಕಾರ ಮಾತ್ರ ಜನರ ಕೈಯಲ್ಲಿಲ್ಲ. ಸಮಸ್ಯೆ ಇತ್ಯರ್ಥಪಡಿಸದೆ ಭೂಕಬಳಿಕೆಗಷ್ಟೇ ಕಾನೂನು ದುರ್ಬಳಕೆಯಾಗುತ್ತಿವೆ. ಆದ್ದರಿಂದ ಹೋರಾಟಗಳಿಂದಷ್ಟೇ ರೈತರಿಗೆ ಭೂಮಿ ಸಿಗುವಂತೆ ಮಾಡಲಿವೆ ಎಂದರು.

ಎಲ್ಲಾ ಸಚಿವರು, ಶಾಸಕರಿಗೂ ಮನವಿ ಸಲ್ಲಿಸಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸುವುದು. ಫೆಬ್ರವರಿ 25ರಂದು ಗಂಗಯ್ಯನಪಾಳ್ಯದಿಂದ ಆರಂಭವಾಗುವ ರೈತ ಪಾದಯಾತ್ರೆ ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ರಾಜ್ಯ ರೈತ ಸಂಘದ ರಂಗಹನುಮಯ್ಯ, ಎಐಕೆಎಸ್‌ನ ಗಿರೀಶ್‌, ಸಿಐಟಿಯುನ ಎನ್‌.ಕೆ.ಸುಬ್ರಹ್ಮಣ್ಯ ಮೊದಲಾದವರು ಪ್ರತಿಕ್ರಿಯಿಸಿದರು.

ಎಐಟಿಯುಸಿ ಗಿರೀಶ್‌, ಪ್ರಾಂತ ರೈತ ಸಂಘದ ದೊಡ್ಡನಂಜಯ್ಯ, ಬಗರ್‌ಹುಕುಂ ಸಾಗವಳಿದಾರರ ಹೋರಾಟ ಸಮಿತಿಯ ನರಸಿಂಹಮೂರ್ತಿ, ರಾಚಪ್ಪ, ಆರ್‌.ಎಸ್‌.ಚನ್ನಬಸವಣ್ಣ, ಕರಿಬಸವಯ್ಯ, ಸಿದ್ದನಂಜಯ್ಯ, ಲೋಕೇಶ್‌, ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸಹ ಸಂಚಾಲಕ ಬಿ.ಉಮೇಶ್‌ ಇದ್ದರು.

ಬಗರ್‌ಹುಕುಂ ಸಾಗುವಳಿ ಸಮಸ್ಯೆ ದೀರ್ಘ‌ವಾಗಿ ಬೆಳೆದು ಬಂದಿದೆ. ಸಮಸ್ಯೆ ಪೂರ್ಣ ಪರಿಹಾರಕ್ಕೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಇದೆ. ಇಂತಹ ಸಮಸ್ಯೆ ಪರಿಹಾರ ಸರ್ಕಾರದ ಕೈಯಲ್ಲಿದೆ. ಇಂತಹ ಸರ್ಕಾರ ರಚಿಸುವ ಶಾಸಕರ ಆಯ್ಕೆ ಮಾಡುವ ಹಕ್ಕು ಮತ್ತು ಶಕ್ತಿ ರೈತರಲ್ಲಿದೆ.
-ಕೆ.ದೊರೈರಾಜ್‌, ಪ್ರಗತಿಪರ ಚಿಂತಕ

ವಿಶಾಲ ತಳಹದಿಯ ಪಕ್ಷಾತೀತ ಹೋರಾಟ ರಾಜ್ಯಮಟ್ಟದಲ್ಲಿ ನಡೆಯಬೇಕು. ಫೆ.25ರಂದು ಗುಬ್ಬಿ ತಾಲೂಕು ಚೇಳೂರಿನ ಗಂಗಯ್ಯನಪಾಳ್ಯದಿಂದ ಹೊರಡುವ ರೈತ ಪಾದಯಾತ್ರೆ ಯಶಸ್ವಿಗೊಳಿಸಲು ಮುಂದಾಗಬೇಕು.
-ಸಿ.ಯತಿರಾಜು, ಪರಿಸರ ಹೋರಾಟಗಾರ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.