ಗ್ರಾಮಕ್ಕೊಂದು ಗ್ರಂಥಾಲಯ ಇಂದಿನ ತುರ್ತು ಅಗತ್ಯ


Team Udayavani, Feb 17, 2020, 4:29 PM IST

17-February-24

ಚಡಚಣ: ಮನೆಗೊಂದು ಶೌಚಾಲಯ ಎಷ್ಟು ಮುಖ್ಯವೋ ಅಷ್ಟೇ ಗ್ರಾಮಕ್ಕೊಂದು ಗ್ರಂಥಾಲಯ ಮುಖ್ಯ. ಗ್ರಾಮದಲ್ಲಿ ಗ್ರಂಥಾಲಯವಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದರ ಜತೆಗೆ ಜ್ಞಾನದ ಕೊರತೆ ನೀಗುತ್ತದೆ ಎಂದು ಕರ್ನಾಟಕ ವಿಶ್ವ ವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಭಾಗದ ಮುಖ್ಯಸ್ಥ ಡಿ.ಬಿ. ಕುಂಬಾರ ಹೇಳಿದರು.

ಸಾರ್ವಜನಿಕ ಗ್ರಂಥಾಲಯಗಳ ಮಾಹಿತಿ ಕೌಶಲ್ಯ ವಿಷಯದ ಮೇಲೆ ಪಟ್ಟಣದ ಸಂಗಮೇಶ್ವರ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ತಂತ್ರಜ್ಞಾನ ಯುಗದಲ್ಲಿ ಕೂಡಾ ಸಾರ್ವಜನಿಕ ಗ್ರಂಥಾಲಯ ಪಾತ್ರ ಹಿರಿದಾದುದು.

ಗ್ರಂಥಾಲಯದಿಂದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ನಿಖರ ಮಾಹಿತಿ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ರಾಜ್ಯದಲ್ಲಿ ಸುಮಾರು 8,000 ಗ್ರಂಥಾಲಯಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ಗ್ರಾಮಕ್ಕೊಂದು ಗ್ರಂಥಾಲಯಗಳು ನಿರ್ಮಾಣ ಮಾಡಿದರೆ ಗ್ರಾಮಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ತುಮಕೂರು ವಿಶ್ವವಿದ್ಯಾಲಯದ ಸಂಪತ್‌ಕುಮಾರ ಬಿ.ಟಿ. ಮಾತನಾಡಿ, ಗ್ರಂಥಾಲಯಗಳ ಸಮಗ್ರ ಆಳ, ಅಗಲ, ಉಪಯೋಗ ಹಾಗೂ ಜ್ಞಾನಾರ್ಜನೆಯ
ವಿವಿಧ ಹಂತಗಳ ಮಾಹಿತಿ ನೀಡಿದರು. ಮಹಾರಾಷ್ಟ್ರದ ಮುಂಬೈ ಕೇಂದ್ರೀಯ ವಿಶ್ವ ವಿದ್ಯಾಲಯದ ಪ್ರಮುಖ ಗ್ರಂಥಪಾಲಕ ಆನಂದ ದೊಡ್ಡಮನಿ ಮಾತನಾಡಿ, ಗ್ರಂಥಾಲಯದಲ್ಲಿ ಪಡೆಯುವ ಶೈಕ್ಷಣಿಕ ಮೌಲ್ಯಗಳು ಹಾಗೂ ಸಂಶೋಧನೆಯಲ್ಲಿನ ತೊಡಗುವ ಪ್ರತಿಯೊಬ್ಬರು ಕೃತಿ ಚಾರ್ಯ ಎಚ್ಚರಿಕೆ ವಹಿಸುವ ಕುರಿತು ಸಮಗ್ರ ಮಾಹಿತಿ ನೀಡಿದರು.

ಕಾರ್ಯಕ್ರಮದ ಎಂ.ಕೆ. ಬಿರಾದಾರ ಪ್ರಾಸ್ತಾವಿಕ ಮತನಾಡಿ, ಸಾರ್ವಜನಿಕ ಗ್ರಂಥಾಲಯದಿಂದ ಪ್ರತಿಯೊಬ್ಬರು ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಡಾ| ಎಸ್‌.ಎಸ್‌. ದೇಸಾಯಿ ವಿಚಾರ ಸಂಕಿರಣಕ್ಕೆ ಆಗಮಿಸಿದ್ದ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ವಿಚಾರ ಸಂಕಿರಣದಲ್ಲಿ ಸಂಗಮೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ವಿ.ಜಿ. ಮುತ್ತಿನ, ನಾಯಕ ಬಂಕಾಪುರ, ಡಾ| ಮಹೇಶ ಹೊರಕೇರಿ,
ಡಾ| ಜೆ.ಶಿವರಾಮ, ಡಾ| ವಿಜಯಕುಮಾರ ಮೂಲಿಮನಿ, ವೈ.ಬಿ. ಕೊರಡೂರ, ನಿರ್ದೇಶಕರಾದ ಬಿ.ಆರ್‌. ಯಂಕಂಚಿ, ಅಫಿಯಾ ಶಾಜಾದ, ಪ್ರಾಚಾರ್ಯ ಡಾ| ಎಸ್‌. ಎಸ್‌. ಚೋರಗಿ, ಎಂ.ಎಸ್‌. ಮಾಗಣಗೇರಿ ಸೇರಿದಂತೆ ಶಿಕ್ಷಣ ಸಂಸ್ಥೆಯ ವಿವಿಧ ವಿಭಾಗದ ಪ್ರಾಧ್ಯಾಪಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧ ಮಹಾವಿದ್ಯಾಲಯಗಳಿಂದ ಸುಮಾರು 200ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ತಮ್ಮ ವಿಚಾರಗಳು ಮಂಡಿಸಿ ಪ್ರಮಾಣ ಪತ್ರ ಪಡೆದುಕೊಂಡರು. ಡಾ| ಎಸ್‌.ಬಿ. ರಾಠೊಡ ಸ್ವಾಗತಿಸಿದರು. ಬಸವರಾಜ ಎಳ್ಳೂರ ಹಾಗೂ ದರೇಶ ಕುಮಟಗಿ ನಿರೂಪಿಸಿದರು. ಮಹಾಂತೇಶ ಜನವಾಡ ವಂದಿಸಿದರು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.