ಮಂಗಳೂರಿನ ಎಂ-ಸ್ಯಾಂಡ್‌ಗೆ ಬೇಡಿಕೆ ಹೆಚ್ಚಳ

ಲಕ್ಷದ್ವೀಪಕ್ಕೂ ತಟ್ಟಿದ ಮರಳು ಕೊರತೆ

Team Udayavani, Feb 18, 2020, 6:40 AM IST

ben-37

ಮಂಗಳೂರು ಹಳೆ ಬಂದರಿನಲ್ಲಿ ರವಾನೆಗೆ ಸಿದ್ಧಗೊಂಡ ಎಂ- ಸ್ಯಾಂಡ್‌ ಚೀಲಗಳು.

ಮಂಗಳೂರು: ಕರಾವಳಿಯ ಮರಳಿನ ಕೊರತೆಯ ಬಿಸಿ ಲಕ್ಷದ್ವೀಪಕ್ಕೂ ತಟ್ಟಿದೆ. ಅಲ್ಲಿಗೆ ಮಂಗಳೂರಿನಿಂದ ಮರಳು ಪೂರೈಕೆ ಸಂಪೂರ್ಣವಾಗಿ ಸ್ಥಗಿತವಾಗಿದ್ದು, ಪರ್ಯಾಯವಾಗಿ ಎಂ-ಸ್ಯಾಂಡ್‌ ಸರಬರಾಜು ಮಾಡಲಾಗುತ್ತಿದೆ. ಇದಕ್ಕೂ ಬೇಡಿಕೆ ಹೆಚ್ಚುತ್ತಿದೆ.

ಬ್ರಿಟಿಷರ ಕಾಲದಿಂದಲೂ ಲಕ್ಷದ್ವೀಪಕ್ಕೆ ಆಹಾರ ಉತ್ಪನ್ನಗಳು, ನಿರ್ಮಾಣ ಸಾಮಗ್ರಿಗಳ ಸಹಿತ ಬಹುತೇಕ ಎಲ್ಲ ಅಗತ್ಯ ಸರಕುಗಳನ್ನು ಮಂಗಳೂರಿನ ಹಳೆ ಬಂದರಿನಿಂದಲೇ ಸಾಗಿಸಲಾಗುತ್ತಿದೆ. ಸರಬರಾಜಾಗುವ ಪ್ರಮುಖ ಸಾಮಗ್ರಿಗಳಲ್ಲಿ ಮರಳು ಕೂಡ ಒಂದು. ಕಳೆದ ನಾಲ್ಕು ವರ್ಷಗಳಿಂದ ಕರಾವಳಿಯಲ್ಲಿ ಉಂಟಾಗಿರುವ ಮರಳು ಕೊರತೆ ಲಕ್ಷದ್ವೀಪದ ನಿರ್ಮಾಣ ಕಾಮಗಾರಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಮರಳಿಗೆ ಹೆಚ್ಚಿನ ಬೇಡಿಕೆ ಇತ್ತಾದರೂ ಒದಗಿಸಲು ಸಾಧ್ಯವಾಗಿರಲಿಲ್ಲ. ಪ್ರಸ್ತುತ ಸಾಗಾಟ ಸಂಪೂರ್ಣ ನಿಂತಿದೆ.

ಲಕ್ಷದ್ವೀಪಕ್ಕೆ 2017-18ರಲ್ಲಿ 16,183 ಮೆ.ಟನ್‌, 2018-19ರಲ್ಲಿ 20,659 ಮೆ.ಟನ್‌ಗೆ ಬೇಡಿಕೆ ಬಂದಿದ್ದು, ಅಷ್ಟನ್ನು ಪೂರೈಸಲಾಗಿತ್ತು. 2019-20ರ ಜನವರಿಯ ವರೆಗೆ 11,189 ಮೆ. ಟನ್‌ ಎಂ-ಸ್ಯಾಂಡ್‌ ರಫ್ತು ಮಾಡಲಾಗಿದೆ.

ಶೇ.90 ಸರಕಾರಿ ಕಾಮಗಾರಿ
ಲಕ್ಷದ್ವೀಪದಲ್ಲಿ ನಡೆಯುವ ಕಾಮಗಾರಿಗಳ ಪೈಕಿ ಶೇ.90 ಸರಕಾರದಿಂದ ನಡೆಯುವಂತಹವು. ಬ್ರೇಕ್‌ವಾಟರ್‌ ನಿರ್ಮಾಣ, ವಿಮಾನ ನಿಲ್ದಾಣ, ಸೌರಶಕ್ತಿ ಘಟಕಗಳು, ಕೇಂದ್ರೀಯ ವಿದ್ಯಾಲಯ, ಹಾಸ್ಟೆಲ್‌ ಮೊದಲಾದ ಎಲ್ಲ ಕಾಮಗಾರಿಗಳಲ್ಲಿಯೂ ಮಂಗಳೂರು ಹಳೆ ಬಂದರಿನಿಂದ ಸಾಗಣೆಯಾದ ಸಾಮಗ್ರಿಗಳ ಪಾಲು ದೊಡ್ಡದು. ಕೆಲವು ಪರಿಕರಗಳು ಮಾತ್ರ ಕೇರಳದ ಬೇಪೂರ್‌ ಬಂದರಿನಿಂದ ರಫ್ತಾಗುತ್ತವೆ. ಸದ್ಯ ಲಕ್ಷದ್ವೀಪವು ಕಟ್ಟಡ ಸಾಮಗ್ರಿಗಳಾದ ಎಂ- ಸ್ಯಾಂಡ್‌, ಜಲ್ಲಿ, ಬೋಲ್ಡರ್‌ಗಳಿಗೆ ಮಂಗಳೂರು ಬಂದರನ್ನೇ ಅವಲಂಬಿಸಿದೆ.

ಕೇರಳದಲ್ಲಿ ದರ ಹೆಚ್ಚು
ಕೇರಳದಲ್ಲಿಯೂ ಎಂ-ಸ್ಯಾಂಡ್‌ ಲಭ್ಯವಿದೆ. ಆದರೆ ಅಲ್ಲಿ ದರ ಹೆಚ್ಚು. ಹಾಗಾಗಿ ಮಂಗಳೂರಿ ನಿಂದಲೇ ಪೂರೈಸಲಾಗುತ್ತಿದೆ ಎನ್ನುತ್ತಾರೆ ವಿವಿಧ ಸಾಮಗ್ರಿಗಳನ್ನು ಪೂರೈಕೆ ಮಾಡುವ ಉಸ್ಮಾನ್‌.

ರವಾನೆ ಹೇಗೆ?
ಯಾಂತ್ರೀಕೃತ ಹಾಯಿದೋಣಿಗಳ (ಮೆಕ್ಯಾನೈಸ್ಡ್ ಸೈಲಿಂಗ್‌ ವೆಸೆಲ್ಸ್‌) ಮೂಲಕ ಸಾಮಗ್ರಿಗಳನ್ನು ಕಳುಹಿಸಲಾಗುತ್ತದೆ. ಅಂಡಮಾನ್‌ನ ಒಟ್ಟು 13 ದ್ವೀಪ ಸಮೂಹ ಪೈಕಿ 10ರಲ್ಲಿ ಜನವಸತಿ ಇದೆ. ಮಂಗಳೂರಿಗೆ ಹತ್ತಿರವಿರುವ ಆ್ಯಂಥ್ರೊಡ್‌ ಮತ್ತು ಕಿಲ್ತಾನ್‌ ದ್ವೀಪಗಳನ್ನು ತಲುಪಲು 24 ತಾಸು ಸಾಕು. ಇತರ ದ್ವೀಪಗಳಿಗೆ 36, 48 ತಾಸುಗಳು ಬೇಕು. ಲಕ್ಷದ್ವೀಪದಲ್ಲಿ ಮೀನು ಮತ್ತು ತೆಂಗಿನಕಾಯಿ ಮಾತ್ರವೇ ಸಿಗುತ್ತದೆ. ಮಂಗಳೂರಿನಿಂದ ಪ್ರತಿದಿನ 4-6 ದೋಣಿಗಳು ಅಗತ್ಯ ಸಾಮಗ್ರಿಗಳನ್ನು ಹೊತ್ತು ಸಾಗುತ್ತವೆ.

ಅನಾದಿ ಕಾಲದಿಂದಲೂ ಇರುವ ಮಂಗಳೂರು ಹಳೆ ಬಂದರು ಲಕ್ಷದ್ವೀಪದ ನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತ ಬಂದಿದೆ. ಕಳೆದ ವರ್ಷ ಓಖೀ ಚಂಡಮಾರುತದಿಂದ ಅಲ್ಲಿನ ಪ್ರಮುಖ ಬ್ರೇಕ್‌ ವಾಟರ್‌ ಪೂರ್ಣ ಹಾನಿಗೀಡಾಗಿತ್ತು. ಅದರ ಪುನರ್‌ನಿರ್ಮಾಣಕ್ಕೂ ಇಲ್ಲಿನ ಕಲ್ಲುಗಳೇ ಬಳಕೆಯಾಗಿವೆ. ಪ್ರಸ್ತುತ ಎಂ-ಸ್ಯಾಂಡ್‌ನ್ನು ಅಧಿಕ ಪ್ರಮಾಣದಲ್ಲಿ ರವಾನಿಸಲಾಗುತ್ತಿದೆ. ಬಂದರು ಅಭಿವೃದ್ಧಿಯಾದರೆ ಹೆಚ್ಚಿನ ಪ್ರಮಾಣದ ವಹಿವಾಟು ಸಾಧ್ಯವಾಗಲಿದೆ.
-ಗೌಸ್‌ ಆಲಿ, ಅಧಿಕಾರಿ, ಮಂಗಳೂರು ಹಳೆ ಬಂದರು

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.