ಎತ್ತಿನಹೊಳೆ ಯೋಜನೆ ಭೂ ಸ್ವಾಧೀನಕ್ಕೆ ಪ್ರಕ್ರಿಯೆ ಚುರುಕು


Team Udayavani, Feb 20, 2020, 3:00 AM IST

ettinhol,e

ಹಾಸನ: ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಕಾಮಗಾರಿಗಳು ಭೂ ಸ್ವಾಧೀನದ ವಿವಾದಗಳು ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿವೆ. ಇನ್ನೊಂದು ತಿಂಗಳೊಳಗೆ ಹಾಸನ ಜಿಲ್ಲೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗಳು ಪೂರ್ಣಗೊಂಡು ಕಾಮಗಾರಿ ಚುರುಕಾಗುವ ಸಾಧ್ಯತೆಯಿದೆ.

ಎತ್ತಿನಹೊಳೆ ಯೋಜನೆ ಜಿಲ್ಲೆಯ 4 ತಾಲೂಕುಗಳಲ್ಲಿ ಹಾದು ಹೋಗುತ್ತಿದೆ. ಸಕಲೇಶಪುರ ತಾಲೂಕಿನಲ್ಲಿ ನೀರು ಸಂಗ್ರಹ ಮತ್ತು ನೀರೆತ್ತುವ ಕಾಮಗಾರಿಗಳಿಗಷ್ಟೇ ಎತ್ತಿನಹೊಳೆ ಸೀಮಿತ. ನೀರು ಸಂಗ್ರಹಣೆಗೆ ಐದಾರು ಮಿನಿ ಡ್ಯಾಂಗಳನ್ನು ಈಗಾಗಲೇ ನಿರ್ಮಿಸಿದ್ದು, ಆ ಮಿನಿ ಡ್ಯಾಂಗಳಿಂದ ನೀರನ್ನು ಮೇಲೆತ್ತಿ ಪೈಪ್‌ಲೈನ್‌ ಮೂಲಕ ಸಕಲೇಶಪುರ ತಾಲೂಕು ಗಡಿ ಭಾಗ ಹರುವನಹಳ್ಳಿ ಬಳಿ ನಿರ್ಮಿಸಿರುವ ಬೃಹತ್‌ ತೊಟ್ಟಿಗೆ ತುಂಬಿಸಲಾಗುತ್ತದೆ.

ಅಲ್ಲಿಂದ ಸ್ವಾಭಾವಿಕ ಗುರುತ್ವಾಕರ್ಷಣೆಯ ಮೂಲಕ ತೆರೆದ ಕಾಲುವೆಯಲ್ಲಿ ಆಲೂರು, ಬೇಲೂರು, ಆರಸೀಕೆರೆ ತಾಲೂಕಿನ ಮೂಲಕ ತುಮಕೂರು ಜಿಲ್ಲೆಯತ್ತ ಎತ್ತಿನಹೊಳೆ ನೀರು ಹರಿದು ಬಯಲು ಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಹರಿದು ಹೋಗುತ್ತದೆ.

ಸಕಲೇಶಪುರದಲ್ಲಿ 400 ಎಕರೆ ಖರೀದಿ: ಈ ಯೋಜನೆಗಾಗಿ ಸಕಲೇಶಪುರ ತಾಲೂಕಿನಲ್ಲಿ 448.32 ಕೆರೆ ಭೂಮಿಯ ಅಗತ್ಯವಿತ್ತು. ಈಗಾಗಲೇ 400 ಎಕರೆಯನ್ನು ನೇರಖರೀದಿ ಮಾಡಲಾಗಿದ್ದು, ಅದಕ್ಕಾಗಿ 136 ಕೋಟಿ ರೂ. ಪರಿಹಾರವನ್ನು ಭೂ ಮಾಲೀಕರಿಗೆ ವಿಶ್ವೇಶ್ವರಯ್ಯ ಜಲ ನಿಗಮವು ಪಾವತಿಸಿದೆ.

ಇನ್ನು 48 ಎಕರೆ ಭೂಮಿಯನ್ನು ಭೂ ಮಾಲೀಕರು ಮಾರಾಟ ಮಾಡಲು ಒಪ್ಪಿಲ್ಲ. ಹಾಗಾಗಿ 48 ಎಕರೆಯನ್ನು ಭೂ ಸ್ವಾಧೀನ ಕಾಯಿದೆ ಪ್ರಕಾರ ಸ್ವಾಧೀನಪಡೆಯುವ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿದ್ದು, ಇನ್ನೊಂದು ತಿಂಗಳೊಳಗೆ ಪರಿಹಾರ ನಿಗದಿಯಾಗಲಿದ್ದು, ವಿಶ್ವೇಶ್ವರಯ್ಯ ಜಲ ನಿಗಮವು ಭೂಮಿಯನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಲಿದೆ.

48 ಎಕರೆ ಸ್ವಾಧೀನಕ್ಕಾಗಿ ಸುಮಾರು 20 ಕೋಟಿ ರೂ. ಪರಿಹಾರದ ಮೊತ್ತವನ್ನೂ ನಿಗಮವು ಕಾಯ್ದಿರಿಸಿಕೊಂಡಿದೆ. ಅಲ್ಲಿಗೆ ಸಕಲೇಶಪುರ ತಾಲೂಕಿನಲ್ಲಿ ಎತ್ತಿನಹೊಳೆ ಯೋಜನೆಯ ನೀರೆತ್ತುವ ಏತ ನೀರಾವರಿಯ ಒಂದನೇ ಹಂತದ ಕಾಮಗಾರಿಗಳಿಗೆ ಅಗತ್ಯವಿರುವ ಭೂಸ್ವಾಧೀನ ಪೂರ್ಣವಾಗಲಿದೆ.

ಮೊದಲ ಹಂತದ ಶೇ. 80 ಕಾಮಗಾರಿ ಪೂರ್ಣ: ಸಕಲೇಶಪುರ ತಾಲೂಕು ವ್ಯಾಪ್ತಿಯಲ್ಲಿ 400 ಎಕರೆಯನ್ನು ನೇರ ಖರೀದಿ ಮಾಡಿಕೊಂಡಿರುವ ಪರಿಣಾಮ ಒಂದನೇ ಹಂತದಲ್ಲಿ ಶೇ.80ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ಭೂ ಸ್ವಾಧೀನದ ವಿವಾದವಿರುವ 48 ಎಕರೆಯ ವ್ಯಾಪ್ತಿಯಲ್ಲಿ ಮಾತ್ರ ಪೈಪ್‌ಲೈನ್‌ ಅಳವಡಿಕೆ ಬಾಕಿ ಉಳಿದಿದೆ ಎಂದು ವಿಶ್ವೇಶ್ವಯರಯ್ಯ ಜಲ ನಿಗಮದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇನ್ನೊಂದು ತಿಂಗಳಲ್ಲಿ ಪರಿಹಾರ: 2ನೇ ಹಂತದಲ್ಲಿ ಅಂದರೆ ಒಟ್ಟು 100 ಕಿ.ಮೀ. ನಾಲೆ ನಿರ್ಮಾಣಕ್ಕೆ ಸಕಲೇಶಪುರ ತಾಲೂಕಿನ 4 ಗ್ರಾಮಗಳ ವ್ಯಾಪ್ತಿಯಲ್ಲಿ, ಆಲೂರು ತಾಲೂಕಿನ 16 ಗ್ರಾಮ, ಬೇಲೂರು ತಾಲೂಕಿನ 30 ಗ್ರಾಮ ಮತ್ತು ಆರಸೀಕೆರೆ ತಾಲೂಕಿನ 25 ಗ್ರಾಮಗಳ ವ್ಯಾಪ್ತಿಯಲ್ಲಿ 2,769 ಎಕರೆ ಸ್ವಾಧೀನದ ಪ್ರಕ್ರಿಯೆ ಅಂತಿಮ ಹಂತ (ಭೂ ಸ್ವಾಧೀನ ಕಾಯ್ದೆ 19 (1) ಪ್ರಕ್ರಿಯೆ)ದಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಪರಿಹಾರ ನಿಗದಿಯಾಗಲಿದೆ.

ಆನಂತರ ಭೂ ಮಾಲೀಕರಿಗೆ ಪರಿಹಾರ ವಿತರಣೆಯೊಂದಿಗೆ ವಿಶ್ವೇಶ್ವರಯ್ಯ ಜಲ ನಿಗಮವು ಭೂಮಿಯನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಬಹುದಾಗಿದೆ. 2,769 ಎಕರೆಗೆ ಪರಿಹಾರದ ಮೊತ್ತ 423.38 ಕೋಟಿ ರೂ. ಗಳನ್ನು ಬಿಡುಗಡೆ ಮಾಡುವಂತೆ ವಿಶ್ವೇಶ್ವರಯ್ಯ ಜಲ ನಿಗಮವು ಸರ್ಕಾರಕ್ಕೆ ಮನವಿ ಮಾಡಿದೆ.

ಸರ್ಕಾರ ಪರಿಹಾರದ ಮೊತ್ತ 423.38 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದರೆ ಅಲ್ಲಿಗೆ ಹಾಸನ ಜಿಲ್ಲೆಯ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಯ ಭೂ ಸ್ವಾಧೀನದ ಸಮಸ್ಯೆ ಬಹುತೇಕ ಪೂರ್ಣಗೊಂಡು ನಾಲಾ ಕಾಮಗಾರಿಗಳು ಮುಂದುವರಿಯಲು ಅಡೆತಡೆಗಳು ನಿವಾರಣೆಯಾಗಲಿವೆ. ಆನಂತರ ಹಣ ಬಿಡುಗಡೆಗೆ ತಕ್ಕಂತೆ ಸಿವಿಲ್‌ ಕಾಮಗಾರಿಗಳು ನಡೆಯಲಿವೆ.

ಅರಸೀಕೆರೆ ತಾಲೂಕಿಗೆ ಅನುಕೂಲ: ಎತ್ತಿನಹೊಳೆ ಯೋಜನೆಯಿಂದ ಅರಸೀಕೆರೆ ತಾಲೂಕಿಗೆ ಅನುಕೂಲವಾಗಲಿದೆ. ಆ ತಾಲೂಕಿನ 18 ರಿಂದ 20 ಕೆರೆಗಳಿಗೆ ನೀರು ತುಂಬಲಿದೆ. ಆದರೆ 100 ಕಿ.ಮೀ.ವರೆಗೆ ನಾಲೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ನಂತರ ಮಾತ್ರ ಕೆರೆಗಳಿಗೆ ನೀರು ಹರಿಯಲಿದೆ. ಇನ್ನು ಬೇಲೂರು ತಾಲೂಕಿನ ಕೆಲವು ಕೆರೆಗಳಿಗೂ ನೀರು ತುಂಬಿಸಲು ತಾತ್ವಿಕ ಒಪ್ಪಿಗೆ ಸಿಕ್ಕಿದ್ದು, ಅಧಿಕೃತ ಆದೇಶ ಹೊರಬೀಳಬೇಕಾಗಿದೆ. ಇನ್ನು ಆಲೂರು ಮತ್ತು ಸಕಲೇಶಪುರ ತಾಲೂಕಿಗೆ ಈ ಯೋಜನೆಯಿಂದ ಪ್ರಯೋಜನ ಲಭ್ಯವಾಗುತ್ತಿಲ್ಲ.

* ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.