ನ್ಯಾಯಾಂಗ ತನಿಖೆಯಾಗಲಿ: ಸಿದ್ದು


Team Udayavani, Feb 20, 2020, 3:08 AM IST

nyayanga

ವಿಧಾನಸಭೆ: ವಿಧಾನಸಭೆ‌ಯಲ್ಲೂ ಮಂಗಳೂರಿನ ಗೋಲಿಬಾರ್‌ ಘಟನೆಯ ಪ್ರತಿಧ್ವನಿ ಕೇಳಿ ಬಂತು. ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇದೊಂದು ಪೊಲೀಸರ ಪೂರ್ವಯೋಜಿತ ಕೃತ್ಯ. ಘಟನೆಯಲ್ಲಿ ಇಬ್ಬರು ಅಮಾಯಕ ಮುಸ್ಲಿಮರು ಪ್ರಾಣ ಕಳೆದುಕೊಂಡಿದ್ದು, ಅದರ ಹೊಣೆಯನ್ನು ಸರ್ಕಾರ, ಪೊಲೀಸ್‌ ಇಲಾಖೆ ಹೊರಬೇಕು. ಪ್ರಕರಣವನ್ನು ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಮಂಗಳೂರು ಪೊಲೀಸ್‌ ಆಯುಕ್ತರೇ ನಿಂತು ಗೋಲಿಬಾರ್‌ಗೆ ಸೂಚಿಸಿದ್ದಾರೆ. ನಿಷೇಧಾಜ್ಞೆ ಜಾರಿಗೊಳಿಸಿದ ಆಯುಕ್ತರೇ ಇಬ್ಬರ ಸಾವಿಗೆ ಕಾರಣ. ಮುಖ್ಯ ಮಂತ್ರಿಗಳು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದರೂ ಬಳಿಕ ಮೃತರ ಹೆಸರು ಎಫ್ಐಆರ್‌ನಲ್ಲಿದೆ ಎಂಬ ಕಾರಣಕ್ಕೆ ಪರಿಹಾರ ತಡೆಹಿಡಿದರು. ಇದಕ್ಕೆ ಯಾರ ಒತ್ತಡವಿದೆ ಎಂದು ಪ್ರಶ್ನಿಸಿದರು.

ಅಲ್ಲದೆ, ಸೆಕ್ಷನ್‌ 144ರ ಅನ್ವಯ ನಿಷೇಧಾಜ್ಞೆ ಹೇರಿದ್ದು ಕಾನೂನುಬಾಹಿರ ಎಂದಿರುವ ನ್ಯಾಯಾಲಯ ಹಾಗೂ ಸರಿಯಾದ ಸಾಕ್ಷ್ಯ ಒದಗಿಸದ ಕಾರಣ 21 ಮಂದಿಗೆ ಜಾಮೀನು ದೊರೆತ ವಿಚಾರವನ್ನು ಪ್ರಸ್ತಾಪಿಸಿದರು. ಇದು ಸದನದಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿಸಿತು. ಕಾಂಗ್ರೆಸ್‌- ಬಿಜೆಪಿ ಶಾಸಕರ ನಡುವೆ ನಿರಂತರ ವಾಕ್ಸಮರಕ್ಕೆ ನಾಂದಿ ಹಾಡಿತು.

ಇದರಿಂದಾಗಿ ಸದನವನ್ನು ಮುಂದೂಡಬೇಕಾಯಿತು. ಮತ್ತೆ ಕಲಾಪ ಆರಂಭವಾದಾಗ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಕಾಂಗ್ರೆಸ್‌ನ ಯು.ಟಿ. ಖಾದರ್‌, “ಸಿಎಎ ವಿರುದ್ಧ ದೇಶದಲ್ಲಿ ಬೆಂಕಿ ಹೊತ್ತಿದ್ದು, ರಾಜ್ಯದಲ್ಲೂ ಹೊತ್ತಿಕೊಳ್ಳುತ್ತದೆ’ ಎಂದು ಹೇಳಿದ್ದಾರೆ. ಇದು ದೇಶದ್ರೋಹದ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದರು. ಇದಕ್ಕೆ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿ ಯಿಸಿ, “ಖಾದರ್‌ ಹೇಳಿಕೆ ವಿರುದ್ಧದ ಪ್ರಕರಣ ನ್ಯಾಯಾಲಯದಲ್ಲಿದ್ದು,

ಈ ರೀತಿ ಚರ್ಚಿಸುವುದು ನ್ಯಾಯಾಂಗ ನಿಂದನೆಯಾಗುವುದಿಲ್ಲವೆ. ತೀರ್ಪಿನ ಮೇಲೆ ಪ್ರಭಾವ ಬೀರಿದಂತಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್‌ನ ಆರ್‌.ವಿ.ದೇಶಪಾಂಡೆ, ಪ್ರಿಯಾಂಕ್‌ ಖರ್ಗೆ ಇತರರು ಆಕ್ಷೇಪ ವ್ಯಕ್ತಪಡಿ ಸಿದರು. ಈ ಬಗ್ಗೆ ಕೆಲಹೊತ್ತು ಗದ್ದಲ ನಡೆಯಿತು.

ಬೆಂಕಿ ಹಚ್ಚುತ್ತೇವೆ ಎಂದವರ್ಯಾರು?: ಆಗ ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌, ಹಾಗಾದರೆ ಬೆಂಕಿ ಹಚ್ಚುತ್ತೇವೆ ಎಂದವರ್ಯಾರು ಎಂದು ಪ್ರಶ್ನಿಸಿದ್ದು, ಸದನದಲ್ಲಿ ಮತ್ತೆ ಗದ್ದಲಕ್ಕೆ ಕಾರಣವಾಯಿತು. ಬಿಜೆಪಿಯ ವೇದವ್ಯಾಸ ಕಾಮತ್‌, ಹರೀಶ್‌ ಪೂಂಜಾ ಇತರರು, ಪೆಟ್ರೋಲ್‌ ಬಾಂಬ್‌, ಇಟ್ಟಿಗೆ ತಂದವರು ಯಾರು ಎಂದು ಕೆಣಕಿದರು.

ಚರ್ಚೆ ವೇಳೆ, ಮಧ್ಯ ಪ್ರವೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಣ್ಣ ಪುಟ್ಟ ಪ್ರಕರಣದಲ್ಲೂ ಜಾಮೀನು ಕೊಡಬಾರದು ಎಂದು ವಾದಿಸುವ ಸರ್ಕಾರಿ ವಕೀಲರು ಇಂತಹ ಪ್ರಕರಣದಲ್ಲಿ ಸರಿಯಾಗಿ ವಾದ ಮಾಡಿಲ್ಲ ಎಂದರೆ ಹೇಗೆ. ಇದು ಕಾನೂನು ಇಲಾಖೆಯ ವೈಫ‌ಲ್ಯವಲ್ಲವೇ. ಇಂತಹವರನ್ನು ಯಾಕೆ ಇಟ್ಟುಕೊಂಡಿದ್ದೀರಿ. ಸರ್ಕಾರದ ವೈಫ‌ಲ್ಯವಲ್ಲವೇ ಎಂದು ಪ್ರಶ್ನಿಸಿದರು.

ಮಾತು ಮುಂದುವರಿಸಿದ ಸಿದ್ದು, ಕೊಪ್ಪಳದ ಆನೆಗುಂದಿ ಉತ್ಸವದಲ್ಲಿ ಕವಿ ಸಿರಾಜ್‌ ಅವರು ಪದ್ಯ ಓದಿದ್ದಕ್ಕೆ ಪ್ರಕರಣ ದಾಖಲಿಸಿ ಒಂದು ದಿನ ಜೈಲಿಗೆ ಕಳುಹಿಸಲಾಗಿತ್ತು. ಆರ್‌ಎಸ್‌ಎಸ್‌ ಮುಖಂಡರಾದ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರ ಶಾಲೆಯಲ್ಲಿ ಬಾಬರಿ ಮಸೀದಿ ಧ್ವಂಸ ನಾಟಕ ಪ್ರದರ್ಶನವಾಗಿದೆ. ಬಾಬರಿ ಮಸೀದಿ ಧ್ವಂಸ ಕಾನೂನುಬಾಹಿರ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಹಾಗಿದ್ದರೂ ಅವರ ವಿರುದ್ಧ ದೇಶದ್ರೋಹದ ಪ್ರಕರಣವಿಲ್ಲ ಎಂದು ಹೇಳಿ ಮಾತಿಗೆ ವಿರಾಮ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.