2 ತಿಂಗಳಲ್ಲಿ ಜೀವವೈವಿಧ್ಯ ಸಂರಕ್ಷಣಾ ವರದಿ


Team Udayavani, Feb 21, 2020, 1:13 AM IST

chitra-37

ಕುಂದಾಪುರ: ಜೀವವೈವಿಧ್ಯ ಸಂರಕ್ಷಣೆ, ಅಭಿವೃದ್ಧಿ ಕುರಿತು ಪಂಚಾಯತ್‌ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದ್ದು 2 ತಿಂಗಳ ಒಳಗೆ ಸಮಗ್ರ ವರದಿ ಹಾಗೂ ಜೀವವೈವಿಧ್ಯ ಸಂರಕ್ಷಣೆಗೆ ಶಿಫಾರಸನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಹೇಳಿದರು. ಅವರು ಗುರುವಾರ ಇಲ್ಲಿನ ಉಪ ಅರಣ್ಯ ಉಪಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಚುರುಕು ಮುಟ್ಟಿಸುವ ಯತ್ನ
ಹಸಿರು ಪೀಠದ ಸೂಚನೆಯಂತೆ ವರದಿ ನೀಡುವ ಗಡುವು ಸಮೀಪಿಸಿದೆ. ರಾಜ್ಯದ 6,101 ಪಂಚಾಯತ್‌ಗಳ ಪೈಕಿ 2 ಸಾವಿರ ಪಂಚಾಯತ್‌ಗಳಲ್ಲಿ ಜೀವವೈವಿಧ್ಯ ದಾಖಲಾತಿಯಾಗಿದೆ. 3 ಸಾವಿರ ಪಂಚಾಯತ್‌ಗಳಲ್ಲಿ ಪ್ರಗತಿ ಹಂತದಲ್ಲಿದೆ. ಇನ್ನೂ 1 ಸಾವಿರ ಪಂಚಾ ಯತ್‌ಗಳಲ್ಲಿ ಶೈಶವಾವಸ್ಥೆಯಲ್ಲಿದೆ. ಆದ್ದರಿಂದ ಚುರುಕು ಮುಟ್ಟಿಸುವ ಕೆಲಸ ನಡೆಯುತ್ತಿದೆ. ಕಾಯ್ದೆ ಜಾರಿಯಾಗಿ ಇಷ್ಟು ವರ್ಷಗಳೇ ಆಗಿದ್ದರೂ ಪ್ರಗತಿ ಕಂಡಿಲ್ಲ ಎಂದರು.

ಹಸಿರು ಕವಚ ಯೋಜನೆಗೆ ಮನವಿ
ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಕಾರದಲ್ಲಿ ಜೀವವೈವಿಧ್ಯ ಮಂಡಳಿ, ಪರಿಸರ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಹಭಾಗಿತ್ವ‌ದಲ್ಲಿ ಕರಾವಳಿ ರಕ್ಷಣಾ ವಲಯ (ಸಿಆರ್‌ಝಡ್‌) ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಿದೆ. ಮಲೆನಾಡ ಭಾಗದಲ್ಲಿ ಹರಿಯುವ 22 ಪ್ರಮುಖ ಹಾಗೂ 180 ಉಪ ನದಿಗಳ ಮೂಲ ಸಂರಕ್ಷಣೆಯ ಯೋಜನೆ ಘೋಷಣೆ, ಅರಣ್ಯ, ಪರಿಸರ ಇಲಾಖೆ ಸಂಶೋಧನಾ ಸಂಸ್ಥೆ ಮೂಲಕ ಹಸಿರು ಬಜೆಟ್‌ ಮಂಡನೆ ಘೋಷಣೆಗೆ, ನಿಲ್ಲಿಸಲಾದ ಕರಾವಳಿ ಹಸಿರು ಕವಚ ಯೋಜನೆ ಪುನರಾರಂಭಕ್ಕೆ ಸರಕಾರಕ್ಕೆ ಮನವಿ ಮಾಡಲಾಗಿದೆ. ಬಜೆಟ್‌ನಲ್ಲಿ ಈ ಕುತೂಹಲಕ್ಕೆ ತೆರೆ ಬೀಳಲಿದೆ ಎಂದರು.

ಕುಂದಾಪುರ ಅರಣ್ಯ ಉಪ ಸಂರಕ್ಷಣಾಧಿಕಾರಿ ಡಾ| ಆಶಿಶ್‌ ರೆಡ್ಡಿ, ಔಷಧ ಮೂಲಿಕಾ ಮಂಡಳಿ ಸದಸ್ಯ ಡಾ| ಕೇಶವ ಹೆಗಡೆ ಕೊರ್ಸೆ, ವಲಯಾರಣ್ಯಾಧಿಕಾರಿಗಳಾದ ಕ್ಲಿಫರ್ಡ್‌ ಲೋಬೊ, ಚಿದಾನಂದ, ಗೋಪಾಲಕೃಷ್ಣ ಉಪಸ್ಥಿತರಿದ್ದರು.

“ಮತ್ಸ್ಯಧಾಮ’ ಯೋಜನೆ
ನದಿ ಹಾಗೂ ಕೆರೆ ಮೀನುಗಳ ಸಂರಕ್ಷಣೆಗಾಗಿ “ಮತ್ಸ್ಯಧಾಮ’ ಯೋಜನೆ ಮಾಡಲಿದ್ದು ಹೆಬ್ರಿಯ ಸೀತಾನದಿಯಲ್ಲಿ ಜಾರಿಯಾಗಲಿದೆ. ಗ್ರಾಮ ಪಂಚಾಯತ್‌ಗಳಂತೆಯೇ ಎಲ್ಲ ನಗರಾಭಿವೃದ್ಧಿ ಸಂಸ್ಥೆಗಳಲ್ಲಿಯೂ ಸಮಿತಿ ರಚನೆಯಾಗಬೆಕಿದ್ದು ಜೀವವೈವಿಧ್ಯ ಕಾನೂನು ಉಲ್ಲಂಘನೆ ಮಾಡುವವರಿಗೆ ಜೈಲು ಶಿಕ್ಷೆ ವಿಧಿಸುವ ಕಾನೂನು ಇದೆ. ಇದಕ್ಕೆ ಜಿಲ್ಲಾ ಮಟ್ಟದಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ವಿಶೇಷಾಧಿಕಾರಿ ಆಗಿದ್ದಾರೆ ಎಂದು ಆಶೀಸರ ಹೇಳಿದರು. ಕೊಲ್ಲೂರಿನ ಸೌಪರ್ಣಿಕಾ ನದಿಯ ಮಲಿನತೆಯ ಹಾಗೂ ಮತ್ಸ್ಯ ಸಂತತಿ ನಾಶಕ್ಕೆ ಕಾರಣವನ್ನು ಅಧ್ಯಯನ ಮಾಡಿ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾನೂನು ಚೌಕಟ್ಟಿನ ಒಳಗೆ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದರು.

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.