ಸದೃಢ-ಭವ್ಯ ರಾಮ ಮಂದಿರ ನಿರ್ಮಾಣ


Team Udayavani, Feb 22, 2020, 3:06 AM IST

sadrudha

ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮ ಮಂದಿರವು ಶತ ಶತಮಾನಗಳ ಕಾಲ ಶಾಶ್ವತವಾಗಿ ಉಳಿಯಬೇಕೆಂಬ ಹಿನ್ನೆಲೆಯಲ್ಲಿ ಕಟ್ಟಡವನ್ನು ಯೋಜನಾಬದ್ಧವಾಗಿ, ಸದೃಢವಾಗಿ, ಭವ್ಯವಾಗಿ ನಿರ್ಮಿಸಲಾಗುವುದು ಎಂದು ರಾಮ ಮಂದಿರ ಟ್ರಸ್ಟ್‌ನ ಸದಸ್ಯರಾಗಿರುವ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.

ಹೊಸದಿಲ್ಲಿಯಲ್ಲಿ ಬುಧವಾರ ನಡೆದ ರಾಮ ಮಂದಿನ ಟ್ರಸ್ಟ್‌ನ ಮೊದಲ ಸಭೆಯಲ್ಲಿ ಭಾಗವಹಿಸಿ ವಾಪಸಾದ ಶ್ರೀಗಳು, ಗುರುವಾರ ಪೇಜಾವರದ ಮೂಲ ಮಠ ಮತ್ತು ಶುಕ್ರವಾರ ಬೆಳಗ್ಗೆ ಕಣ್ವತೀರ್ಥದಲ್ಲಿರುವ ಉಪ ಮಠಕ್ಕೆ ಭೇಟಿ ನೀಡಿದರು. ಬಳಿಕ ಮಧ್ಯಾಹ್ನ ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ರಾಮ ಮಂದಿರ ಟ್ರಸ್ಟ್‌ನಲ್ಲಿ ನಾನು ದಕ್ಷಿಣ ಭಾರತ ಪ್ರತಿನಿಧಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ. ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ದಕ್ಷಿಣ ಭಾರತದ ಎಲ್ಲ ಆಸ್ತಿಕರ ಸಹಕಾರ ಬೇಕು ಎಂದು ಶ್ರೀಗಳು ಹೇಳಿದರು. ಮಂದಿರ ನಿರ್ಮಾಣಕ್ಕೆ ಬೇಕಾಗಿರುವ ನಿಧಿ ಸಂಚಯನಕ್ಕಾಗಿ ಅಯೋಧ್ಯೆಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಲ್ಲಿ ಖಾತೆಯನ್ನು ತೆರೆಯಲಾಗುವುದು. ಬಳಿಕ ಖಾತೆ ಸಂಖ್ಯೆಯನ್ನು ಸಾರ್ವಜನಿಕರಿಗೆ ನೀಡಲಾಗುವುದು. ಸಾರ್ವಜನಿಕರು ತಮ್ಮ ದೇಣಿಗೆಯನ್ನು ಈ ಖಾತೆಗೆ ಸಂದಾಯ ಮಾಡಬಹುದಾಗಿದೆ. ಪೇಜಾವರ ಮಠದ ಹೆಸರಿನಲ್ಲಿ 5 ಲಕ್ಷ ರೂ. ಗಳನ್ನು ತಾನು ದಿಲ್ಲಿಯಲ್ಲಿ ಹಸ್ತಾಂತರಿಸಿದ್ದೇನೆ ಎಂದು ಸ್ವಾಮೀಜಿ ವಿವರಿಸಿದರು.

ಪ್ರಧಾನಿ ಮೋದಿ ಅವರ ಆಪ್ತ ನೃಪೇಂದ್ರ ಮಿಶ್ರಾ ಅವರು ಅಧ್ಯಕ್ಷರಾಗಿರುವ ರಾಮ ಮಂದಿರ ನಿರ್ಮಾಣ ಸಮಿತಿಯು ಮಂದಿರದ ರೂಪು-ರೇಷೆ ತಯಾರಿಸಿ, ಯೋಜನಾ ವೆಚ್ಚವನ್ನು ನಿಗದಿಪಡಿಸಿ ಶಂಕು ಸ್ಥಾಪನೆಗೆ ದಿನಾಂಕ ನಿಗದಿಪಡಿಸಲಿದೆ. ಚತುಷ್ಪಥ ರಸ್ತೆ, ವಸತಿ ಸೌಲಭ್ಯ, ಕಲಾ ಭವನ ಇತ್ಯಾದಿಗಳನ್ನು ಮಂದಿರ ಒಳಗೊಂಡಿರುತ್ತದೆ. ಪ್ರಸ್ತುತ 67 ಎಕರೆ ಜಮೀನು ಲಭ್ಯವಿದ್ದು, ಮುಂದೆ ಸುತ್ತಮುತ್ತಲಿನ ಹೆಚ್ಚುವರಿ ಜಮೀನನ್ನು ಪಡೆಯವುದಕ್ಕೆ ಟ್ರಸ್ಟ್‌ ಪ್ರಯತ್ನಿಸಲಿದೆ ಎಂದು ವಿವರಿಸಿದರು.

ಮನೆ ಮನೆಯಲ್ಲಿ ರಾಮ ನಾಮ ಜಪ, ಭಜನೆ: ಹಿಂದೂ ಸಂಸ್ಕೃತಿಯ ಪುನರುಜ್ಜೀವನ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ರಾಮ ಮಂದಿರ ನಿರ್ಮಾಣ ಸಾಂಕೇತಿಕ ಮಾತ್ರ. ಸಾತ್ವಿಕ ಬಲವಾಗಿ ಮನೆ ಮನೆಗಳಲ್ಲಿ 108 ರಾಮ ನಾಮ ಜಪ, ಭಜನೆ, ರಾಮಾಯಣ ವಾಚನ ಮತ್ತು ಪ್ರವಚನ ನಡೆಯಬೇಕು. ಈ ವಿಷಯವನ್ನು ಸಭೆಯಲ್ಲಿ ನಾನೇ ಪ್ರಸ್ತಾವಿಸಿದ್ದು, ಅದಕ್ಕೆ ಒಪ್ಪಿಗೆ ಲಭಿಸಿದೆ ಎಂದರು.

ರಾಮನವಮಿ ದಿನವಾದ ಏ.4ರಂದು ಶಿಲಾನ್ಯಾಸ ನೆರವೇರಿ ಸಲು ಉದ್ದೇಶಿಸಿದ್ದರೂ ಅಂದು 15ರಿಂದ 20 ಲಕ್ಷ ಜನರು ಅಯೋಧ್ಯೆಯಲ್ಲಿ ಸೇರುವ ನಿರೀಕ್ಷೆ ಇರುವುದರಿಂದ ಅಂದು ಶಂಕುಸ್ಥಾಪನೆ ಬೇಡವೆಂದು ಅಭಿಪ್ರಾಯಪಡಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು. ಏ.4ರಂದು ಪ್ರತಿ ಜಿಲ್ಲೆಯಲ್ಲಿ ರಾಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ವಿಶ್ವ ಹಿಂದೂ ಪರಿಷತ್ತಿನ ಪ್ರಾಂತೀಯ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್‌ ತಿಳಿಸಿದರು. ಪ್ರದೀಪ್‌ ಕುಮಾರ್‌ ಕಲ್ಕೂರ, ಕಾರ್ಪೊರೇಟರ್‌ ಶಕೀಲಾ ಕಾವ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.