ಪೌರ ಸೇವಕರಿಗೆ “ಕಾಣದಂತೆ ಮಾಯವಾದನು’ ವಿಶೇಷ ಪ್ರದರ್ಶನ
Team Udayavani, Feb 26, 2020, 7:00 AM IST
ಇತ್ತೀಚೆಗಷ್ಟೆ ಬಿಡುಗಡೆಯಾದ “ಕಾಣದಂತೆ ಮಾಯವಾದನು’ ಚಿತ್ರ ಬಿಡುಗಡೆ ಯಾದ ಎಲ್ಲ ಕೇಂದ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಮುನ್ನಡೆಯುತ್ತಿದೆ. ಇದೇ ವೇಳೆ ಚಿತ್ರತಂಡ, ಮೈಸೂರು ನಗರದ ಸುಮಾರು 3 ಸಾವಿರ ಪೌರಕಾರ್ಮಿಕರು ಮತ್ತವರ ಕುಟುಂಬದವರಿಗೆ ಉಚಿತವಾಗಿ ಚಿತ್ರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದೆ.
ಮೈಸೂರು ನಗರಕ್ಕೆ ಸ್ವಚ್ಛ ಭಾರತ ಅಭಿಯಾನದಲ್ಲಿ ಸ್ವಚ್ಛ ನಗರಿ ಎಂಬ ಹಿರಿಮೆ ಮುಡಿಗೇರಿರುವುದರಿಂದ, ಇದಕ್ಕೆ ಕಾರಣರಾದ ಮಹಾನಗರದ ಪೌರ ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಚಿತ್ರತಂಡ ಇಂಥದ್ದೊಂದು ವಿಭಿನ್ನ ಕಾರ್ಯಕ್ಕೆ ಮುಂದಾಗಿದೆ. ಇದೇ ಫೆ. 24 ರಿಂದ ಫೆ. 26 ವರೆಗೆ ಮೈಸೂರಿನ ವುಡ್ಲ್ಯಾಂಡ್ಸ್ ಚಿತ್ರಮಂದಿರದಲ್ಲಿ ಪ್ರತಿದಿನ ಸಂಜೆ 4.30 ಮತ್ತು 7.30ರ ಪ್ರದರ್ಶನ ವನ್ನು ಪೌರ ಕಾರ್ಮಿಕರಿಗೆ ಚಿತ್ರತಂಡ ವಿಶೇಷ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ವಿಕಾಸ್, ಸಿಂಧು ಲೋಕನಾಥ್, ಧರ್ಮಣ್ಣ ಕಡೂರ್, ಅಚ್ಯುತ ಕುಮಾರ್, ಸುಚೇಂದ್ರ ಪ್ರಸಾದ್, ವಿನಯಾ ಪ್ರಕಾಶ್, ಉದಯ್, ಭಜರಂಗಿ ಲೋಕಿ, ಸೀತಾ ಕೋಟೆ, ಬಾಬು ಹಿರಣ್ಣಯ್ಯ ಮೊದಲಾದವರು “ಕಾಣದಂತೆ ಮಾಯವಾದನು’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿ ದ್ದಾರೆ. ಸಸ್ಪೆನ್ಸ್ ಕಂ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಾಣದಂತೆ ಮಾಯ ವಾದನು’ ಚಿತ್ರಕ್ಕೆ ರಾಜ್ ಪತ್ತಿಪಾಟಿ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.