ಕ್ಷಿಪ್ರ ವಿಲೇವಾರಿಗೆ ವಿಶೇಷ ಕೋರ್ಟ್
ಅವಿಭಜಿತ ದ.ಕ. ಜಿಲ್ಲೆಯಲ್ಲಿ 400 ಪೋಕ್ಸೋ ಪ್ರಕರಣ ಬಾಕಿ
Team Udayavani, Feb 26, 2020, 6:16 AM IST
ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲಾಗುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ತ್ವರಿತ ವಿಲೇವಾರಿಗೆ ವಿಶೇಷ ಪೋಕ್ಸೋ ನ್ಯಾಯಾಲಯ ಶೀಘ್ರವೇ ಕಾರ್ಯಾಚರಿಸಲಿವೆ. ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ವಿಚಾರವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿ ಗಣಿಸಿದೆ. ಜಿಲ್ಲಾ ಮಟ್ಟದಲ್ಲಿ ವಿಶೇಷ ಪೋಕ್ಸೋ ನ್ಯಾಯಾಲಯವನ್ನು ನಿರ್ಮಿಸುವಂತೆ ಆದೇಶಿಸಿದ್ದು, ಇದರನ್ವಯ ರಾಜ್ಯದ 30 ಜಿಲ್ಲೆಗಳಲ್ಲಿ ವಿಶೇಷ ಕೋರ್ಟ್ ಕಾರ್ಯಾ ಚರಿಸಲಿದೆ.
ವಿಶೇಷ ಕೋರ್ಟ್ ಯಾಕೆ?
ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಒಟ್ಟಾರೆ ಒಂದೂವರೆ ಲಕ್ಷ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಆದರೆ ಇರುವ ಒಟ್ಟು ಪೋಕ್ಸೋ ನ್ಯಾಯಾಲಯಗಳ ಸಂಖ್ಯೆ ಗಣನೀಯವಾಗಿ ಕಡಿಮೆ. ಈ ನಿಟ್ಟಿನಲ್ಲಿ ಜಿಲ್ಲೆಗೆ ಒಂದರಂತೆ ವಿಶೇಷ ಪೋಕ್ಸೋ ಕೋರ್ಟ್ ನಿರ್ಮಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಸಂತ್ರಸ್ತೆಯರಿಗಾಗಿ ಕೊಠಡಿ
ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಪೋಕ್ಸೋ ಕೋರ್ಟ್ ನಿರ್ಮಿಸಲಾಗಿದೆ. ಇಲ್ಲಿ ಕೋರ್ಟ್ ಹಾಲ್ ಮತ್ತು ದೌರ್ಜನ್ಯಕ್ಕೆ ಒಳಗಾದ ಮಗು ಯಾವುದೇ ಅಂಜಿಕೆಯಿಲ್ಲದೆ ಸಾಕ್ಷ್ಯ ಹೇಳಲು ಅನುಕೂಲವಾಗುವಂತೆ ಸಂತ್ರಸ್ತೆ ಸಾಕ್ಷ್ಯ ಕೊಠಡಿಯನ್ನೂ ನಿರ್ಮಿಸಲಾಗಿದೆ.
400 ಪ್ರಕರಣಗಳು
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 400 ಪ್ರಕರಣಗಳು ವಿಚಾರಣೆಯ ವಿವಿಧ ಹಂತದಲ್ಲಿವೆ. ಮುಂದಿನ ದಿನಗಳಲ್ಲಿ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ಉಭಯ ಜಿಲ್ಲೆಗಳ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ.
ನ್ಯಾಯಾಧೀಶರ ನೇಮಕ
ಈ ವಿಶೇಷ ನ್ಯಾಯಾಲಯಗಳ ಸ್ಥಾಪನೆಗೆ ಅಗತ್ಯವಾಗಿರುವ ನ್ಯಾಯಾ
ಧೀಶರ ನೇಮಕ, ಸಿಬಂದಿ ಮತ್ತು ವಿಶೇಷ ಪೋಕ್ಸೋ ಅಭಿಯೋಜಕರ ನೇಮಕಾತಿ ಜವಾಬ್ದಾರಿ ಉಚ್ಚ ನ್ಯಾಯಾಲಯದ ಮೇಲಿದೆ. ಪ್ರಸ್ತುತ ಉಡುಪಿ, ದ.ಕ. ಜಿಲ್ಲೆಗೆ ವಿಶೇಷ ಪೋಕ್ಸೋ ಕೋರ್ಟ್ಗೆ ನ್ಯಾಯಾಧೀಶರ ನೇಮಕವಾಗಬೇಕಾಗಿದೆ.
ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳ ತ್ವರಿತ ವಿಲೇವಾರಿಗೆ ವಿಶೇಷ ಪೋಕ್ಸೋ ನ್ಯಾಯಾಲಯ ನಿರ್ಮಿಸಲಾಗಿದೆ.
-ರಾಘವೇಂದ್ರ ವೈ.ಟಿ., ಪೋಕ್ಸೋ ಸರಕಾರಿ ವಿಶೇಷ ಅಭಿಯೋಜಕ. ಉಡುಪಿ.
– ತೃಪ್ತಿ ಕುಮ್ರಗೋಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.