ಇಂಡಿಯನ್ 2 ಶೂಟಿಂಗ್ ಅವಘಡ: ಕಮಲ್ ಪತ್ರ ಬರೆದದ್ದು ಯಾರಿಗೆ?


Team Udayavani, Feb 26, 2020, 5:14 PM IST

Kamal-Hassan-730

ಚೆನ್ನೈ: ಸ್ಟಾರ್ ನಿರ್ದೇಶಕ ಶಂಕರ್ ನಿರ್ದೇಶನ ಮತ್ತು ಕಮಲ್ ಹಾಸನ್ ಅಭಿನಯದ ಇಂಡಿಯನ್-2 ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಫೆಬ್ರವರಿ 19ರಂದು ಸಂಭವಿಸಿದ ಕ್ರೇನ್ ದುರಂತದಲ್ಲಿ ಮೂವರು ಸಿಬ್ಬಂದಿಗಳು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಚಿತ್ರತಂಡವನ್ನು ಇನ್ನೂ ಕಾಡುತ್ತಿದೆ.

ಅದರಲ್ಲೂ ಈ ದುರಂತ ಸಂಭವಿಸಿದ ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾದ ನಾಯಕ ನಟ ಕಮಲ್ ಹಾಸನ್ ಅವರನ್ನು ಈ ಘಟನೆ ಬಹುವಾಗಿ ಕಾಡುತ್ತಿದೆಯಂತೆ. ಈ ಕುರಿತಾಗಿ ಕಮಲ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಲೈಕಾ ಪ್ರೊಡಕ್ಷನ್ ಸ್ಥಾಪಕಾಧ್ಯಕ್ಷರಾಗಿರುವ ಸುಭಾಸ್ಕರನ್ ಅವರಿಗೆ ಬರೆದಿರುವ ಪತ್ರವೊಂದು ಇದೀಗ ಟ್ವಿಟ್ಟರ್ ನಲ್ಲೂ ಹರಿದಾಡುತ್ತಿದೆ.

ಕಮಲ್ ಬರೆದಿರುವ ಪತ್ರದಲ್ಲೇನಿದೆ?
ಫೆಬ್ರವರಿ 19ರ ದುರಂತ ಘಟನೆಯ ಕುರಿತಾಗಿ ಲೈಕಾ ಪ್ರೊಡಕ್ಷನ್ ಮುಖ್ಯಸ್ಥರಿಗೆ ಕಮಲ್ ಬರೆದಿರುವ ಪತ್ರದಲ್ಲಿ ಶೂಟಿಂಗ್ ಸಂದರ್ಭದಲ್ಲಿ ಸಂಭವಿಸಬಹುದಾಗಿರುವ ಅವಘಡಗಳಿಗೆ ಸೂಕ್ತ ಮುಂಜಾಗರುಕತಾ ಕ್ರಮಗಳನ್ನು ವಹಿಸುವಂತೆ ಹಾಗೂ ಶೂಟಿಂಗ್ ಯೂನಿಟ್ ಸಿಬ್ಬಂದಿಗಳಿಗೆ ಸರಿಯಾದ ರೀತಿಯ ವಿಮೆ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಕುರಿತಾದಂತೆ ಕಮಲ್ ವಿವರವಾಗಿ ಬರೆದುಕೊಂಡಿದ್ದಾರೆ.

‘ಘಟನೆ ನಡೆದ ಸಂದರ್ಭದಲ್ಲಿ ನಾನು ಅಲ್ಲಿಂದ ಸ್ವಲ್ಪವೇ ದೂರದಲ್ಲಿದ್ದೆ, ಇಲ್ಲದಿದ್ದರೆ ಈ ದುರ್ಘಟನೆಯ ಸಂತ್ರಸ್ತರಲ್ಲಿ ನಾನೂ ಒಬ್ಬನಾಗಿರುತ್ತಿದ್ದೆ. ಈ ದುರ್ಘಟನೆ ಭೀಕರತೆಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಮತ್ತು ಈ ಘಟನೆಯಲ್ಲಿ ಸಂತ್ರಸ್ತರಾದವರಿಗೆ ಪರಿಹಾರವನ್ನು ನಿಡಿದ ಮಾತ್ರಕ್ಕೆ ನಮ್ಮ ಜವಾಬ್ದಾರಿ ಮುಕ್ತಾಯಗೊಳ್ಳಬಾರದು. ಒಂದು ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಹಲವರು ಕೆಲಸ ಮಾಡುತ್ತಾರೆ, ಅವರೆಲ್ಲರ ಭದ್ರತೆ ಮತ್ತು ಜೀವರಕ್ಷಣೆಗೆ ನಿರ್ಮಾಣ ಸಂಸ್ಥೆಗಳು ಸೂಕ್ತ ಕ್ರಮ ಕೈಗೊಳ್ಳುವುದು ಅತ್ಯಗತ್ಯ.’ ಎಂದು 65 ವರ್ಷ ಪ್ರಾಯದ ನಟ ತಮ್ಮ ಪತ್ರದಲ್ಲಿ ಬರೆದುಕೊಂಡಿದ್ದಾರೆ.

‘ಕಲಾವಿದರು, ಶೂಟಿಂಗ್ ಸಿಬ್ಬಂದಿಗಳು ಮತ್ತು ಇತರೇ ತಂತ್ರಜ್ಞರ ರಕ್ಷಣೆಗಾಗಿ ನಿರ್ಮಾಣ ಸಂಸ್ಥೆ ತೆಗೆದುಕೊಂಡಿರುವ ಕ್ರಮಗಳ ಕುರಿತಾಗಿ ನಾನು ತಿಳಿದುಕೊಳ್ಳಲು ಬಯಸುತ್ತೇನೆ. ಮತ್ತು ಇವರಿಗೆಲ್ಲಾ ಒದಗಿಸಲಾಗಿರುವ ವಿಮಾ ಮಾಹಿತಿಗಳನ್ನೂ ನಾನು ತಿಳಿದುಕೊಳ್ಳಬೇಕಾಗಿದೆ. ಮತ್ತು ಈ ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರಿಗೆ ಉತ್ತಮ ಚಿಕಿತ್ಸೆ ಕೊಡಿಸುವ ಜವಾಬ್ದಾರಿಯೂ ನಿರ್ಮಾಣ ಸಂಸ್ಥೆಯ ಮೇಲಿದೆ’ ಎಂದು ಕಮಲ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.


ಶೂಟಿಂಗ್ ಸಂದರ್ಭದಲ್ಲಿ ಲೈಟಿಂಗ್ ವ್ಯವಸ್ಥೆಗಾಗಿ ಅಳವಡಿಸಲಾಗಿದ್ದ ಬೃಹತ್ ಕ್ರೇನೊಂದು ಉರುಳಿಬಿದ್ದು ಮೂವರು ಶೂಟಿಂಗ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದರು ಹಾಗೂ ಒಂಭತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಕಮಲ್ ಹಾಸನ್, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಸಿದ್ದಾರ್ಥ್ ಮತ್ತು ಪ್ರಿಯಾ ಭವಾನಿ ಶಂಕರ್ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿರುವ ‘ಇಂಡಿಯನ್-2’ ಚಿತ್ರವನ್ನು ಎಸ್. ಶಂಕರ್ ಅವರು ನಿರ್ದೇಶಿಸುತ್ತಿದ್ದು, 1996ರಲ್ಲಿ ತೆರೆಕಂಡು ಯಶಸ್ವಿಯಾಗಿದ್ದ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗ ಇದಾಗಿದೆ. ಈ ಚಿತ್ರ 2021ರಲ್ಲಿ ತೆರೆ ಕಾಣುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.