ನಿರ್ವಹಣೆಯಿಲ್ಲದೇ ಸೊರಗಿ ಹೋಗಿದೆ ಮಲ್ಲಾರು ಕೋಟೆ ಸೇತುವೆ

ಅಪಾಯಕಾರಿಯಾಗುತ್ತಿದೆ ಸೇತುವೆ ಮೇಲಿನ ಸಂಚಾರ

Team Udayavani, Mar 3, 2020, 5:41 AM IST

Mallaru-Fort-Bridge

ಕಾಪು: ಉಡುಪಿ-ಮಂಗಳೂರು ನಡುವೆ ಹಾದು ಹೊಗುವ ರಾ. ಹೆ. 66ರ ಕಾಪು ಕೊಪ್ಪಲಂಗಡಿ – ಮಲ್ಲಾರು ಕೋಟೆ ರಸ್ತೆಯಲ್ಲಿ ಐದು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಕಿರು ಸೇತುವೆಯೊಂದು ನಿರ್ವಹಣೆಯ ಕೊರತೆಯಿಂದಾಗಿ ಸೊರಗಿ ಹೋಗಿದೆ. ಸೇತುವೆಯ ಮೇಲಿನ ಸಂಚಾರ ದಿನದಿಂದ ದಿನಕ್ಕೆ ಅಪಾಯಕಾರಿಯಾಗುತ್ತಿದೆ.

ಕಾಪು ಕ್ಷೇತ್ರದ ಮಾಜಿ ಶಾಸಕ, ಕರ್ನಾಟಕ ಸರಕಾರದ ಮುಖ್ಯ ಸಚೇತಕರಾಗಿದ್ದ ದಿ| ಭಾಸ್ಕರ ಶೆಟ್ಟಿ ಅವರ ಕಾಲದಲ್ಲಿ ನಿರ್ಮಾಣಗೊಂಡಿದ್ದ ಮಲ್ಲಾರು ಕೋಟೆ ರೋಡ್‌ನ‌ ಸೇತುವೆಯು ನಿರ್ಮಾಣಗೊಂಡು 50 ವರ್ಷಗಳು ಕಳೆದರೂ ಆ ಬಳಿಕ ಒಮ್ಮೆಯೂ ಸೇತುವೆಗೆ ಟಚ್‌ ಆಪ್‌ ನೀಡುವ ಕೆಲಸ ಕೂಡಾ ಇದುವರೆಗೆ ನಡೆಯದೇ ಇರುವುದು ವಿಪರ್ಯಾಸವಾಗಿದೆ.

ನೂರಾರು ವಾಹನಗಳ ಓಡಾಟ
ಸೇತುವೆಯ ಮೇಲಿನಿಂದ ನಿರಂತರ ವಾಗಿ ವಾಹನಗಳು ಓಡಾಡುತ್ತಿರುತ್ತವೆ. ಗ್ರಾಮೀಣ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಖಾಸಗಿ ಸರ್ವೀಸ್‌ ಬಸ್ಸುಗಳು ಈ ಸೇತುವೆ ಮೂಲಕವಾಗಿ ಅರ್ಧ ಗಂಟೆಗೊಮ್ಮೆ ಸಂಚರಿಸುತ್ತಿರುತ್ತವೆ. ಸರಕು ವಾಹನಗಳ ಓಡಾಟದೊಂದಿಗೆ, ಪ್ರತೀ ನಿತ್ಯ ಹತ್ತಾರು ಶಾಲಾ ವಾಹನಗಳು ಮಕ್ಕಳನ್ನು ಹೊತ್ತುಕೊಂಡು ತಿರುಗಾಡುತ್ತಿರುತ್ತವೆ.

ಸಂಪರ್ಕ ಸೇತುವೆ
ಮುಂದೆ ಸಾಗುವಾಗ ಸಿಗುವ ಮಲ್ಲಾರು ಕೋಟೆ ರೋಡ್‌ನ‌ ಸೇತುವೆಯು ಹತ್ತಾರು ಊರುಗಳಿಗೆ ತೆರಳುವ ಜನರ ಪಾಲಿನ ಮುಖ್ಯ ಸಂಪರ್ಕ ಸೇತುವಾಗಿದೆ. ಮಲ್ಲಾರು ಗ್ರಾಮದ ಮಲ್ಲಾರು ರಾಣ್ಯಕೇರಿ, ಗರಡಿ, ಕುಪ್ಪೆಟ್ಟು, ಪಕೀರಣಕಟ್ಟೆ, ಗುರ್ಮೆ ಮಾತ್ರವಲ್ಲದೇ ಬೆಳಪು, ಕುತ್ಯಾರು, ಪಣಿಯೂರು, ಎಲ್ಲೂರು, ಮುದರಂಗಡಿ ಗ್ರಾಮಗಳೊಳಗೆ ಸಂಚರಿಸುವ ಜನರಿಗೆ ಹತ್ತಿರದ ಸಂಪರ್ಕಕ್ಕೆ ಈ ರಸ್ತೆ ಬಳಕೆಯಲ್ಲಿದೆ. ಈ ರಸ್ತೆಯು ಸಾವಿರಾರು ಮನೆಗಳಿಗೆ ಸಂಪರ್ಕ ಕಲ್ಪಿಸುತ್ತದೆ.

ಸೇತುವೆಯ ಈಗಿನ ಸ್ಥಿತಿ ಹೇಗಿದೆ ?
ಮಲ್ಲಾರು ಕೋಟೆ ರೋಡ್‌ನ‌ ಈ ಸೇತುವೆಯು ಈಗ ತುಂಬಾ ಕ್ಷೀಣ ಸ್ಥಿತಿಯಲ್ಲಿದೆ. ಸೇತುವೆಯ ತಡೆಗೋಡೆಗಳು ಮುರಿದು ಹೋಗಿದ್ದು, ವಾಹನಗಳು ಓಡಾಡುವಾಗ ತಡೆಗೋಡೆಗಳು ಪಟಪಟನೆ ಅಲ್ಲಾಡುತ್ತವೆ. ಸೇತುವೆಯ ಅಡಿ ಭಾಗ ಸಹ ಸೊರಕಲಾಗಿದೆ. ಅಲ್ಲಲ್ಲಿ ಸೇತುವೆಯ ರಾಡ್‌ಗಳು ಎದ್ದು ಕಾಣುತ್ತಿದ್ದು, ಕೆಲವೆಡೆ ರಾಡ್‌ಗಳು ತುಕ್ಕು ಹಿಡಿದು ಹೋಗಿವೆ. ಯಾವಾಗ ಏನು ಬೇಕಾದರೂ ಆಗಬಹುದು ಎನ್ನುವ ಸ್ಥಿತಿ ಸೇತುವೆಯನ್ನು ಕಂಡಾಗ ಗಮನಕ್ಕೆ ಬರುತ್ತದೆ.

ಕೇಂದ್ರ ಸರಕಾರದ ಅನುದಾನವನ್ನು ಬಳಸಿಕೊಂಡು ಸೇತುವೆಯನ್ನು ನಿರ್ಮಿಸಲಾಗಿತ್ತು. ಅಂದು ಇದಕ್ಕೆ 80 ಸಾವಿರ ರೂ. ನಿಂದ 1 ಲಕ್ಷ ರೂ. ವರೆಗೆ ಖರ್ಚಾಗಿರಬಹುದು ಎಂಬ ಮಾಹಿತಿ ಸ್ಥಳೀಯರಿಂದ ದೊರಕಿದೆ.
ಪುರಸಭೆಯಾಗಿ ಮೇಲ್ದರ್ಜೆ ಗೇರಿದರೂ ಸೇತುವೆಗೆ ಸಿಕ್ಕಿಲ್ಲ ಕಾಯಕಲ್ಪಹಿಂದೆ ಮಲ್ಲಾರು ಗ್ರಾಮ ಪಂಚಾಯತ್‌ ಅಧೀನದಲ್ಲಿದ್ದು ಜಿಲ್ಲಾ ಪಂಚಾಯತ್‌ ಅಧೀನ ರಸ್ತೆಯಾಗಿ ಗುರುತಿಸಲ್ಪಟ್ಟಿದ್ದ ಮಲ್ಲಾರು ಕೋಟೆ ರಸ್ತೆ ಸೇತುವೆಯು, ಪ್ರಸ್ತುತ ಕಾಪು ಪುರಸಭೆಯ ಅಧೀನದಲ್ಲಿದೆ. ಮಲ್ಲಾರು ಗ್ರಾಮವು ಕಾಪು ಪುರಸಭೆಯ ಭಾಗವಾಗಿ ಪಂಚಾಯತ್‌ ಮಟ್ಟದಿಂದ ಪೌರಾಡಳಿತ ಪ್ರದೇಶವಾಗಿ ಮೇಲ್ದರ್ಜೆಗೇರಿದರೂ ಮಲ್ಲಾರು ಗ್ರಾಮಕ್ಕೆ ಸಂಪರ್ಕ ಸಾಧಿಸುವ ಈ ಸೇತುವೆಗೆ ಮಾತ್ರಾ ಇನ್ನೂ ಕೂಡಾ ಕಾಯಕಲ್ಪದ ಭಾಗ್ಯವೇ ಸಿಕ್ಕಿಲ್ಲ ಎನ್ನುವುದು ಗ್ರಾಮಸ್ಥರ ಅಳಲಾಗಿದೆ.

ಅಪಾಯ ಆಹ್ವಾನ
ರಾ. ಹೆ. 66ರ ಕೊಪ್ಪಲಂಗಡಿ ಮಲ್ಲಾರು ಕೋಟೆ ಪಕೀರ್ಣಕಟ್ಟೆಗೆ ಹೋಗುವ ರಸ್ತೆಯಿದೆ. ಇದನ್ನು ಭಾಸ್ಕರ ಶೆಟ್ಟಿ ಅವರು ಶಾಸಕರಾಗಿದ್ದಾಗ ಕೇಂದ್ರ ಸರಕಾರದ ಅನುದಾನದಲ್ಲಿ ನಿರ್ಮಿಸಲಾಗಿದೆ. ಈ ರಸ್ತೆಗೆ ಅಡ್ಡವಾಗಿರುವ ಚಿಕ್ಕ ನದಿಗೆ ಒಂದು ಕಿರು ಸೇತುವೆಯನ್ನು ಆಗಲೇ ನಿರ್ಮಿಸಲಾಗಿದೆ. ಸೇತುವೆಯು ಅತ್ಯಂತ ಕಿರಿದಾಗಿದ್ದು, ವರ್ಷದಿಂದ ವರ್ಷಕ್ಕೆ ಶಿಥಿಲಗೊಳ್ಳುತ್ತಿದೆ. ಸೇತುವೆಯ ಪುನರುಜ್ಜೀವನಕ್ಕೆ ಪುರಸಭೆ, ಶಾಸಕರು ಮತ್ತು ಸಂಸದರು ಕೂಡಲೇ ಎಚ್ಚೆತ್ತುಕೊಳ್ಳಬೇಕಿದೆ.
-ಅಕºರ್‌ ಅಲಿ ಮಲ್ಲಾರು, ಸ್ಥಳೀಯ ನಿವಾಸಿ

ಪುನರ್‌ ನಿರ್ಮಾಣಕ್ಕೆ ಯೋಜನೆ
ಮಲ್ಲಾರು ಕೋಟೆ ರೋಡ್‌ ರಸ್ತೆಯಲ್ಲಿನ ಪುರಾತನ ಸೇತುವೆ ಪುನರ್‌ ನಿರ್ಮಾಣದ ಬಗ್ಗೆ ಸ್ಥಳೀಯರಿಂದ ಮತ್ತು ಪುರಸಭೆಯಿಂದ ಮನವಿ ಬಂದಿದೆ. ರಾಜ್ಯದಲ್ಲಿ ಪ್ರವಾಹ ಉಂಟಾಗಿ ನೆರೆ ಪರಿಹಾರ ಕಾರ್ಯಾಚರಣೆಗೆ ಹೆಚ್ಚಿನ ಅನುದಾನ ಬಳಕೆಯಾಗಿರುವುದರಿಂದ ಕಾಮಗಾರಿಗೆ ಚಾಲನೆ ನೀಡಲು ಸಾಧ್ಯವಾಗಿಲ್ಲ. ಬಜೆಟ್‌ನಲ್ಲಿ ಶಾಸಕರ ನಿಧಿಯ ಅನುದಾನವನ್ನು ಬಳಸಿಕೊಂಡು, ಅಗತ್ಯ ಬಿದ್ದರೆ ಸರಕಾರದ ಮುಂದೆ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ ಸೇತುವೆ ಪುನರ್‌ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುವುದು.
-ಲಾಲಾಜಿ ಆರ್‌. ಮೆಂಡನ್‌, ಶಾಸಕರು, ಕಾಪು

ಟಾಪ್ ನ್ಯೂಸ್

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?

HDK

CM Post: ಅಧಿಕಾರಕ್ಕಾಗಿ ಜೆಡಿಎಸ್‌ಗೆ ಸಿದ್ದರಾಮಯ್ಯ ದ್ರೋಹ: ಎಚ್‌.ಡಿ.ಕುಮಾರಸ್ವಾಮಿ

ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

Udupi: ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

1-himm

Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

Udupi: ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

wages

Udupi: ಬಾಂಗ್ಲಾ ಅಕ್ರಮ ವಲಸೆ ಫಾಲೋ ಅಪ್: ನೆಪಕ್ಕಷ್ಟೇ ಬಿಹಾರ, ಒಡಿಶಾ, ಅಸ್ಸಾಂ…

\172.17.1.5ImageDirUdayavaniDaily13-10-24Daily_NewsBangla.tif

Udupi: ಬಾಂಗ್ಲಾದಿಂದ ಭಾರತಕ್ಕೆ ವಲಸೆಯ ಉದ್ದೇಶ?

Udupi: ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು?

Udupi: ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು?

Udupi: ಅಪರಿಚಿತರಿಗೆ ಮನೆ ಬಾಡಿಗೆ ಕೊಡುವಾಗ ಇರಲಿ ಎಚ್ಚರ

Udupi: ಅಪರಿಚಿತರಿಗೆ ಮನೆ ಬಾಡಿಗೆ ಕೊಡುವಾಗ ಇರಲಿ ಎಚ್ಚರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

HDK

CM Post: ಅಧಿಕಾರಕ್ಕಾಗಿ ಜೆಡಿಎಸ್‌ಗೆ ಸಿದ್ದರಾಮಯ್ಯ ದ್ರೋಹ: ಎಚ್‌.ಡಿ.ಕುಮಾರಸ್ವಾಮಿ

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.